ದ್ವಿತೀಯ ಪಿಯು: ಯಾವ ಜಾತಿಯ ಎಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ?
ಬೆಂಗಳೂರು, ಏಪ್ರಿಲ್ 15: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಎರಡು ಶೇಕಡಾ ಹೆಚ್ಚಿಗೆ ಫಲಿತಾಂಶ ಬಂದಿದೆ. ಕಳೆದ ಬಾರಿ ರಾಜ್ಯದ ಫಲಿತಾಂಶ 59.56% ಇದ್ದರೆ ಈ ಬಾರಿ 61.73% ಇದೆ.
ಮಾಮೂಲಿನಂತೆ ಈ ಬಾರಿಯೂ ಸಹ ಹೆಣ್ಣುಮಕ್ಕಳು ಫಲಿತಾಂಶದಲ್ಲಿ ಮುಂದಿದ್ದಾರೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮೊದಲೆರಡು ಸ್ಥಾನಗಳನ್ನು ಹಂಚಿಕೊಂಡಿವೆ.
ಯಾವ ಜಾತಿಯ ವಿದ್ಯಾರ್ಥಿಗಳು ಹೆಚ್ಚು ಮಂದಿ ಪಾಸಾಗಿದ್ದಾರೆ, ಯಾವ ಜಾತಿಯ ವಿದ್ಯಾರ್ಥಿಗಳು ಕಡಿಮೆ ಮಂದಿ ಪಾಸಾಗಿದ್ದಾರೆ ಎಂದು ದ್ವಿತೀಯ ಪಿಯು ಬೋರ್ಡ್ ಲೆಕ್ಕ ನೀಡಿದೆ. ಜಾತಿ ಆಧಾರದಲ್ಲಿ ಶಿಕ್ಷಣವನ್ನು ನೋಡುವುದು ಹೇಯ, ಆದರೆ ಪಿಯು ಮಂಡಳಿಯೇ ಈ ಮಾಹಿತಿಯನ್ನು ಮುದ್ರಿಸಿ ಹಂಚುತ್ತಿರುವಾಗ ಓದುಗರಿಗೆ ಇದರ ಮಾಹಿತಿ ನೀಡುವ ದೃಷ್ಟಿಯಿಂದ ಜಾತಿವಾರು ಅಂಕಿ-ಸಂಖ್ಯೆಯನ್ನು ಇಲ್ಲಿ ನೀಡಲಾಗುತ್ತಿದೆ.
ಈ ಬಾರಿ ಒಟ್ಟು 6,71,653 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಅದರಲ್ಲಿ 4,14,587 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಿದ್ಯಾರ್ಥಿಗಳ ಜಾತಿವಾರು ಅಂಕಿ-ಸಂಖ್ಯೆ ಕೆಳಗೆ ನೀಡಲಾಗಿದೆ.

ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳು
ಪರಿಶಿಷ್ಟ ಜಾತಿಯ 1,19,865 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಇದರಲ್ಲಿ 62,290 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾವಾರು ಫಲಿತಾಂಶ 51.97% ಇದೆ. ಪರಿಶಿಷ್ಟ ಪಂಗಡದ 42,490 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು ಇದರಲ್ಲಿ 22,665 (53.34%) ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಸಿ-1 ಮತ್ತು 2-A ಫಲಿತಾಂಶ ಎಷ್ಟು
ಸಿ-1 ವರ್ಗಕ್ಕೆ ಸೇರಿದ 43,965 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು, 26,420 (60.09%) ವಿದ್ಯಾರ್ಥಿಗಳು ಪಾಸಾಗಿದ್ದಾರೆ, 2-A ವರ್ಗಕ್ಕೆ ಸೇರಿದ 1,37,240 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಅದರಲ್ಲಿ 90,570 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ಶೇಕಡಾವಾರು 69.99% ವಿದ್ಯಾರ್ಥಿಗಳು ಪಾಸಾಗಿದ್ದಾರೆ.

2-B ಮತ್ತು 3-A ವಿದ್ಯಾರ್ಥಿಗಳ ಸಂಖ್ಯೆ
2-B ಜಾತಿಗೆ ಸೇರಿದ 71,762 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಇದರಲ್ಲಿ 40,963 ವಿದ್ಯಾರ್ಥಿಗಳು ಉತ್ತೀರ್ಣರಾಗಿ 57.07% ಫಲಿತಾಂಶ ತಂದಿದ್ದಾರೆ. 3-A ಜಾತಿಯ 72,045 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಇದರಲ್ಲಿ 49,608 (68.86%) ವಿದ್ಯಾರ್ಥಿಗಳು ಪಾಸಾಗಿದ್ದಾರೆ.

3-B ಮತ್ತು ಸಾಮಾನ್ಯ ವರ್ಗದವರ ಫಲಿತಾಂಶ
3-B ಜಾತಿಗೆ ಸೇರಿದ 1,09,086 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಇದರಲ್ಲಿ 70,938 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇವರ ಶೇಕಡಾವಾರು ಫಲಿತಾಂಶ 65.03%. ಸಾಮಾನ್ಯ ವರ್ಗದ 75,200 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಇದರಲ್ಲಿ 51,143 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಇವರ ಶೇಕಡಾವಾರು ಫಲಿತಾಂಶ 68.01%.
-
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications