ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಸ್ಐ ನೇಮಕ ಅಕ್ರಮ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಮೇ 24ರವರೆಗೆ ಕಾಲಾವಕಾಶ ನೀಡಿದ ಕೆಎಎಟಿ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಮೇ 18. ರಾಜ್ಯಾದ್ಯಂತ ತೀವ್ರ ಬಿರುಗಾಳಿ ಎಬ್ಬಿಸಿರುವ ಪಿಎಸ್ ಐಗಳ ನೇಮಕದಲ್ಲಿ ಅಕ್ರಮ ನಡೆದಿದೆ ಎನ್ನುವ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ- ಕೆಎಟಿ ಸರ್ಕಾರಕ್ಕೆ ಮೇ 24ರವರೆಗೆ ಕಾಲಾವಕಾಶ ನೀಡಿದೆ.

ಪಿಎಸ್ ಐ ನೇಮಕಾತಿಗಾಗಿ ನಡೆಸಲಾಗಿದ್ದ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಏ.29ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಪವಿತ್ರ ಸೇರಿ 28ಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿ ಬುಧವಾರ ಕೆಎಟಿ ರಜಾಕಾಲದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತು.

ಕೆಎಟಿ ಮೊರೆ ಹೋದ ಪಿಎಸ್‌ಐ ಅಭ್ಯರ್ಥಿಗಳು: ಅರ್ಜಿಯಲ್ಲಿ ಕೇಳಿದ್ದೇನು?ಕೆಎಟಿ ಮೊರೆ ಹೋದ ಪಿಎಸ್‌ಐ ಅಭ್ಯರ್ಥಿಗಳು: ಅರ್ಜಿಯಲ್ಲಿ ಕೇಳಿದ್ದೇನು?

ಆಗ ಸರ್ಕಾರಿ ವಕೀಲರು, ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೋರಿದರು. ಅದಕ್ಕೆ ಆಕ್ಷೇಪ ಎತ್ತಿದ ಅರ್ಜಿದಾರರ ಪರ ವಕೀಲರು, ಸರ್ಕಾರಕ್ಕೆ ಮರುಪರೀಕ್ಷೆ ನಡೆಸದಂತೆ ಮಧ್ಯಂತರ ಆದೇಶ ನೀಡಬೇಕೆಂದು ಕೋರಿದರು.

 PSI Recruitment scam: KAT directed state to file objections with in May 24

ಆಗ ಸರ್ಕಾರಿ ವಕೀಲರು, ಮರು ಪರೀಕ್ಷೆಗೆ ಸಮಯ ಹಿಡಿಯುತ್ತದೆ. ಸದ್ಯಕ್ಕೆ ಮಧ್ಯಂತರ ಆದೇಶ ಅಗತ್ಯವಿಲ್ಲವೆಂದರು. ಕೊನೆಗೆ ನ್ಯಾಯಪೀಠ, ವಿಚಾರಣೆಯನ್ನು ಮೇ 25ಕ್ಕೆ ಮುಂದೂಡಿ, 24 ರೊಳಗೆ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು.

ಅರ್ಜಿದಾರರ ಮನವಿ ಏನು?

ಅರ್ಜಿದಾರರು ಪರೀಕ್ಷೆ ರದ್ದುಪಡಿಸಿ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಹಾಗೂ ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ಈ ಹಿಂದಿನ ಅಧಿಸೂಚನೆಯ ಪ್ರಕಾರವೇ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಒಳಾಡಳಿತ ಇಲಾಖೆ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

ನೇಮಕ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡು ಅಂತಿಮ ಹಂತದಲ್ಲಿರುವಾಗ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಅದು ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾದ ಮತ್ತು ಕಾನೂನು ಬಾಹಿರ ನಿರ್ಧಾರವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಕರಣದ ಹಿನ್ನೆಲೆ:

545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು 2022ರ ಜ.21ರಂದು ಅಧಿಸೂಚನೆ ಹೊರಡಿಸಲಾಗಿತ್ತು. 3 ಹಂತದಲ್ಲಿ ನೇಮಕ ಪ್ರಕ್ರಿಯೆ ನಡೆಸಲು ಆದೇಶದಲ್ಲಿ ತಿಳಿಸಲಾಗಿತ್ತು. ಒಟ್ಟು 1.20 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು.

ಮೊದಲ ಹಂತದಲ್ಲಿ ದೈಹಿಕ ಪರೀಕ್ಷೆಯ ನಂತರ 54,104 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಆಯ್ಕೆಯಾದರು. ಬಳಿಕ ಲಿಖಿತ ಪರೀಕ್ಷೆ ನಡೆಯಿತು. ಅದರಲ್ಲಿ ಎರಡು ಪತ್ರಿಕೆ, ಒಂದು 100 ಅಂಕಗಳಿಗೆ ಮತ್ತು ಮತ್ತೊಂದು 150 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ನಂತರ 545 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನಾ ಕಾರ್ಯವೂ ನಡೆಯುತ್ತಿದೆ.

ಈ ಮಧ್ಯೆ, ಕಲಬುರಗಿಯ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ವೇಳೆ ಅಕ್ರಮ ನಡೆದಿದ ಎಂಬ ದೂರು ಕೇಳಿಬಂದಿತು. ಆ ಬಗ್ಗೆ ವ್ಯಾಪಕ ಪ್ರಾಥಮಿಕ ತನಿಖೆ ನಡೆಸಿದೆ ಅದರಲ್ಲಿ ಸತ್ಯಾಂಶವಿರುವುದ ಸಂಗತಿ ಬಯಲಾಯಿತು. ಆ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಎಫ್ ಐಅರ್ ದಾಖಲಾಗಿ ಹಲವು ಅಭ್ಯರ್ಥಿಗಳು ಮತ್ತು ರಾಜಕೀಯ ಮುಖಂಡರು ಬಂಧನಕ್ಕೆ ಒಳಗಾಗಿದ್ದಾರೆ.

Recommended Video

ರಷ್ಯಾ ಜೊತೆಗಿನ ಭಾರತದ ಬಂಧ ಬಿಡಿಸಲು ಅಮೆರಿಕದಿಂದ ಭಾರತಕ್ಕೆ ಬಿಗ್ ಆಫರ್ | Oneindia Kannada

ನೇಮಕ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂ. ಹಣಕಾಸು ವ್ಯವಹಾರ ಹಾಗೂ ಭಾರಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸರಕಾರ ಏ.29ರಂದು ನೇಮಕ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಹೊಸದಾಗಿ ಮರು ಪರೀಕ್ಷೆ ನಡೆಸುವುದಾಗಿ ಆದೇಶಿಸಿದೆ. ಇದರಿಂದಾಗಿ ಆಯ್ಕೆ ಯಾದ ಅಭ್ಯರ್ಥಿಗಳು ಕೆಎಟಿ ಕದ ತಟ್ಟಿದ್ದಾರೆ.

English summary
Karnataka PSI Recruitment scam: KAT directed state to file objections with in May 24.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X