ಪಿಎಸ್ಐ & ಪಿಸಿ ನೇಮಕಾತಿ ಭರ್ಜರಿ ಗುಡ್ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ಪಿಎಸ್ಐ & ಪಿಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಭರ್ಜರಿ ಗುಡ್ನ್ಯೂಸ್ ನೀಡಿದೆ. ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿದ್ದಾರೆ. ಬೆಂಗಳೂರು ನಗರದಲ್ಲಿ ಹೊಸದಾಗಿ ಮೂರು ವಿಭಾಗಗಳನ್ನು ಮಾಡಲಾಗಿದೆ. ಸಿಐಡಿಯಲ್ಲಿ ಠೇವಣಿ ವಂಚನೆ ಮತ್ತು ಕ್ರಿಮಿನಲ್ ಗುಪ್ತಚರ ಘಟಕವನ್ನು ಮಾಡಲಾಗಿದೆ. ಬೆಳ್ತಂಗಡಿಯಲ್ಲಿ ಸಿಐಡಿ ಉಪ ವಿಭಾಗವನ್ನು ಸ್ಥಾಪನೆ ಮಾಡಲಾಗಿದೆ. ಅನೇಕ ಘಟನೆಗಳು ಮತ್ತು ಪ್ರಕರಣಗಳು ಬರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಸಿಐಡಿ ಉಪವಿಭಾಗ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್ 112 ಸಹಾಯವಾಣಿಗೆ ಪ್ರತಿದಿನ ರಾಜ್ಯದಾದ್ಯಂತ 24 ಸಾವಿರ ಕರೆಗಳು ಬರುತ್ತಿವೆ. 1400 ದೂರುಗಳಿಗೆ ನಮ್ಮ ಸಿಬ್ಬಂದಿಗಳು ಸ್ಪಂದಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 112 ಸಹಾಯವಾಣಿ ದೂರುಗಳಿಗೆ 6.59 ನಿಮಿಷದಲ್ಲಿ ಸ್ಪಂದಿಸುತ್ತಾರೆ. ಗ್ರಾಮೀಣ ಭಾಗದಲ್ಲಿ 13.58 ನಿಮಿಷದಲ್ಲಿ ಘಟನಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದರು.

ಇಲಾಖೆಯ ಪೊಲೀಸ್ ಸಿಬ್ಬಂದಿಗಳಿಗೆ ಪೊಲೀಸ್ ಗೃಹ ಯೋಜನೆಯಡಿ 10,034 ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ. ಶೇ. 33ರಷ್ಟು ಸಿಬ್ಬಂದಿಗಳಿಗೆ ಪೊಲೀಸ್ ವಸತಿ ಲಭ್ಯವಾಗಿದೆ. ಶೇ.60 ರಿಂದ 80ರಷ್ಟು ಸಿಬ್ಬಂದಿಗಳಿಗೆ ವಸತಿ ಕಲ್ಪಿಸುವ ಗುರಿ ಹೊಂದಲಾಗಿದ್ದು, ಹಂತಹಂತವಾಗಿ ಈಡೇರಿಸಲಾಗುವುದು ಎಂದಿದ್ದಾರೆ.
ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮನೆಮನೆಗೆ ಪೊಲೀಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೊಲೀಸ್ ಅಂದ ತಕ್ಷಣ ಭಯದ ವಾತವಾರಣ ಇದೆ. ಇದನ್ನು ನಿವಾರಿಸಲು ಮನೆಮನೆಗೆ ಪೊಲೀಸ್ ಸಹಕಾರಿಯಾಗುತ್ತಿದೆ. ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಶೇ. 95ರಷ್ಟು ಪೂರ್ಣಗೊಂಡಿದೆ. ಪೊಲೀಸ ಸುರಕ್ಷತೆ ಮತ್ತು ಪಾರದರ್ಶಕತೆಯ ನಿಟ್ಟಿನಲ್ಲಿ ಬಾಡಿವೋರ್ನ್ ಕ್ಯಾಮೆರಾಗಳನ್ನು ಒದಗಿಸಲಾಗಿದೆ ಎಂದರು.
ಒಂಬತ್ತು ಸಾವಿರ ಎಐ ಕ್ಯಾಮೆರಾ: ಬೆಂಗಳೂರು ನಗರದಲ್ಲಿ 160 ಪ್ರಮುಖ ಜಂಕ್ಷನ್ಗಳಲ್ಲಿ 9 ಸಾವಿರ ಎಐ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಯಾವುದೇ ರೀತಿಯ ಘಟನೆ ನಡೆದರ ಕಂಟ್ರೋಲ್ ರೂಮ್ಗೆ ಲೈವ್ಫೀಡ್ ಸಿಗುತ್ತಿದೆ. ಇತರೆ 7 ಲಕ್ಷ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯವನ್ನು ಆಧುನೀಕರಗೊಳಿಸಲಾಗಿದ್ದು, ಎರಡು ತಿಂಗಳಲ್ಲಿ ವರದಿ ಲಭ್ಯವಾಗುತ್ತಿದೆ. ಇಡೀ ದೇಶದಲ್ಲಿ ಉತ್ತಮ ವಿಧಿವಿಜ್ಞಾನ ಪ್ರಯೋಗಾಲಯವಿದೆ ಎಂದು ಹೇಳಿದರು.
600 ಪಿಎಸ್ಐ ನೇಮಕಾತಿ: ಹಿಂದಿನ ಸರ್ಕಾರ ಅವಧಿಯಲ್ಲಿ 545 ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದಿಂದ ಪೊಲೀಸ್ ನೇಮಕಾತಿಗೆ ತೊಂದರೆ ಉಂಟಾಯಿತು. ಸಾವಿರಾರು ಹುದ್ದೆಗಳು ಖಾಲಿ ಉಳಿದಿದ್ದವು. ರೂಲ್ 32 ಅಡಿ ಬಡ್ತಿ ನೀಡಲಾಯಿತು. 545 ಪಿಎಸ್ಐ ನೇಮಕಾತಿಯಲ್ಲಿಮ ಸಮಸ್ಯೆಯನ್ನು ಬಗೆಹರಿಸಿ ತರಬೇತಿಗೆ ಕಳುಹಿಸಲಾಗಿದೆ. 402 ಪಿಎಸ್ಐ ನೇಮಕಾತಿಯು ಪೂರ್ಣಗೊಂಡಿದ್ದು ತರಬೇತಿಗೆ ಕಳುಹಿಸಲಾಗುತ್ತಿದೆ. ಇನ್ನೂ 600 ಪಿಎಸ್ಐ ಹುದ್ದೆಗಳು ಖಾಲಿ ಇದ್ದು, ಅಧಿಸೂಚನೆ ಹೊರಡಿಸಲಾಗುವುದು.
4500 ಪಿಸಿ ನೇಮಕಾತಿ: 4500 ಪೊಲೀಸ್ ಕಾನ್ಸ್ಟೇಬಲ್ಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಒಳಮೀಸಲಾತಿ ಪ್ರಕ್ರಿಯೆಯಿಂದ ಒಟ್ಟು 75 ಸಾವಿರ ಹುದ್ದೆಗಳ ಭರ್ತಿಗೆ ಸಾಧ್ಯವಾಗಿಲ್ಲ. ನಾಳೆ ಸಂಜೆ ಸಿಎಂ ಅವರು ಸಭೆ ಕರೆದಿದ್ದಾರೆ. ಇದು ಬಗೆಹರಿದರೆ, ಇಲಾಖೆಯಲ್ಲಿನ ಒಟ್ಟು 8 ಸಾವಿರ ನೇಮಕಾತಿಗೂ ಅಧಿಸೂಚನೆ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications