PSI recruitment scam; ವರದಿ ಸಲ್ಲಿಸಿದ ನ್ಯಾ. ಬಿ. ವೀರಪ್ಪ ಸಮಿತಿ
ಬೆಂಗಳೂರು, ಜನವರಿ 22: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಭಾರೀ ಸದ್ದು ಮಾಡಿದ್ದು ಪಿಎಸ್ಐ ನೇಮಕಾತಿ ಹಗರಣ. 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬುದು ಆರೋಪವಾಗಿದೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಪಿಎಸ್ಐ ನೇಮಕಾತಿ ಹಗರಣದ ತನಿಖೆಗೆ ಸರ್ಕಾರ ಆದೇಶ ಹೊರಡಿಸಿತು. ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕಸದಸ್ಯ ಸಮಿತಿಯನ್ನು ರಚನೆ ಮಾಡಲಾಯಿತು.

ಈ ಸಮಿತಿ ತನಿಖೆಯನ್ನು ಪೂರ್ಣಗೊಳಿಸಿದೆ. ಸೋಮವಾರ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ನಸೀರ್ ಅಹಮದ್ ಉಪಸ್ಥಿತರಿದ್ದರು.
ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ?; ಕರ್ನಾಟಕ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಚುನಾವಣೆಯಲ್ಲಿ ಪ್ರಯೋಗ ಮಾಡಿದ ಅಸ್ತ್ರಗಳಲ್ಲಿ 545 ಪಿಎಸ್ಐ ನೇಮಕಾತಿ ಹಗರಣ ಸಹ ಒಂದು. ಈಗ ಸರ್ಕಾರದ ಆದೇಶದಂತೆ ಏಕ ಸದಸ್ಯ ಸಮಿತಿ ತನಿಖೆ ನಡೆಸಿ ವರದಿ ಸಲ್ಲಿಕೆ ಮಾಡಿದೆ. ಸರ್ಕಾರ ವರದಿಯನ್ನು ಪರಿಶೀಲಿಸಿ ಯಾವ ಕ್ರಮ ಕೈಗೊಳ್ಳಲಿದೆ? ಎಂದು ಕಾದು ನೋಡಬೇಕಿದೆ.
2023ರ ಜುಲೈನಲ್ಲಿ ಕರ್ನಾಟಕ ಸರ್ಕಾರ ನಿವೃತ್ತ ನ್ಯಾಯೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿತ್ತು. ಆಯೋಗದ ಕಾರ್ಯ ನಿರ್ವಹಣೆಗಾಗಿ ಬೆಂಗಳೂರು ನಗರದಲ್ಲಿಯೇ ಕಛೇರಿ ನೀಡಲಾಗಿತ್ತು. ಸಮಿತಿಗೆ ಅಗತ್ಯವಿರುವ ಅಧಿಕಾರಿ, ಸಿಬ್ಬಂದ ಮತ್ತು ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸರ್ಕಾರ ಸೂಚನೆ ನೀಡಿತ್ತು.
2021ರ ಜನವರಿ 21ರಂದು ಪಿಎಸ್ಐ ಆಯ್ಕೆ ಪ್ರಕ್ರಿಯೆ ಆರಂಭವಾಯಿತು. ಅಕ್ಟೋಬರ್ 21ರಂದು 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂಬುದು ಆರೋಪವಾಗಿದೆ. ಅಂದಿನ ಸರ್ಕಾರ ಈ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಿತ್ತು.
ಲಿಖಿತ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕದ ವಿವಿಧ ಪೊಲೀಸ್ ಠಾಣೆಗಳಲ್ಲಿ 52 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಐಪಿಎಸ್ ಅಧಿಕಾರಿ, ಪೊಲೀಸರು ಸಹ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವಿದ್ದು, ಅವರನ್ನು ಪೊಲೀಸರು ಬಂಧಿಸಿದ್ದರು.
ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ 52 ಅಭ್ಯರ್ಥಿಗಳು ಮುಂದೆ ಕರ್ನಾಟಕ ಪೊಲೀಸ್ ಇಲಾಖೆ ನಡೆಸುವ ಯಾವುದೇ ಪರೀಕ್ಷೆ ಬರೆಯದಂತೆ ನಿಷೇಧ ಹೇರಲಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಗರಣದ ತನಿಖೆಗೆ ಸಮಿತಿ ರಚನೆ ಮಾಡಿತ್ತು.
ಲಿಖಿತ ಪರೀಕ್ಷೆ ಬರೆಯುವಾಗ ಬ್ಲೂಟುಥ್ ಡಿವೈಸ್ ಬಳಕೆ ಮಾಡಲಾಗಿದೆ. ಉತ್ತರ ಪತ್ರಿಕೆಯನ್ನು ತಿದ್ದಲಾಗಿದೆ ಎಂಬುದು ಸೇರಿದಂತೆ ಹಲವು ಆರೋಪಗಳಿವೆ. ಈ ಕುರಿತು ಸಿಐಡಿ ತನಿಖೆ ನಡೆಸಿದೆ. ಕರ್ನಾಟಕ ಸರ್ಕಾರ ಲಿಖಿತ ಪರೀಕ್ಷೆಯನ್ನೇ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಮರು ಪರೀಕ್ಷೆಯನ್ನು ನಡೆಸುವಂತೆ ಆದೇಶ ನೀಡಿತ್ತು. ಜನವರಿ 23ರಂದು ಮರು ಪರೀಕ್ಷೆ ನಡೆಯಲಿದೆ. ಈಗ ಸರ್ಕಾರ ಸಮಿತಿಯ ವರದಿಯನ್ನು ಪಡೆದು ಯಾವ ಕ್ರಮ ಕೈಗೊಳ್ಳಲಿದೆ? ಎಂದು ಕಾದು ನೋಡಬೇಕು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications