ರಾಜಕಾರಣದ ಬಗ್ಗೆ ಪುನೀತ್ ರಾಜ್ ಕುಮಾರ್ ಪತ್ರ
Recommended Video
ಬೆಂಗಳೂರು, ಮಾರ್ಚ್ 20 : 'ನನಗೂ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ಹೆಸರನ್ನು ಚುನಾವಣೆಗೆ ಹಾಗೂ ರಾಜಕಾರಣಕ್ಕೆ ಸಂಬಂಧಿಸಬೇಡಿ' ಎಂದು ಪುನೀತ್ ರಾಜ್ ಕುಮಾರ್ ಹೇಳಿದ್ದಾರೆ.
ಬುಧವಾರ ಪುನೀತ್ ರಾಜ್ ಕುಮಾರ್ ಪತ್ರವೊಂದನ್ನು ಬರೆದಿದ್ದು ರಾಜಕಾರಣದ ಬಗ್ಗೆ ಅದರಲ್ಲಿ ಸ್ಪಷ್ಟನೆ ನೀಡಿದ್ದಾರೆ. 'ನಾನು ಒಬ್ಬ ನಟನಾಗಿ ನನ್ನನ್ನು ಕಲೆಯ ಜೊತೆಗೆ ಗುರುತಿಸಿಕೊಳ್ಳುತ್ತೇನೆ ಹೊರತು ರಾಜಕಾರಣದಲ್ಲಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.
ಮೊದಲ ಭಾಷಣದಲ್ಲೇ ಸುಮಲತಾ ಸಿಕ್ಸರ್, ಎದುರಾಳಿಗಳಿಗೆ ಬೌನ್ಸರ್!
ಮಾಜಿ ಸಚಿವ ದಿ.ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಟರಾದ ದರ್ಶನ್ ಮತ್ತು ಯಶ್ ಅವರಿಗೆ ಬೆಂಬಲ ನೀಡಿದ್ದಾರೆ.
ಸುಮಲತಾ ಅಕ್ಕ ಗೆದ್ದರೆ ಡೆಲ್ಲಿವರೆಗೆ ಮಂಡ್ಯ ಹವಾ: ಅಣ್ತಮ್ಮ ಯಶ್
ಪುನೀತ್ ರಾಜ್ ಕುಮಾರ್ ಅವರು ಸುಮಲತಾ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ಎದ್ದಿತ್ತು. ಬುಧವಾರ ಪುನೀತ್ ಪತ್ರದ ಮೂಲಕ ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಮತ್ತು ಅಭಿಮಾನಿಗಳಿಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ನನಗೆ ಯಾವುದೇ ಗೊಂದಲ ಇಲ್ಲ, ನನ್ನ ಜೊತೆ ಅವರಿದ್ದಾರೆ: ಸುಮಲತಾ
ಎಲ್ಲರಿಗೂ ನಮಸ್ಕಾರ
ಎಲ್ಲರಿಗೂ ನನ್ನ ನಮಸ್ಕಾರ, ನನಗು ರಾಜಕಾರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂಬುದು ನಿಮಗೆ ತಿಳಿದಿರುವ ವಿಚಾರ. ನಾನು ಒಬ್ಬ ನಟನಾಗಿ ನನ್ನನ್ನು ಕಲೆಯ ಜೊತೆಗೆ ಗುರುತಿಸಿಕೊಳ್ಳುತ್ತೇನೆ ಹೊರತು ರಾಜಕಾರಣದಲ್ಲಲ್ಲ ಎಂದು ಪುನೀತ್ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
ಮತಚಲಾಯಿಸಿ
ಕನ್ನಡ ಜನತೆಗೆ ಹಾಗೂ ನಮ್ಮ ಅಭಿಮಾನಿಗಳಿಗೆ ಅವರ ಮತಗಳನ್ನು ಪ್ರಬುದ್ಧವಾಗಿ ಚಲಾಯಿಸಿ ಎಂದು ಕೇಳಿಕೊಂಡಿದ್ದೇನೆ ಹೊರತು ಯಾವುದೇ ಪಕ್ಷ ಹಾಗೂ ವ್ಯಕ್ತಿಗೆ ಎಂದಿಗೂ ಸೂಚಿಸಿರುವುದಿಲ್ಲ.
ಇಬ್ಬರಿಗೂ ಒಳ್ಳೆಯದಾಗಲಿ
ಗೌರವಾನ್ವಿತ ದೇವೇಗೌಡರ ಕುಟುಂಬವು ಹಾಗೂ ಅಂಬರೀಶ್ ಅವರ ಕುಟುಂಬವೂ ನಮ್ಮ ಕುಟುಂಬದ ಹಾಗೆ. ಇಬ್ಬರು ನಮ್ಮ ಹಿತೈಷಿಗಳೇ. ಇಬ್ಬರಿಗೂ ಒಳ್ಳೆಯದಾಗಲಿ, ಆ ಭಗವಂತ ನಿಮಗೆ ಜನಸೇವೆ ಮಾಡುವ ಶಕ್ತಿ ಇನ್ನಷ್ಟು ಕೊಡಲಿ ಎಂದು ಪ್ರಾರ್ಥಿಸುತ್ತೇನೆ.
ನನ್ನ ಹೆಸರನ್ನು ಸಂಬಂಧಿಸಬೇಡಿ
ನನ್ನ ಹೆಸರನ್ನು ಚುನಾವಣೆ ಹಾಗೂ ರಾಜಕಾರಣಕ್ಕೆ ಸಂಬಂಧಿಸಬೇಡಿ ಎಂದು ಎಲ್ಲರಲ್ಲೂ ವಿನಂತಿಸಿಕೊಳ್ಳುತ್ತೇನೆ ಎಂದು ಪುನೀತ್ ರಾಜ್ ಕುಮಾರ್ ಪತ್ರದಲ್ಲಿ ಹೇಳಿದ್ದಾರೆ.
ನಿಮ್ಮ ಮತ ನಿನ್ನ ಆಯ್ಕೆ ಎಂದು ಪತ್ರ ಕೊನೆಗೊಂಡಿದ್ದು, ಪುನೀತ್ ರಾಜ್ ಕುಮಾರ್ ಸಹಿ ಇದೆ.