PSI Re-exam: ಅಭ್ಯರ್ಥಿಗಳು ಕಟ್ಟನಿಟ್ಟಾಗಿ ಪಾಲಿಸಬೇಕಾದ ಕೆಇಎ ಮಾರ್ಗಸೂಚಿಗಳ ಪಟ್ಟಿ ಇಲ್ಲಿದೆ
ಬೆಂಗಳೂರು, ಜನವರಿ 08: ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳಿಗೆ ಸರ್ಕಾರ ಮರುಪರೀಕ್ಷೆಗೆ ದಿನಾಂಕ ನಿಗದಿ ಮಾಡಿತ್ತು. ಇದೀಗ ದಿನಾಂಕ ಜೊತೆಗೆ ಸಮಯ, ಅಂಕಗಳು, ಸೇರಿದಂತೆ ಮಾರ್ಗಸೂಚಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ಪ್ರಕ್ರಟಿಸಿದೆ.
ಪಿಎಸ್ಐ ಮರು ಪರೀಕ್ಷೆ ವೇಳಾಪಟ್ಟಿ ನೋಡುವುದಾದರೆ, ಇದೇ ತಿಂಗಳ ಜನವರಿ 23ರಂದು ಮಂಗಳವಾರ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಎರಡು ಪರೀಕ್ಷೆಗಳು ಜರುಗಲಿವೆ. ಅಂದು ಬೆಳಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 12 ರವರೆಗೆ 50 ಅಂಕಗಳ ಪೇಪರ್-1 ನಡೆಯಲಿದೆ.

ನಂತರ ಮಧ್ಯಾಹ್ನ 1ಗಂಟೆಯಿಂದ 2.30 ಗಂಟೆವರೆಗೆ ಒಟ್ಟು 150 ಅಂಕಗಳ ಎರಡನೇ ಪರೀಕ್ಷೆ ನಡೆಯಲಿದೆ. ಅಂದು ಒಟ್ಟು 200 ಅಂಕಗಳ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ. ಇದರೊಂದಿಗೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದೆ. ಅವುಗಳನ್ನು ಇಲ್ಲಿ ತಿಳಿಯಿರಿ.
PSI ಪರೀಕ್ಷೆಯ KEA ಸೂಚನೆಗಳ ಪಟ್ಟಿ
* ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
* ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸೆನ್ಸ್ / ಪಾಸ್ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ / ಮತದಾರರ ಗುರುತಿನ ಚೀಟಿ ಹಾಜರುಪಡಿಸಿದರೆ ಮಾತ್ರ ಅಭ್ಯರ್ಥಿಯನ್ನು ಪರೀಕ್ಷಾ ಕೊಠಡಿ ಪ್ರವೇಶ ಇರಲಿದೆ.
* ಮೊಬೈಲ್ ಗಳನ್ನು ನಿಷೇಧಿಸಲಾಗಿದ್ದು, ಮೊಬೈಲ್ ನಲ್ಲಿ ಗುರುತಿನ ಚೀಟಿಯನ್ನು ತೋರಿಸುವಂತಿಲ್ಲ ಮತ್ತು ಅಂತಹ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡುವುದಿಲ್ಲ.
* ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್ಗಳು ಇಲ್ಲದೆ ಇರುವ ಶರಟುಗಳನ್ನು ಹಾಕಿಕೊಳ್ಳುವುದು.
* ಯಾವುದೇ ತೆರನಾದ ಜೀನ್ಸ್ ಪ್ಯಾಂಟ್, ಬೆಲ್ಟ್, ಶೂ ಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ಇರುವುದಿಲ್ಲ. ಅಭ್ಯರ್ಥಿಗಳ ಎಚ್ಚರಿಕೆ ವಹಿಸಬೇಕು.
* ಕಿವಿ ಅಥವಾ ಬಾಯಿಯನ್ನು ಮುಚ್ಚಿಕೊಳ್ಳುವಂತಹದನ್ನು ಧರಿಸಿ ಅಥವಾ ಯಾವುದೇ ರೀತಿಯ ಫೇಸ್ ಮಾಸ್ಕ್ ಅನ್ನೂ ಸಹ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ.
* ವಾಟರ್ ಬಾಟಲ್ ಗಳನ್ನು ಅನುಮತಿಸುವುದಿಲ್ಲ. ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.
* ಮೊದಲನೇ ಅವಧಿ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದ ಹೊರ ಹೋಗಲು ಅನುಮತಿ ಇರುವುದಿಲ್ಲ. ಇದರೊಂದಿಗೆ ಕಾಲ ಕಾಲಕ್ಕೆ ಕೆಇಎ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವ ಸೂಚನೆಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications