ಫೆ.16ರಿಂದ ಪದವಿ, ಡಿಪ್ಲೋಮಾ ಕಾಲೇಜು ಪುನರಾರಂಭ; ಪದವಿ ಕಾಲೇಜಿಗೆ ಸಮವಸ್ತ್ರ ಕಡ್ಡಾಯವಲ್ಲ
ಬೆಂಗಳೂರು, ಫೆಬ್ರವರಿ 15: ಹಿಜಾಬ್ ಮತ್ತು ಕೇಸರಿ ವಿವಾದದ ಬಳಿಕ ಸೋಮವಾರದಿಂದ ಶಾಂತಿಯುತವಾಗಿ ಹೈಸ್ಕೂಲ್ ತರಗತಿಗಳು ಪುನರಾರಂಭಗೊಂಡಿದ್ದು, ಇದೀಗ ಬುಧವಾರದಿಂದ ಪಿಯು, ಡಿಗ್ರಿ, ವಿಶ್ವವಿದ್ಯಾಲಯ ಮತ್ತು ಡಿಪ್ಲೋಮಾ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
Koo Appಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳು ಫೆಬ್ರವರಿ 16 ರಿಂದ ಪುನರಾರಂಭಗೊಳ್ಳಲಿವೆ. ಉಚ್ಛ ನ್ಯಾಯಾಲಯದ ಆದೇಶ ಪಾಲಿಸುವ ಜತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುವುದು. ಮಾಹಿತಿಗಾಗಿ:👇 - Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 15 Feb 2022
ಈ ಕುರಿತಂತೆ ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ದಿನಾಂಕ 15-02-2022ರಲ್ಲಿ ಸೂಚಿಸಿದಂತೆ ದಿನಾಂಕ 11-02-2022ರ ಸುತ್ತೋಲೆಯನ್ನು ಮಾರ್ಪಡಿಸಿ, ದಿನಾಂಕ 16-02-2022ರಿಂದ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ ಆರಂಭಿಸುವುದಾಗಿ ತಿಳಿಸಿದೆ.
ಈ ಮೂಲಕ ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವಂತಹ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳನ್ನು ದಿನಾಂಕ 16-02-2022 (ಬುಧವಾರ)ರಿಂದ ಪುನರ್ ಪ್ರಾರಂಭಿಸಲು ಸೂಚಿಸಿದೆ.

ಅದೇ ರೀತಿ ಉನ್ನತ ಶಿಕ್ಷಣ ಇಲಾಖೆಯೂ ಸುತ್ತೋಲೆ ಹೊರಡಿಸಿದ್ದು, ದಿನಾಂಕ 11-02-2022ರ ಸುತ್ತೋಲೆಯನ್ನು ಮಾರ್ಪಡಿಸಿ, ದಿನಾಂಕ 16-02-2022ರ ರಜೆಯನ್ನು ಈ ಕೂಡಲೇ ಜಾರಿಗೆ ಬರುವಂತೆ ರದ್ದುಪಡಿಸಿ, ಆ ದಿನದಿಂದಲೇ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು, ಅನುದಾನಿತ ಮತ್ತು ಅನುದಾನ ರಹಿತ ಪದವಿ ಕಾಲೇಜುಗಳನ್ನು ಪುನರಾರಂಭಿಸಲು ಸೂಚಿಸಿದೆ.
ಹಿಜಾಬ್ ವಿವಾದ; ಸ್ವಾತಂತ್ರ್ಯದ ದುರ್ಬಳಕೆ ಬೇಡ
ಹಿಜಾಬ್ ವಿವಾದದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ, "ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಾಗಿರುವ ಕಡೆ ವಿದ್ಯಾರ್ಥಿಗಳು ಅದನ್ನೇ ಪಾಲಿಸಬೇಕು. ಪದವಿ ಕಾಲೇಜುಗಳಲ್ಲಿ ಸಮವಸ್ತ್ರವನ್ನೇನೂ ವಿಧಿಸಿಲ್ಲ. ಅಲ್ಲಿಗೆ ಹೋಗುವವರು ತಮ್ಮ ಇಷ್ಟದ ಉಡುಪನ್ನು ಹಾಕಿಕೊಂಡು ಹೋಗಬಹುದು. ನಮ್ಮ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ. ಆದರೆ, ಇದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು. ಅದಕ್ಕೆಲ್ಲ ನಾವು ಅವಕಾಶ ಮಾಡಿಕೊಡುವುದಿಲ್ಲ,'' ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

"ಹಿಜಾಬ್ ವಿವಾದದ ಬಗ್ಗೆ ರಾಜ್ಯ ಹೈಕೋರ್ಟ್ ಈಗಾಗಲೇ ತನ್ನ ಮಧ್ಯಂತರ ನಿರ್ದೇಶನವನ್ನು ನೀಡಿದೆ. ಅದನ್ನು ಜಾರಿಗೊಳಿಸುವುದಷ್ಟೇ ಸರಕಾರದ ಹೊಣೆ. ಹಾಗೆಯೇ ವಿದ್ಯಾರ್ಥಿಗಳೂ ಸಹ ಶಿಕ್ಷಣದ ಕಡೆ ಗಮನ ಹರಿಸಬೇಕೇ ವಿನಃ ವಸ್ತ್ರದ ಬಗ್ಗೆಯಲ್ಲ. ಸಮವಸ್ತ್ರ ನೀತಿ 1995ರಿಂದಲೂ ಇದೆ. ಇದನ್ನೇನೂ ನಾವು ಮಾಡಿಲ್ಲ. ನಮ್ಮ ಸಮಾಜಕ್ಕೆ ಇದನ್ನೆಲ್ಲ ಮೆಟ್ಟಿ ನಿಲ್ಲುವ ಶಕ್ತಿ ಇದೆ. ಇದೇ ಪ್ರಜಾಪ್ರಭುತ್ವದ ಹೆಚ್ಚುಗಾರಿಕೆ,'' ಎಂದು ಅವರು ತಿಳಿಸಿದರು.
ಈ ಕುರಿತು ಕೂ ಸಹ ಮಾಡಿರುವ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ, "ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳು ಫೆಬ್ರವರಿ 16ರಿಂದ ಪುನರಾರಂಭಗೊಳ್ಳಲಿವೆ''.

ಉಚ್ಛ ನ್ಯಾಯಾಲಯದ ಆದೇಶ ಪಾಲಿಸುವ ಜತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications