ಲ್ಯಾಪ್ ಟಾಪ್ ಮೇಲಿನ ನಿಷೇಧ ಹಿಂಪಡೆದ ಪಿಯು ಬೋರ್ಡ್
ಬೆಂಗಳೂರು, ನವೆಂಬರ್ 23: ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಕಾಲೇಜಿನ ಅವಧಿಯಲ್ಲಿ ಮೊಬೈಲ್ ಫೋನ್, ಲ್ಯಾಪ್ ಟಪ್ ಬಳಕೆ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ಪಿಯು ಬೋರ್ಡ್ ತನ್ನ ಆದೇಶದಲ್ಲಿ ತಿದ್ದುಪಡಿ ಮಾಡಿ ಮರು ಆದೇಶ ಹೊರಡಿಸಿದೆ.
ಸರ್ಕಾರಿ, ಅನುದಾನಿತ, ಖಾಸಗಿ ಪಿಯು ಕಾಲೇಜುಗಳಲ್ಲಿ ಇನ್ಮುಂದೆ ವಿದ್ಯಾರ್ಥಿಗಳು ಮೊಬೈಲ್ ಮತ್ತು ಲ್ಯಾಪ್ಟಾಪ್ ಬಳಸುವಂತಿಲ್ಲ ಎಂದು ಪಿಯು ಬೋರ್ಡ್ ಆದೇಶ ಹೊರಡಿಸಿದೆ.
ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಲ್ಯಾಪ್ಟಾಪ್ ನಿಷೇಧ ಕುರಿತಂತೆ ಆದೇಶ ಜಾರಿಗೆ ತರುವಂತೆ ಎಲ್ಲ ಉಪ ನಿರ್ದೇಶಕರಿಗೆ ಪಿಯು ಬೋರ್ಡ್ ಸುತ್ತೋಲೆ ಹೊರಡಿಸಲಾಗಿತ್ತು. ಇದರಲ್ಲಿ ಕೆಲ ದೋಷಗಳಿತ್ತು. ಇದನ್ನು ಸರಿಪಡಿಸಿ, ಹೊಸ ಆದೇಶ ನೀಡಲಾಗಿದೆ ಎಂದು ಪಿಯು ಬೋರ್ಡ್ ಮುಖ್ಯಸ್ಥೆ ಸಿ ಶಿಖಾ ಹೇಳಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿನ ಸಮಯದಲ್ಲಿ ಮೊಬೈಲ್, ಲ್ಯಾಪ್ಟಾಪ್ ಇಟ್ಟುಕೊಳ್ಳುವುದನ್ನು ಶೈಕ್ಷಣಿಕ ಹಿತದೃಷ್ಟಿಯಿಂದ ಸಂಪೂರ್ಣವಾಗಿ ನಿಷೇಧಿಸುವ ಆದೇಶವನ್ನು ಹೊರಡಿಸಿತ್ತು.
ಆದರೆ, ವಾಣಿಜ್ಯ ಶಾಸ್ತ್ರ, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅವಶ್ಯಕವಾಗಿದೆ. ಆದರೆ, ಅವರಿಗೂ ಲ್ಯಾಪ್ಟಾಪ್ ನಿಷೇಧ ಮಾಡಲಾಗಿದೆ. ಹೀಗಾಗಿ, ಆದೇಶದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications