ಮದ್ದೂರಲ್ಲಿ ಪೊಲೀಸರ ನಿರ್ಲಕ್ಷ್ಯ ವಿರುದ್ಧ ಸಿಡಿದೆದ್ದ ಸಾರ್ವಜನಿಕರು
ಮಂಡ್ಯ,ಫೆಬ್ರವರಿ,10: ಮದ್ದೂರಿನ ಎಪಿಎಂಸಿ ಮಾರುಕಟ್ಟೆ ಬಳಿ ನಡೆದ ಕಾರು-ಟಿವಿಎಸ್ ಮೊಪೆಡ್ ನಡುವೆ ನಡೆದ ಅಪಘಾತಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಬುಧವಾರ ಪ್ರತಿಭಟನೆ ನಡೆಸಿದರು.
ಗೊರವನಹಳ್ಳಿ ಗ್ರಾಮದ ನಿವಾಸಿ ಶಿವರಾಜು ತಮ್ಮ ಮಗಳು ಮಾನಸಳನ್ನು ಪಟ್ಟಣದ ಎಚ್.ಕೆ.ವಿ. ಕಾಲೇಜಿಗೆ ಬಿಡಲು ಟಿವಿಎಸ್ ಮೊಪೆಡ್ ನಲ್ಲಿ ಬರುತ್ತಿದ್ದಾಗ ಎಪಿಎಂಸಿ ಮಾರುಕಟ್ಟೆ ಹೆದ್ದಾರಿಯಲ್ಲಿ ಲಾರಿಗಳು ಅಸ್ತವ್ಯಸ್ತವಾಗಿ ನಿಂತಿದ್ದ ಪರಿಣಾಮ ಶಿವರಾಜು ಅವರು ತಿರುವು ತೆಗೆದುಕೊಳ್ಳಲು ಹೋದಾಗ ಹಿಂದಿನಿಂದ ಬಂದ ಕಾರು ಇವರ ಮೊಪೆಡ್ ಗೆ ಡಿಕ್ಕಿ ಹೊಡೆದು ಇಬ್ಬರು ತೀವ್ರ ಗಾಯಗೊಂಡರು.[ವಿದ್ಯಾರ್ಥಿನಿ ಬೆನ್ನುಬಿದ್ದ ಪೇದೆಗೆ ಬಿತ್ತು ಭರ್ತಿ ಒದೆ!]

ಅಪಘಾತ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಅಷ್ಟರಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಚನ್ನೇಗೌಡನದೊಡ್ಡಿ ಗ್ರಾಮಸ್ಥರು ಈ ಅಪಘಾತಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿ ಪೊಲಿಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.[ಮಂಡ್ಯ: ಚಾಲಕನ ನಿರ್ಲಕ್ಷಯದಿಂದ ಕೆಎಸ್ಸಾರ್ಟಿಸಿ ಬಸ್ ನದಿಗೆ ಬಿತ್ತೇ?]
ಲಾರಿಗಳನ್ನು ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಎಪಿಎಂಸಿ ಮಾರುಕಟ್ಟೆ ಬಳಿ ಪ್ರತಿನಿತ್ಯ ಅಪಘಾತಗಳು ನಡೆಯುತ್ತಿವೆ. ದ್ವಿಚಕ್ರವಾಹನ ಸವಾರರು ಭಯದಲ್ಲಿ ಸಂಚರಿಸುವಂತಾಗಿದೆ ಎಂದು ದೂರಿದ ಪ್ರತಿಭಟನಾಕಾರರು ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಸ್ಥಳದಲ್ಲಿದ್ದ ಪಿಎಸ್ಐ ವಿವೇಕಾನಂದ ಉದ್ರಿಕ್ತ ನಾಗರಿಕರನ್ನು ಸಮಾಧಾನಪಡಿಸಿ, ಕೂಡಲೇ ಈ ಸ್ಥಳದಲ್ಲಿ ಲಾರಿ ನಿಲ್ಲದಂತೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ ಮೇರೆಗೆ ನಾಗರಿಕರು ಪ್ರತಿಭಟನೆ ಹಿಂದಕ್ಕೆ ಪಡೆದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications