ಮಾರ್ಚ್ 10ರಂದು ಮರೆಯದೇ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ
ಬೆಂಗಳೂರು, ಮಾರ್ಚ್ 6: ಇದೇ ತಿಂಗಳು (ಮಾರ್ಚ್) 10 ರಂದು ರಾಜ್ಯದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಒಂದೇ ಸುತ್ತಿನ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ಅವರು ತಿಳಿಸಿದರು.
ವಿಕಾಸಸೌಧದಲ್ಲಿ ಈ ಕುರಿತು ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೋಲಿಯೋ ಸೋಂಕು ಮಕ್ಕಳಲ್ಲಿ ತೀವ್ರತರವಾದ ಅಸ್ವಸ್ಥತೆ ಮತ್ತು ಪಾಶ್ರ್ವವಾಯು ಉಂಟುಮಾಡಿ ಸಾವು ಸಂಭವಿಸುವ ಸಾಧ್ಯತೆಯನ್ನು ಹೆಚ್ಚು ಮಾಡುತ್ತವೆ ಎಂದರು.
2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಪತ್ತೆಯಾದ ಪೋಲಿಯೋ ಭಾರತದ ಕೊನೆಯ ಪ್ರಕರಣ. ಭಾರತಕ್ಕೆ 2014 ರಲ್ಲಿ ಪೋಲಿಯೋ ಮುಕ್ತ ರಾಷ್ಟ್ರ ಎಂಬ ಬಿರುದನ್ನು ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ. ಇತ್ತೀಚೆಗೆ ಅಫ್ಫಾನಿಸ್ತಾನದಲ್ಲಿ 2 ಹಾಗೂ ಪಾಕಿಸ್ತಾನದಲ್ಲಿ 4 ಪೋಲಿಯೋ ಪ್ರಕರಣಗಳು ಕಂಡು ಬಂದಿರುವ ಹಿನ್ನೆಲಯಲ್ಲಿ ಭಾರತಕ್ಕೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮಾರ್ಚ್ 10 ರಂದು ನಡೆಯುವ ಈ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಎಂದಿನಂತೆ ಪ್ರತಿ ಶಿಶುವಿಗೆ 5 ವರಸೆ ಒಪಿವಿ (ಓರಲ್ ಪೋಲಿಯೋ ವ್ಯಾಕ್ಸೀನ್) ಮತ್ತು 2 ವರಸೆ ಐಪಿವಿ(ಇನ್ಜಕ್ಟಬಲ್ ಪೋಲಿಯೋ ವ್ಯಾಕ್ಸೀನ್) ಲಸಿಕೆಗಳನ್ನು ನೀಡಲಾಗುತ್ತಿದೆ. ಯಾವುದೇ ಮಗುವು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳುವ ಗುರಿ ಈ ಕಾರ್ಯಕ್ರಮದ್ದಾಗಿದೆ ಎಂದರು.
ಈ ರಾಜ್ಯದಲ್ಲಿ ಹಳ್ಳಿ, ಗುಡ್ಡಗಾಡು ಪ್ರದೇಶ, ಇಟ್ಟಿಗೆ ಬಟ್ಟೆ, ಕಾಮಗಾರಿ ವಲಸೆ ಪ್ರದೇಶಗಳು, ರೈಲ್ವೇ ಸ್ಟೇಷನ್, ಮೆಟ್ರೋ ಏರ್ಪೋರ್ಟ್ ಆಸ್ಪತ್ರೆಗಳಲ್ಲಿಯೂ ಲಸಿಕೆ ಹಾಕಲು ಕ್ರಮ ವಹಿಸಲಾಗಿದೆ. ಈ ಬಾರಿ 64,85,980 ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಬೂತ್ಗಳ ಸಂಖ್ಯೆ 32,571, ತಂಡಗಳ ಸಂಖ್ಯೆ 51,918, ಲಸಿಕಾ ಕಾರ್ಯಕರ್ತರು 11,0351, ಮೇಲ್ವಿಚಾರಕರು 7827, ಸಂಚಾರಿ ತಂಡ 2481, ಟ್ರಾನ್ಸಿಲ್ ತಂಡ-4300 ಇದಕ್ಕಾಗಿ 96 ಲಕ್ಷ ಡೋಸ್ ಪೋಲಿಯೋ ಲಸಿಕೆ, ಮಾರ್ಕರ್ ಪೆನ್ಸ್, ಪೋಸ್ಟರ್ಸ್, ಬ್ಯಾನರ್ಸ್, ರ್ಯಾಲಿ ಜಾಥಾ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಯಶಸ್ಸು ಸಾಧಿಸಲು ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಸಮನ್ವಯ ನಡೆಸಲಾಗುತ್ತಿದೆ. ಇದಲ್ಲದೆ ಕಾರ್ಯಕ್ರಮಕ್ಕೆ ಸಹಕಾರ ಸಂಘ ಸಂಸ್ಥೆಗಳಾದ ವಿಶ್ವ ಆರೋಗ್ಯ ಸಂಸ್ಥೆ, ಯುನಿಸೆಫ್, ರೋಟರಿ, ಐ.ಎಂ.ಎ.ಗಳ ಸಹಕಾರ ಸಹ ಇದೆ.
ಈ ಹಿಂದೆ ಮಕ್ಕಳಿಗೆ ಎಷ್ಟು ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ, ಈ ಅಭಿಯಾನದಲ್ಲಿ ಮತ್ತೆ ಲಸಿಕೆ ಹಾಕಿಸುವುದು ಅವಶ್ಯಕವಾಗಿದೆ. ಆದ್ದರಿಂದ ಎಲ್ಲರೂ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಹಕಾರ ನೀಡೋಣ ಎಂದು ಸಚಿವರು ಹೇಳಿದರು.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications