ಪಿಯುಸಿ ಪಠ್ಯದಲ್ಲಿ ಶೇ 30ರಷ್ಟು ಕಡಿತಕ್ಕೆ ನಿರ್ಧಾರ
ಬೆಂಗಳೂರು, ಅಕ್ಟೋಬರ್ 22: ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆ ಶಾಲಾ ಕಾಲೇಜುಗಳಲ್ಲಿ ಸಕ್ರಿಯವಾಗಿ ಪಠ್ಯ ಚಟುವಟಿಕೆಗಳು ನಡೆಯುತ್ತಿಲ್ಲ. ಆನ್ಲೈನ್ ತರಗತಿಗಳಲ್ಲಿ ಸಂಪೂರ್ಣ ಪಠ್ಯ ಬೋಧನೆ ಕಷ್ಟವಾಗುತ್ತಿದೆ. ಸದ್ಯದ ಪರಿಸ್ಥಿತಿ ಶಾಲಾ ಕಾಲೇಜುಗಳನ್ನು ತೆರೆಯುವುದು ಕಷ್ಟವಾಗಿರುವುದರಿಂದ ಪಠ್ಯ ಚಟುವಟಿಕೆಗಳನ್ನು ಮುಂದುವರಿಸಲು ಸರ್ಕಾರ ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದೆ.
ಪ್ರಸಕ್ತ ಸಾಲಿನ ಪಿಯು ವಿದ್ಯಾರ್ಥಿಗಳ ಮೇಲಿನ ಹೊರೆ ಇಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳ ವಿಜ್ಞಾನ ವಿಷಯಗಳನ್ನು ಹೊರತುಪಡಿಸಿ ಇತರೆ 33 ವಿಷಯಗಳಲ್ಲಿ ಶೇ 30ರಷ್ಟು ಪಠ್ಯವನ್ನು ಕಡಿತಗೊಳಿಸಲು ಇಲಾಖೆ ತೀರ್ಮಾನ ತೆಗೆದುಕೊಂಡಿದೆ.
ಭೌತ ವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ ಹಾಗೂ ಗಣಿತ ವಿಷಯಗಳನ್ನು ಈ ಪಠ್ಯ ಕಡಿತ ಕ್ರಮದಿಂದ ಹೊರಗಿಡಲಾಗಿದೆ. ಈ ನಿರ್ಧಾರ 2020-21ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರವೇ ಅನ್ವಯವಾಗಲಿದೆ.

ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ಸಿ ಶಿಕ್ಷಣ ಮಂಡಳಿ ನಿಗದಿಪಡಿಸಿದ ಪಠ್ಯಕ್ರಮವನ್ನೇ ಇಲ್ಲಿಯೂ ಅಳವಡಿಸಲು ಇಲಾಖೆ ನಿರ್ಧರಿಸಿದೆ. 34 ವಿಷಯಗಳ ಪೈಕಿ ಕರ್ನಾಟಕ ಸಂಗೀತ ವಿಷಯಗಳಲ್ಲಿ ಎರಡು ವರ್ಷಗಳಿಂದ ಯಾವುದೇ ವಿದ್ಯಾರ್ಥಿ ದಾಖಲಾಗದ ಕಾರಣ ಆ ವಿಷಯವನ್ನು ಪಠ್ಯ ಕಡಿತ ಪ್ರಕ್ರಿಯೆಯಲ್ಲಿ ಪರಿಗಣಿಸಿಲ್ಲ.
Recommended Video
ಕೇಂದ್ರ ಸರ್ಕಾರವು 1 ರಿಂದ 12ನೇ ತರಗತಿವರೆಗಿನ ಪಠ್ಯಗಳಲ್ಲಿ ಶೇ 30ರಷ್ಟು ಕಡಿತ ಮಾಡಿದೆ. ಪಠ್ಯ ಪುಸ್ತಕ ರಚನಾ ಸಮಿತಿ ಮತ್ತು ಪರಿಷ್ಕರಣಾ ಸಮಿತಿಯ ಸದಸ್ಯರು ಯಾವ ಪಠ್ಯಗಳನ್ನು ಕಡಿತಗೊಳಿಸಬಹುದು ಎಂಬ ವರದಿ ನೀಡಿದ್ದರು. ಅದರ ಆಧಾರದಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಡಿತಗೊಳಿಸಿದ ಪಠ್ಯಕ್ರಮಗಳ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications