ಪಿಯು ಉಪನ್ಯಾಸಕರ ವರ್ಗಾವಣೆ ದಿನಾಂಕ ನಿಗದಿ
ಬೆಂಗಳೂರು, ಜು.25: 2017-18ನೇ ಸಾಲಿನ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ಪರಿಷ್ಕೃತ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಜು.26ರಿಂದ 31ರವರೆಗೆ ಕೋರಿಕೆ ವರ್ಗಾವಣೆ ಹಾಗೂ ಆ.1ರಿಂದ 4ರ ವರೆಗೆ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ.
ವರ್ಗಾವಣೆ ಪ್ರಕ್ರಿಯೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಸಿ.ಶಿಖಾ ಆದೇಶ ಹೊರಡಿಸಿದ್ದಾರೆ. ಕೌನ್ಸಿಲಿಂಗ್ ವೇಳೆ ಉಪನ್ಯಾಸಕರು ಕಡ್ಡಾಯವಾಗಿ ಗುರುತಿನ ಕಾರ್ಡ್ ಹಾಗೂ ಮೂಲ ಪ್ರಮಾಣ ಪತ್ರವನ್ನ ಹಾಜರು ಪಡಿಸಬೇಕು.
ಜುಲೈ 26ರಂದು ಐಚ್ಛಿಕ ಕನ್ನಡ, ಸಂಸ್ಕೃತ, ಹಿಂದಿ, ಉರ್ದು, ತರ್ಕಶಾಸ್ತ್ರ, ಶಿಕ್ಷಣ, ಭೂಗೋಳಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ ಮತ್ತು ಕನ್ನಡ ವಿಷಯದ ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ.

ಜುಲೈ . 27ರಂದು ಇತಿಹಾಸ, ಭೌತಶಾಸ್ತ್ರ,ಜುಲೈ .28 ರಂದು ರಸಾಯನಶಾಸ್ತ್ರ, ಅರ್ಥಶಾಸ್ತ್ರ, ಜುಲೈ. 29 ರಂದು ರಾಜ್ಯಶಾಸ್ತ್ರ, ಗಣಿತ, ಜುಲೈ. 30 ರಂದು ಜೀವಶಾಸ್ತ್ರ, ಸಮಾಜಶಾಸ್ತ್ರ, ಜುಲೈ .31 ರಂದು ಆಂಗ್ಲಭಾಷೆ, ವ್ಯವಹಾರ ಅಧ್ಯಯನ ವಿಷಯದ ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ನಿಗದಿಯಾಗಿದೆ.
ಎರಡನೇ ಹಂತದಲ್ಲಿ ಕಡ್ಡಾಯ ವರ್ಗಾವಣೆ ಆಗಸ್ಟ್ .1 ರಂದು ಐಚ್ಛಿಕ ಕನ್ನಡ, ಸಂಸ್ಕೃತ, ಹಿಂದಿ, ಉರ್ದು, ತರ್ಕಶಾಸ್ತ್ರ, ಶಿಕ್ಷಣ, ಭೂಗೋಳಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ ಮತ್ತು ಕನ್ನಡ, ಭೌತಶಾಸ್ತ್ರ, ಆಗಸ್ಟ್ . 2 ರಂದು ಇತಿಹಾಸ, ರಸಾಯನಶಾಸ್ತ್ರ, ಅರ್ಥಶಾಸ್ತ್ರ, ಗಣಿತ.
ಆಗಸ್ಟ್ 3 ರಂದು ರಾಜ್ಯಶಾಸ್ತ್ರ, ಜೀವಶಾಸ್ತ್ರ, ಸಮಾಜಶಾಸ್ತ್ರ ಹಾಗೂ ಜುಲೈ 7ರಂದು ಇಂಗ್ಲಿಷ್ ಮತ್ತು ವ್ಯವಹಾರ ಅಧ್ಯಯನ ವಿಷಯದ ಕೌನ್ಸೆಲಿಂಗ್ ನಡೆಯಲಿದೆ ಎಂದು ಪಿಯು ಇಲಾಖೆ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನ ಮಲ್ಲೇಶ್ವರ 18ನೇ ಅಡ್ಡರಸ್ತೆಯಲ್ಲಿರುವ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೌನ್ಸೆಲಿಂಗ್ ನಡೆಯಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications