ಭಾನುವಾರ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಮರೆಯದಿರಿ
ಬೆಂಗಳೂರು, ಜನವರಿ 16 : ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಈ ಹಿಂದೆ ಎಷ್ಟು ಬಾರಿ ಲಸಿಕೆ ಹಾಕಿಸಿದ್ದರೂ, ಈ ಬಾರಿಯೂ ಮತ್ತೆ ಪೋಲಿಯೋ ಹನಿ ಹಾಕಿಸಿ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಮನವಿ ಮಾಡಿದ್ದಾರೆ.
ವಿಶ್ವಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಿದೆ. ದಕ್ಷಿಣ ರಾಜ್ಯಗಳ ಶೃಂಗಸಭೆಯಲ್ಲಿ ರಾಜ್ಯ ಸರ್ಕಾರ ಸಾಧನೆಗೆ ಪ್ರಶಂಸನಾ ಪತ್ರವೂ ಸಿಕ್ಕಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣ ಕಂಡುಬಂದಿರುವುದರಿಂದ ಮುಂಜಾಗೃತ ಕ್ರಮವಾಗಿ ಲಸಿಕೆ ಹಾಕಲಾಗುತ್ತಿದೆ.

ಎರಡು ಹಂತದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಜನವರಿ 17ರ ಭಾನುವಾರ ಮೊದಲ ಹಂತ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ 74.25 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜನವರಿ 17 ರಂದು ತಮ್ಮ ಮನೆಯ ಹತ್ತಿರವಿರುವ ಬೂತ್ಗಳಲ್ಲಿ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಮನವಿ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ 1,996 ಬೂತ್ಗಳಲ್ಲಿ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಲಿದೆ.
ಜನವರಿ 17ರಂದು ಬೂತ್ಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಜನವರಿ 18, 19, 20 ರಂದು ಬೂತ್ಗಳಲ್ಲಿ ಲಸಿಕೆ ಹಾಕಿಸದೆ ಬಿಟ್ಟುಹೋದ ಮಕ್ಕಳ ಮನೆಮನೆಗೆ ತೆರಳಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಫೆ. 21 ರಂದು ಎರಡನೇ ಸುತ್ತಿನ ಲಸಿಕೆ ಕಾರ್ಯಕ್ರಮ ನಡೆಯಲಿದೆ.
ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಳ್ಳಿ, ಪಟ್ಟಣ, ನಗರ ಸಹಿತ ಒಟ್ಟು 3,2617 ಬೂತ್ಗಳಲ್ಲಿ 1,03,464 ಕಾರ್ಯಕರ್ತರು ಲಸಿಕೆ ಹಾಕಲಿದ್ದಾರೆ. ಇದಕ್ಕಾಗಿ 51,732 ತಂಡಗಳು, 1,205 ಸಂಚಾರಿ ತಂಡಗಳು, 1,736 ಟ್ರಾನ್ಸಿಟ್ ತಂಡಗಳು ಮತ್ತು 6,522 ಮೇಲ್ವಿಚಾರರನ್ನು ನೇಮಿಸಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications