Puneeth Satellite : ಶ್ರೀಹರಿಕೋಟಾದಿಂದ ಪುನೀತ್ ರಾಜಕುಮಾರ್ ಉಪಗ್ರಹಣ ಉಡಾವಣೆ
ಬೆಂಗಳೂರು, ಆಗಸ್ಟ್ 25: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ನಿರ್ಮಿಸುತ್ತಿರುವ ಪುನೀತ್ ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದ ಕೇಂದ್ರದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. "ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆ ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುವುದು,'' ಎಂದು ತಿಳಿಸಿದರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೇರಿದಂತೆ ಇತರ ಹಿರಿಯ ವಿಜ್ಞಾನಿಗಳು ಸಭೆಯಲ್ಲಿ ಹಾಜರಿದ್ದರು.

ಎಲ್ಲಾ ಜಿಲ್ಲೆಗಳ ಡಿಡಿಪಿಐಗಳಿಗೆ ಸೂಚನೆ
ಈ ಸ್ಪರ್ಧೆ ಭಾಗವಾಗಿ ಪ್ರೌಢಶಾಲಾ ಮಕ್ಕಳಿಗೆ ಆನ್ಲೈನ್ ರಸಪ್ರಶ್ನೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ರಚನೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಪೋಸ್ಟರ್ ರಚನೆ ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಎಲ್ಲಾ 31 ಜಿಲ್ಲೆಗಳ ಡಿಡಿಪಿಐಗಳಿಗೆ ಸೂಚನೆ ಕೊಡಲಾಗಿದೆ ಎಂದು ಸಚಿವರು ತಿಳಿಸಿದರು.

ಒಟ್ಟು 75 ಉಪಗ್ರಹ ಅಭಿವೃದ್ಧಿಪಡಿಸುವ ಯೋಜನೆ
ಸ್ವಾತಂತ್ರದ 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಅನ್ನು ಘೋಷಿಸಿದ್ದರು. ಈ ಪೈಕಿ ಬೆಂಗಳೂರು ವಲಯದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು 'ಕೆಜಿಎಸ್3ಸ್ಯಾಟ್' ಉಪಗ್ರಹವನ್ನು 1.90 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಉಪಗ್ರಹಕ್ಕೆ ಪುನೀತ್ ಹೆಸರು
ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ದಿವಂಗತ ನಟ ಪುನೀತ್ ರಾಜಕುಮಾರ್ ಸ್ಮರಣಾರ್ಥ ಈ ಉಪಗ್ರಹಕ್ಕೆ ಅವರ ಹೆಸರನ್ನು ಇಡಲಾಗಿದೆ. ಪ್ರಧಾನಿಯವರ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ," ಎಂದು ಸಚಿವರು ವಿವರಿಸಿದರು.

ಸರ್ಕಾರದ ಆಶಯವೇನು: ಸಚಿವರು ಹೇಳಿದ್ದೇನು?
ರಾಜ್ಯದಲ್ಲಿ ವಿದ್ಯಾರ್ಥಿಗಳು ಕೇವಲ ಉಪಗ್ರಹ ಅಭಿವೃದ್ಧಿ ಯೋಜನೆಯಲ್ಲಿ ಪಾಲ್ಗೊಂಡರೆ ಸಾಕಾಗುವುದಿಲ್ಲ. ಇದರ ಜೊತೆಗೆ ಬಾಹ್ಯಾಕಾಶ, ಖಗೋಳ ವಿಜ್ಞಾನ, ಅಂತರಿಕ್ಷ ಇತ್ಯಾದಿ ವಿಷಯಗಳ ಬಗ್ಗೆ ತಿಳಿದುಕೊಂಡಿರಬೇಕು. ಆ ಮೂಲಕ ಶಿಕ್ಷಣವನ್ನು ಸಂಭ್ರಮಿಸಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಇದೇ ಉದ್ದೇಶದಿಂದ ಸ್ಪರ್ಧೆ ಮತ್ತು ವಿಜೇತರಿಗೆ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದರು.

ಯಾವ ಸ್ಪರ್ಧೆ ಯಾವುದು ಲಾಸ್ಟ್ ಡೇಟ್?
* ವಿದ್ಯಾರ್ಥಿಗಳ ಹೆಸರು ನೋಂದಣಿಗೆ ಕೊನೆ ದಿನ: ಸೆ.10
* ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆ: ಸೆ.19 ರಿಂದ 23
* ಪ್ರಬಂಧಗಳನ್ನು ಅಪ್ಲೋಡ್ ಮಾಡಲು ಕೊನೆ ದಿನ: ಸೆ.20
* ಜಿಲ್ಲಾ ಮಟ್ಟದ ವಿಜ್ಞಾನ ಚಿತ್ರಕಲೆ ಸ್ಪರ್ಧೆ: ಸೆ.26 ರಿಂದ 30
* ವಿಭಾಗ ಮಟ್ಟದ ಪೋಸ್ಟರ್ ಸ್ಪರ್ಧೆ: ಅಕ್ಟೋಬರ್ 3 ರಿಂದ 7
* ಜಿಲ್ಲಾ ಮಟ್ಟದ ಫಲಿತಾಂಶ ಪ್ರಕಟಣೆ: ಅಕ್ಟೋಬರ್ ಮಧ್ಯ ಭಾಗ
* ರಾಜ್ಯ ಮಟ್ಟದ ಕ್ವಿಜ್: ಅ.17 ರಿಂದ 19
* ರಾಜ್ಯ ಮಟ್ಟದ ಪೋಸ್ಟರ್ ಸ್ಪರ್ಧೆ (ಆನ್ಲೈನ್): ಅ.18 ರಿಂದ 20
* ರಾಜ್ಯ ಮಟ್ಟದ ಫಲಿತಾಂಶ ಘೋಷಣೆ: ಅಕ್ಟೋಬರ್ ಕೊನೆಯ ವಾರ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications