ಪಿಎಸ್ಐ ಜಗದೀಶ್ ಪಿಸ್ತೂಲ್ ಕರ್ನೂಲ್ನಲ್ಲಿ ಪತ್ತೆ
ಬೆಂಗಳೂರು, ಅಕ್ಟೋಬರ್ 22 : ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಗದೀಶ್ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಜಗದೀಶ್ ಅವರ ಪಿಸ್ತೂಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಧು ಮತ್ತು ಹರೀಶ್ ಬಾಬು ಅವರು ಜಗದೀಶ್ ಹತ್ಯ ನಂತರ ಪಿಸ್ತೂಲ್ ಕಸಿದುಕೊಂಡು ಪರಾರಿಯಾಗಿದ್ದರು.
ಜಗದೀಶ್ ಅವರನ್ನು ಹತ್ಯೆ ಮಾಡಿದ ಆರೋಪಿಗಳಾದ ಮಧು ಮತ್ತು ಹರೀಶ್ ಬಾಬು ಅವರು ಕರ್ನೂಲ್ನಲ್ಲಿನ ಹನುಮಂತರಾಯ ಎಂಬುವವರಿಗೆ ಪಿಸ್ತೂಲ್ ಅವನ್ನು ಮಾರಾಟ ಮಾಡಿ ಅವರಿಂದ 5 ಸಾವಿರ ರೂ. ಹಣ ಪಡೆದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. [ಮಧು, ಹರೀಶ್ ಬಾಬು ಬೆಂಗಳೂರಿಗೆ]

ಪಿಸ್ತೂಲ್ ಎಲ್ಲಿದೆ? ಎಂದು ತನಿಖೆ ಆರಂಭಿಸಿದ್ದ ಪೊಲೀಸರು ಹನುಮಂತರಾಯ ಅವರನ್ನು ಪತ್ತೆ ಹಚ್ಚಿ ಪಿಸ್ತೂಲ್ ಅವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹನುಮಂತರಾಯ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. [ಮಧು ಮತ್ತು ಹರೀಶ್ ಬಾಬು ಪೊಲೀಸರಿಗೆ ಸಿಕ್ಕಿದ್ದು ಹೇಗೆ?]
ಅಕ್ಟೋಬರ್ 16ರ ಶುಕ್ರವಾರ ಮಧ್ಯಾಹ್ನ ನೆಲಮಂಗಲ ಬಳಿ ತಮ್ಮನ್ನು ಹಿಡಿಯಲು ಬಂದ ದೊಡ್ಡಬಳ್ಳಾಪುರ ಠಾಣೆ ಪಿಎಸ್ಐ ಜಗದೀಶ್ ಅವರನ್ನು ಹತ್ಯೆ ಮಾಡಿದ್ದ ಮಧು ಮತ್ತು ಹರೀಶ್ ಬಾಬು ಅವರು, ಜಗದೀಶ್ ಅವರ ಪಿಸ್ತೂಲ್ ಮತ್ತು ಪೇದೆ ವೆಂಕಟೇಶಮೂರ್ತಿ ಅವರ ಬೈಕ್ ಕದ್ದು ಪರಾರಿಯಾಗಿದ್ದರು. [ಜಗದೀಶ್ ಕೊಂದವರು ನಾಗ್ಪುರದಲ್ಲಿ ಸಿಕ್ಕಿಬಿದ್ರು]
ಅಕ್ಟೋಬರ್ 19ರ ಸೋಮವಾರ ಸಂಜೆ ಇಬ್ಬರು ಆರೋಪಿಗಳು ನಾಗ್ಪುರ ರೈಲ್ವೆ ನಿಲ್ದಾಣದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ನಾಗ್ಪುರಕ್ಕೆ ತೆರಳಿದ್ದ ಕರ್ನಾಟಕದ ಪೊಲೀಸರು ಬುಧವಾರ ರಾತ್ರಿ ಇಬ್ಬರು ಆರೋಪಿಗಳನ್ನು ಬೆಂಗಳೂರಿಗೆ ಕರೆತಂದಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications