10 ದಿನಗಳ ಕಾಲ ಟೊಮೆಟೊ ಸಿಐಡಿ ವಶಕ್ಕೆ
ಬೆಂಗಳೂರು, ಮೇ 04 : ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಶಿವಕುಮಾರ ಸ್ವಾಮಿ ಅಲಿಯಾಸ್ ಟೊಮೆಟೊವನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಹಗರಣದ ಕಿಂಗ್ ಪಿನ್ ಶಿವಕುಮಾರ ಸ್ವಾಮಿಯನ್ನು ಮಂಗಳವಾರ ಹೊಸೂರು ಬಳಿ ಪೊಲೀಸರು ಬಂಧಿಸಿದ್ದರು.
ಶಿವಕುಮಾರಸ್ವಾಮಿ ಬಂಧನದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಐಡಿಯ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ಕಿಶೋರ್ ಚಂದ್ರ ಅವರು, 'ಬಂಧಿತನ ಮೇಲೆ ಬೆಂಗಳೂರಿನಲ್ಲಿ 4 ಮತ್ತು ತುಮಕೂರಿನಲ್ಲಿ 2 ಪ್ರಕರಣಗಳು ದಾಖಲಾಗಿದ್ದು, ಈತನ ಜತೆ ಸಂಪರ್ಕ ಹೊಂದಿರುವವರನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು' ಎಂದು ಹೇಳಿದರು. [ಇವನಿಗೆ ಪತ್ರಿಕೆ ಬಯಲು ಮಾಡುವುದೇ ಕೆಲಸ]

ಶಿವಕುಮಾರಸ್ವಾಮಿ ಅಲಿಯಾಸ್ ಟೊಮೆಟೊ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಸಂಘಟಿತ ಅಪರಾಧ (ಕೋಕಾ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳವಾರ ಆತನನ್ನು ಕೋರ್ಟ್ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಸಿಐಡಿ ವಶಕ್ಕೆ ಪಡೆಯಲಾಗಿದೆ. [ಪತ್ರಿಕೆ ಹಗರಣದಲ್ಲಿ ಕೋಕಾ ಪ್ರಯೋಗ, ಏನಿದು ಕೋಕಾ?]
ಜಾಮೀನು ಪಡೆಯಲು ಬಂದಿದ್ದ : ಹಗರಣ ಬಯಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಈತ ಕೇರಳ ಮುಂತಾದ ಕಡೆ ಓಡಾಡಿಕೊಂಡಿದ್ದ. ನಿರೀಕ್ಷಣಾ ಜಾಮೀನು ಪಡೆಯಲು ನಗರಕ್ಕೆ ಬಂದಿದ್ದ. ಹೊಸೂರಿನ ಗಾರೆಬಾವಿಪಾಳ್ಯದ ಬಳಿ ಆತ ಇರುವ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಿದ ಪೊಲೀಸರು, ದಾಳಿ ನಡೆಸಿ ಬಂಧಿಸಿದ್ದಾರೆ. ಆತನಿಂದ 50 ಸಾವಿರ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. [20 ಕಾಲೇಜುಗಳಿಗೆ ಪತ್ರಿಕೆ ಮಾರಿದ್ದ ಶಿವಕುಮಾರ ಸ್ವಾಮಿ]
ಹಲವು ಪತ್ರಿಕೆ ಬಯಲು ಮಾಡಿದ್ದ : ಪಿಯುಸಿ ಪರೀಕ್ಷೆ ಮಾತ್ರವಲ್ಲದೇ ಹಲವು ಸರ್ಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಪತ್ರಿಕೆಯನ್ನು ಶಿವಕುಮಾರ ಸ್ವಾಮಿ ಬಯಲು ಮಾಡುತ್ತಿದ್ದ. ಶಿಕ್ಷಣ ಇಲಾಖೆಯ ಕೆಲ ಅಧಿಕಾರಿಗಳ ಪರಿಚಯ ಮಾಡಿಕೊಂಡು, ಹಣದ ಅಮಿಷವೊಡ್ಡಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಲಕ್ಷಾಂತರ ಹಣ ಗಳಿಸುತ್ತಿದ್ದ.
ಮೂಲತಃ ತುಮಕೂರಿನವನು : ಶಿವಕುಮಾರ ಸ್ವಾಮಿ ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವನು. ನಂದಿನಿ ಲೇಔಟ್ನಲ್ಲಿ ವಾಸವಾಗಿದ್ದ ಆತ, ಉಪನ್ಯಾಸಕ ಹುದ್ದೆಗೆ ರಾಜೀನಾಮೆ ನೀಡಿ, ಮಗನೊಂದಿಗೆ ಟ್ಯುಟೋರಿಯಲ್ ನಡೆಸುತ್ತಾ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುತ್ತಿದ್ದ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications