ಪಿಯುಸಿ ವಿದ್ಯಾರ್ಥಿಗಳ ಮಾಹಿತಿ ಆನ್ ಲೈನ್ ನಲ್ಲೇ ಲಭ್ಯ
ಬೆಂಗಳೂರು, ಜ. 30: ಪಿಯುಸಿ ವಿದ್ಯಾರ್ಥಿಗಳ ಸಕಲ ಮಾಹಿತಿಯನ್ನು ಆನ್ ಲೈನ್ ಮೂಲಕ ದಾಖಲು ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಸುಷಮಾ ಗೋಡಬೋಲೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕಾಲೇಜುಗಳಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿ ಪಡೆಯುವ ವಿದ್ಯಾರ್ಥಿಗಳ ಕುರಿತ ಮಾಹಿತಿಯನ್ನು ಕಾಲೇಜು ಸಿಬ್ಬಂದಿ ಆನ್ಲೈನ್ ಮೂಲಕ ದಾಖಲು ಮಾಡಿಕೊಳ್ಳುತ್ತಾರೆ. ಇದಕ್ಕಾಗಿ ಕಾಲೇಜು ಪ್ರಾಚಾರ್ಯರಿಗೆ ಐಡಿ ಮತ್ತು ಪಾಸ್ವರ್ಡ್ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.[ಸಿಇಟಿ ಆನ್ ಲೈನ್ ನೋಂದಣಿ ಜನವರಿ 30 ರಿಂದ ಆರಂಭ]

ಈ ಯೋಜನೆಯಿಂದ ವಿದ್ಯಾರ್ಥಿಗಳ ಎಲ್ಲ ಮಾಹಿತಿಯು ಆನ್ಲೈನ್ನಲ್ಲೇ ಲಭ್ಯವಾಗುತ್ತದೆ. ಮುಂದಿನ ವರ್ಷ ಈ ವಿದ್ಯಾರ್ಥಿಗಳು ಸಿಇಟಿಗೆ ಅರ್ಜಿ ಸಲ್ಲಿಸುವಾಗ ಮತ್ತು ಸೀಟಿಗಾಗಿ ನಡೆಯುವ ಕೌನ್ಸೆಲಿಂಗ್ನ ಸಂದರ್ಭದಲ್ಲೂ ಈ ಮಾಹಿತಿಗಳು ನೆರವಾಗಲಿವೆ. ಸಿಇಟಿ ಹೊರತಾಗಿ ಶಿಷ್ಯ ವೇತನದ ವಿತರಣೆಗೂ ಈ ಮಾಹಿತಿಗಳನ್ನು ಬಳಸಬಹುದಾಗಿದೆ. ಇದೇ ವ್ಯವಸ್ಥೆಯನ್ನು ಪದವಿ ಶಿಕ್ಷಣಕ್ಕೂ ವಿಸ್ತರಿಸುವ ಸಂಬಂಧ ಆಯುಕ್ತರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.[ಏಪ್ರಿಲ್ 29ರಿಂದ ಸಿಇಟಿ ಪರೀಕ್ಷೆ]
ನಿಯಮಗಳಿಗೆ ತಿದ್ದುಪಡಿ: ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಕಾಯಂ ಆಗಿ ನೇಮಕ ಪಡೆದಿರುವ 9 ಕಾಯಂ ಸಿಬ್ಬಂದಿ ಇದ್ದಾರೆ. ಗುತ್ತಿಗೆ ಆಧಾರಿತ 40 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮಗೆ ಕಾಯಂ ಸಿಬ್ಬಂದಿ ಅಗತ್ಯ ಇದೆ. ಹಾಗಾಗಿ ವೃಂದ ಮತ್ತು ನೇಮಕಾತಿ (ಸಿ ಆಂಡ್ ರೂಲ್) ನಿಯಮಗಳಿಗೆ ಶೀಘ್ರದಲ್ಲಿ ತಿದ್ದುಪಡಿ ತರಲಾಗುವುದು. ಸರ್ಕಾರದಿಂದ ಅನುಮತಿ ಪಡೆದು ಕೆಲವು ತಿಂಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಅವರು ಹೇಳಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications