ಲೀಕಾಗಿದ್ದ ಕೆಮಿಸ್ಟ್ರಿ ಪಿಯು ಪ್ರಶ್ನೆ ಪತ್ರಿಕೆ ಬೆಲೆ 10 ಲಕ್ಷ ರು!
ಬೆಂಗಳೂರು, ಏಪ್ರಿಲ್ 04: ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸೋಮವಾರ ಕಂಡು ಬಂದಿದೆ. ಪೇಪರ್ ಲೀಕ್ ಮಾಡಿದ ಮಾಸ್ಟರ್ ಮೈಂಡ್ ಸೇರಿ ಮೂವರ ಬಂಧನವಾಗಿದೆ. ಪಿಯು ಬೋರ್ಡ್ ಅಧಿಕಾರಿಗಳಿಗೆ ಎಷ್ಟು ಮೊತ್ತ ನೀಡಿ ಪೇಪರ್ ಖರೀದಿಸಿದ್ದ ಎಂಬುದು ಕೂಡಾ ಬಹಿರಂಗವಾಗಿದೆ.
ಈ ನಡುವೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ. ಶರಣ ಪ್ರಕಾಶ್ಪಾಟೀಲ್ ಅವರ ಆಪ್ತ ಸಹಾಯಕನೊಬ್ಬನ ವಿಚಾರಣೆ ಜಾರಿಯಲ್ಲಿದ್ದು, ವಿಚಾರಣೆ ಬಳಿಕ ಬಂಧನ ಸಾಧ್ಯತೆಯಿದೆ. ಸಚಿವ ಶರಣ ಗೌಡ ಪಾಟೀಲ್ ಅವರು ಸೇಡಂನಿಂದ ಹೈದರಬಾದ್ ಮಾರ್ಗವಾಗಿ ಬೆಂಗಳೂರಿನ ಕಡೆಗೆ ದೌಡಾಯಿಸುತ್ತಿದ್ದಾರೆ.
ಪದವಿ ಪೂರ್ವ ಶಿಕ್ಷಣ ಬೋರ್ಡ್ ನ ಅಧಿಕಾರಿಗಳಿಗೆ ಸುಮಾರು 10 ಲಕ್ಷ ರು ನೀಡಿ ಕೆಮಿಸ್ಟ್ರಿ ಪ್ರಶ್ನೆ ಪತ್ರಿಕೆಯನ್ನು ಮಾಸ್ಟರ್ ಮೈಂಡ್ ಖರೀದಿಸಿದ್ದಾನೆ ಎಂದು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್(ಸಿಐಡಿ) ಅಧಿಕಾರಿಗಳು ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮುಖ್ಯರೂವಾರಿ, ಕಿಂಗ್ ಪಿನ್, ಮಾಸ್ಟರ್ ಮೈಂಡ್ ಹೆಸರು ಮಂಜುನಾಥ್, ವಿಜಯನಗರದ ಕಾಲೇಜೊಂದರಲ್ಲಿ ದೈಹಿಕ ಶಿಕ್ಷಣ(ಪಿಟಿ) ವಿಭಾಗದ ಮುಖ್ಯಸ್ಥ. ಈತ 10 ಲಕ್ಷ ರು ನೀಡಿ ಪೇಪರ್ ಖರೀದಿಸಿದ್ದ.[ಪೇಪರ್ ಲೀಕ್ ಆಗಿದ್ದು ಹೇಗೆ? ಯಾರು ಯಾರು ಬಂಧನ?]
ಮಾರ್ಚ್ 21ರಂದು ರಸಾಯನಶಾಸ್ತ್ರ ಪಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಅಂದು ಪರೀಕ್ಷೆ ನಡೆದ ಬಳಿಕ ಅದನ್ನು ರದ್ದುಪಡಿಸಲಾಗಿತ್ತು. ಪಶ್ನೆ ಪತ್ರಿಕೆ ಸೋರಿಕೆ ಕುರಿತು ಸಿಐಡಿ ತನಿಖೆ ನಡೆಸಲು ಆದೇಶ ನೀಡಲಾಗಿತ್ತು. ತನಿಖೆಗೆ ಸಿಐಡಿ ಡಿಐಜಿ ಸೋನಿಯಾ ನಾರಂಗ್ ಅವರು 5 ತಂಡಗಳನ್ನು ರಚನೆ ಮಾಡಿದ್ದರು.[ದ್ವೇಷಕ್ಕಾಗಿ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ?]
2016ರ ಮಾರ್ಚ್ 21ರಂದು 1.75 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಆ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಮಾರ್ಚ್ 31ರಂದು ಮರುಪರೀಕ್ಷೆ ನಡೆಸುವುದಾಗಿ ಘೋಷಿಸಲಾಗಿತ್ತು. ಆದರೆ, ಪುನಃ ಪತ್ರಿಕೆ ಸೋರಿಕೆಯಾದ ಕಾರಣ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಸದ್ಯ, ಏ.12ರಂದು ಮರು ಪರೀಕ್ಷೆ ನಡೆಸುವುದಾಗಿ ದಿನಾಂಕ ಘೋಷಣೆ ಮಾಡಲಾಗಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications