ಪಿಎಸ್ಸೈ ಬಂಡೆ ಸಾವಿಗೆ ಶಿಂದೆ ಆದೇಶ ಮುಳುವಾಯಿತೇ?
ಗುಲ್ಬರ್ಗ, ಜ.18: ತಾಜಾ ವರದಿಗಳ ಪ್ರಕಾರ ಪಿಎಸ್ಸೈ ಮಲ್ಲಿಕಾರ್ಜುನ ಬಂಡೆ ಸಾವಿನ ಪ್ರಕರಣದ ನಂತರ ಈಶಾನ್ಯ ವಲಯ ಐಜಿಪಿ ವಜೀರ್ ಅಹಮದ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಅವರನ್ನು ಪೊಲೀಶ್ ತರಬೇತಿ ಅಕಾಡೆಮಿಗೆ ವರ್ಗಾಯಿಸಲಾಗಿದೆ. ಇದೇ ವೇಳೆ ಪಿಎಸ್ಸೈ ಬಂಡೆ ಸಾವಿನ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಲಾಗಿದೆ.

ಈ ಮಧ್ಯೆ, ಪಿಎಸ್ಸೈ ಬಂಡೆ ಸಾವಿಗೆ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಅವರು ಇತ್ತೀಚೆಗೆ ರಾಜ್ಯ ಸರಕಾರಗಳಿಗೆ ನೀಡಿದ್ದ ಆದೇಶವೂ ಮುಳುವಾಯಿತಾ? ಎಂಬ ಅನುಮಾನ ವ್ಯಕ್ತವಾಗಿದೆ. ಅಲ್ಪಸಂಖ್ಯಾತರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳುವಾಗ ಎರಡೆರಡು ಬಾರಿ ಯೋಚಿಸಿ, ಕ್ರಮ ಕೈಗೊಳ್ಳಿ ಎಂಬರ್ಥದ ಸಂದೇಶವನ್ನು ಕೇಂದ್ರ ಗೃಹ ಸಚಿವರು ಇತ್ತೀಚೆಗೆ ಎರಡೆರಡು ಬಾರಿ ರಾಜ್ಯ ಸರಕಾರಗಳಿಗೆ ನೀಡಿದ್ದರು.
ಇದನ್ನು ಶಿರಸಾವಹಿಸಿ ಪಾಲಿಸಿದ ಐಜಿಪಿ ವಜೀರ್ ಅಹಮದ್ ಅವರು ತುಸು ಹೆಚ್ಚೇ ಭ್ರಾತೃಪ್ರೇಮದೊಂದಿಗೆ ಪಾತಕಿ ಮುನ್ನಾನನ್ನು ರಕ್ಷಿಸಲು ಹೋಗಿದ್ದಾರೆ. ಆ ಕಾರ್ಯದಲ್ಲಿ ತಮ್ಮ ಇಲಾಖೆಯ ಪೊಲೀಸರಿಗೆ ರಕ್ಷಣೆ ನೀಡುವುದರ ಬಗ್ಗೆ ಯೋಚಿಸದೆ ಅನಾಹುತವೆಸಗಿದ್ದಾರೆ ಎಂದು ಗಿರೀಶ್ ಮಟ್ಟೆಣ್ಣವರ್ ಇಂದಿನ ಉದಯವಾಣಿ ಪತ್ರಿಕೆಯಲ್ಲಿ ಬರೆದಿದ್ದಾರೆ. ( ಮುಸ್ಲಿಂ ಯುವಕರನ್ನು ಬಂಧಿಸಬೇಡಿ: ಶಿಂದೆ ಫರ್ಮಾನು )
ತಮ್ಮ ಪೊಲೀಸ್ ಬುದ್ಧಿಯಿಂದ ಸಾಂದರ್ಭಿಕ ಸಾಕ್ಷ್ಯಗಳನ್ನೆಲ್ಲಾ ಎದುರಿಗಿಟ್ಟುಕೊಂಡು ವಿಶ್ಲೇಷಣೆ ಮಾಡಿರುವ ಗಿರೀಶ್ ಮಟ್ಟೆಣ್ಣವರ್ ಅವರು ಪಿಎಸ್ಸೈ ಮಲ್ಲಿಕಾರ್ಜುನ ಬಂಡೆ ಸಾವಿಗೆ ಸರಕಾರ/ ಇಲಾಖೆಯ ವೈಫ್ಯವೇ ಕಾರಣ ಎಂದು ಅರ್ಥೈಸಿದ್ದಾರೆ.
ವಜೀರ್ ಅಹಮದ್ ಅವರ ನಡುವಳಿಕೆ ಪ್ರಶ್ನಾರ್ಹವಾಗಿದೆ. ಹತ್ಯೆಯಾದ ಮುನ್ನಾಗೆ ಭೂಗತ ಪಾತಕಿಗಳ ಸಂಪರ್ಕವಿದೆ ಎಂಬ ಮಾಹಿತಿಯಿದ್ದರೂ ಸರಿಯಾದ ಪ್ಲಾನ್ ಹಾಕಿಕೊಳ್ಳದೆ, ಕಡಿಮೆ ಸಿಬ್ಬಂದಿಯನ್ನು ಕಳುಹಿಸಿದ್ದು ಯಾಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಹೀಗಾಗಿ ವಜೀರ್ ಮೊಬೈಲ್ ವಶಕ್ಕೆ ಪಡೆದುಕೊಂಡು ಅವರು ಯಾರೊಂದಿಗೆ ಸಂಪರ್ಕ ಇಟ್ಟಕೊಂಡಿದ್ದರು ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಸಹ ಆಗ್ರಹಿಸಿದ್ದಾರೆ.
ವಜೀರ್ ಅಹಮದ್ ಐಜಿಪಿ ಆಗಿರುವವರೆಗೂ ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯವನ್ನು ಗುಲ್ಬರ್ಗಾದ ಬಹುತೇಕ ಪೊಲೀಸರು ಸಹ ವ್ಯಕ್ತಪಡಿಸಿದ್ದಾರೆ. ಹೀಗಾಗಿ ತಕ್ಷಣವೇ ಅವರನ್ನು ವಾಪಸ್ ಕರೆಸಿಕೊಂಡು ಇಡೀ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಗಳು ಹೆಚ್ಚಾಗುತ್ತಿವೆ.
'ಒಂದು ವೇಳೆ ಪಿಎಸ್ಸೈ ಮಲ್ಲಿಕಾರ್ಜುನ ಬಂಡೆ ಬದುಕುಳಿದಿದ್ದರೆ ಮೊದಲು ಮಾನವ ಹಕ್ಕು ಹೋರಾಟಗಾರರು ಹುರಿದು ಮುಕ್ಕುತ್ತಿದ್ದರು. ಸಾಲು ಸಾಲು ವಿಚಾರಣೆಗಳು ಆ ತಂಡದ ಬೆನ್ನುಹತ್ತುತ್ತಿದ್ದವು. ಕೋಮು ಸೌಹಾರ್ದ ವೇದಿಕೆಯವರು, ಬುದ್ಧಿಜೀವಿಗಳು ಗುಲ್ಬರ್ಗ ಪೊಲೀಸರಿಗೆ ಕೋಮುವಾದಿ ಪಟ್ಟ ಕಟ್ಟುತ್ತಿದ್ದರು. ಆದರೆ ಈಗ ಇವರು ಯಾರೂ ಬಲಿಯಾದ ಅಧಿಕಾರಿಯ ಪರ ಒಂದೇ ಒಂದು ಮಾತನಾಡುತ್ತಿಲ್ಲ' ಎಂದು ಗಿರೀಶ್ ಮಟ್ಟೆಣ್ಣವರ್ ವಿಷಾದಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications