ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿಗೆ ಪಿಯು ಅಂಕ ವಿವಾದ; ಕೌನ್ಸೆಲಿಂಗ್ ಆರಂಭಿಸಲ್ಲ ಎಂದ ಸರ್ಕಾರ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಆಗಸ್ಟ್ 08; 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಸಿಇಟಿಗೆ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮ ಪ್ರಶ್ನಿಸಿ ಕೆಲ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೆಇಎ ಕ್ರಮ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್. ಈಶ್ವರ್ ಸೇರಿ ಹಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್. ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು. ಆಗ ಸರ್ಕಾರವು ಅರ್ಜಿಯ ಮುಂದಿನ ವಿಚಾರಣೆಯವರೆಗೆ 2022 ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದೆ.

ಸಿಇಟಿ: ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್ ಪ್ರಾರಂಭ ಸಿಇಟಿ: ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್ ಪ್ರಾರಂಭ

ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಸದ್ಯ ದಾಖಲೆ ಪರಿಶೀಲನೆ ಪ್ರಕ್ರಿಯೆ ಆರಂಭಿಕ ಹಂತದಲ್ಲಿದೆ. ಈ ಅರ್ಜಿ ಕುರಿತ ಮುಂದಿನ ವಿಚಾರಣೆಯವರೆಗೆ ಕೆಇಎ ನೈಜ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ವರ್ಷದಿಂದ ಆನ್‌ಲೈನ್‌ನಲ್ಲಿ ನಡೆಯಲಿದೆ ಸಿಇಟಿ ದಾಖಲೆಗಳ ಪರೀಶಿಲನೆ ಈ ವರ್ಷದಿಂದ ಆನ್‌ಲೈನ್‌ನಲ್ಲಿ ನಡೆಯಲಿದೆ ಸಿಇಟಿ ದಾಖಲೆಗಳ ಪರೀಶಿಲನೆ

PUC Students Plea: State Tells HC It Will Not Commence CET Counseling

ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಕೆಇಎ ಯಾವುದೇ ತೆರನಾದ ದಾಖಲೆಗಳನ್ನು ಪರಿಶೀಲಿಸುವುದು ಅರ್ಜಿದಾರ ವಿದ್ಯಾರ್ಥಿಗಳ ಹಕ್ಕು ಮತ್ತು ವಾದಕ್ಕೆ ತೊಂದರೆ ಉಂಟು ಮಾಡುವಂತಿರಬಾರದು. ಇದು ನ್ಯಾಯಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಹಾಗೆಯೇ, ಮುಂದಿನ ವಿಚಾರಣೆಯೊಳಗೆ ಅರ್ಜಿಗೆ ಆಕ್ಷೇಪಣೆ ಇದ್ದರೆ ಕೆಇಎ ಸಲ್ಲಿಸಬಹುದು ಎಂದು ಸೂಚಿಸಿ ವಿಚಾರಣೆಯನ್ನು ಆಗಸ್ಟ್ 18ರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.

ಮ್ಯಾನೇಜ್‍ಮೆಂಟ್ ಕೋಟಾದ ಎಂಜಿನಿಯರಿಂಗ್ ಪ್ರವೇಶಕ್ಕೆ ರಾಷ್ಟ್ರ ಮಟ್ಟದ ಸಿಇಟಿ ನಡೆಸಲು ಸಿದ್ಧಮ್ಯಾನೇಜ್‍ಮೆಂಟ್ ಕೋಟಾದ ಎಂಜಿನಿಯರಿಂಗ್ ಪ್ರವೇಶಕ್ಕೆ ರಾಷ್ಟ್ರ ಮಟ್ಟದ ಸಿಇಟಿ ನಡೆಸಲು ಸಿದ್ಧ

ಅರ್ಜಿದಾರರ ಪರ ಹಿರಿಯ ವಕೀಲರು, 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ 2021-22ನೇ ಶೈಕ್ಷಣಿಕ ವರ್ಷದ ಪಿಯು ಅಂಕ ಅನ್ವಯಿಸುವುದಿಲ್ಲ ಎಂದು ಕೆಇಎ ಹೇಳಿದೆ. ಈ ಕುರಿತು ಸಂಬಂಧಪಟ್ಟ ಕಾಯ್ದೆಗೆ ತಿದ್ದುಪಡಿ ತರದೇ ಆದೇಶ ಮಾಡಿ, ಜಾರಿಗೊಳಿಸಲು ಮುಂದಾಗಿದೆ. ಪರೀಕ್ಷೆ ಮುಗಿದ್ದು, ಫಲಿತಾಂಶ ಪ್ರಕಟಿಸಿರುವಾಗ ಕೆಇಎ ನಿಯಮ ಬದಲಿಸಲಾಗದು. ಅಲ್ಲದೇ 2020-21, 2021-22 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಪಡೆದಿರುವ ಅಂಕಗಳನ್ನು ಆಧರಿಸಿ ಶ್ರೇಯಾಂಕ ಪ್ರಕಟಿಸಬೇಕು. ಇದರಿಂದ ಯಾರಿಗೂ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು.

ಅರ್ಜಿದಾರರು 2020-21ನೇ ಸಾಲಿನಲ್ಲಿ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದವರು ಹಾಗೂ ಇವರು 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 20202ರ ಜುಲೈನಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಸಿಇಟಿ ಪರೀಕ್ಷೆ ಫಲಿತಾಂಶವನ್ನು ಜು.30ರಂದು ಪ್ರಕಟಿಸಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಅಲ್ಲದೇ ಅರ್ಜಿದಾರರು 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ 2022ನೇ ಸಿಇಟಿ ಪರೀಕ್ಷೆಯಲ್ಲಿನ ಅವರ ಶ್ರೇಯಾಂಕ ಪ್ರಕಟಿಸಲಾಗಿದೆ. ಆದರೆ, 2021ನೇ ಸಾಲಿನ ಪಿಯು ಪರೀಕ್ಷೆ ಅರ್ಜಿದಾರರು ಪಡೆದ ಶೇ.50ರಷ್ಟು ಅಂಕಗಳನ್ನು ಪರಿಗಣಿಸಬೇಕಿತ್ತು. ಆದರೆ, ಕೇವಲ 2022ರ ಸಿಇಟಿಯಲ್ಲಿ ಪಡೆದ ಅಂಕಗಳನ್ನು ಮಾತ್ರ ಪರಿಗಣಿಸಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದು ತಾರತಮ್ಯ ನೀತಿಯಿಂದ ಕೂಡಿದೆ ಎಂದು ಅರ್ಜಿದಾರರು ದೂರಿದ್ದಾರೆ.

ಸಿಇಟಿ ಶ್ರೇಯಾಂಕಕ್ಕೆ 2021ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಅರ್ಜಿದಾರರು ಪಡೆದ ಅಂಕಗಳನ್ನು ಪರಿಗಣಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು. ಅರ್ಜಿ ಇತ್ಯರ್ಥವಾಗುವರೆಗೂ 2022ನೇ ಸಾಲಿನ ಸಿಇಟಿ ಕೌನ್ಸಿಲಿಂಗ್‌ಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Recommended Video

Virat Kohli ತಮ್ಮ ನೂರನೇ ಪಂದ್ಯವನ್ನು Pakistan ವಿರುದ್ಧ ಆಡಲಿದ್ದಾರೆ | *Cricket | OneIndia Kannada

English summary
Students moved high court against their pre-university (PU) marks not being considered while deciding the final Common Entrance Test (CET) ranks. Now govt said to high court that it will not commence CET counseling
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X