Karnataka election: 'ಮತ ಚಲಾಯಿಸುವಾಗ ಜೈ ಬಜರಂಗ ಬಲಿ ಹೇಳುವ ಮೂಲಕ ಶಿಕ್ಷಿಸಿ': ಕಾಂಗ್ರೆಸ್ ವಿರುದ್ಧ ಮೋದಿ ಕಿಡಿ
ಅಂಕೋಲಾ, ಮೇ. 03: 'ಕಾಂಗ್ರೆಸ್ದು ನಿಂದನೆ ಸಂಸ್ಕೃತಿ' ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇ 10 ರಂದು ಮತಗಟ್ಟೆಗಳಲ್ಲಿ ಮತ ಚಲಾಯಿಸುವ ಸಂದರ್ಭದಲ್ಲಿ ಜೈ ಬಜರಂಗ ಬಲಿ ಎಂದು ಹೇಳುವ ಮೂಲಕ ಅವರನ್ನು ಶಿಕ್ಷಿಸುವಂತೆ ಕರ್ನಾಟಕದ ಜನತೆಗೆ ಮನವಿ ಮಾಡಿದ್ದಾರೆ.
ತಾವು "ಭ್ರಷ್ಟ ವ್ಯವಸ್ಥೆಯನ್ನು" ಹಾಳು ಮಾಡಿರುವ ಕಾರಣ ಕಾಂಗ್ರೆಸ್ ಮತ್ತು ಅದರ ನಾಯಕರು ತನ್ನನ್ನು ದ್ವೇಷಿಸುತ್ತಾರೆ ಮತ್ತು ಬಾಯಿಗೆ ಬಂದಂತೆ ನಿಂದಿಸುತ್ತಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. "ಈ ಚುನಾವಣೆಯಲ್ಲಿ ಕಾಂಗ್ರೆಸ್, ನಿವೃತ್ತಿಯಾಗುತ್ತಿರುವ ತನ್ನ ನಾಯಕನ ಹೆಸರಿನಲ್ಲಿ ಮತ ಕೇಳುತ್ತಿದೆ. ಅವರು ಮತ ಕೇಳುವ ಇನ್ನೊಂದು ಮಾರ್ಗವೆಂದರೆ ಮೋದಿಯನ್ನು ನಿಂದಿಸುವುದು" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, "ಕರ್ನಾಟಕದಲ್ಲಿ ಯಾರಾದರೂ ಈ ನಿಂದನೆ ಸಂಸ್ಕೃತಿಯನ್ನು ಒಪ್ಪಿಕೊಳ್ಳುತ್ತಾರೆಯೇ..? ಯಾರನ್ನಾದರೂ ನಿಂದಿಸಲು ಯಾರು ಇಷ್ಟಪಡುತ್ತಾರೆಯೇ..? ಯಾರಾದರೂ ಸಣ್ಣ ಮನುಷ್ಯನನ್ನೂ ನಿಂದಿಸುವುದನ್ನು ಇಷ್ಟಪಡುತ್ತಾರೆಯೇ..? ನಿಂದಿಸುವವರನ್ನು ಕರ್ನಾಟಕ ಕ್ಷಮಿಸುತ್ತದೆಯೇ?" ಎಂದು ಪ್ರಶ್ನಿಸುತ್ತಾರೆ.
ಮುಂದುವರಿದು, "ಈ ಬಾರಿ ನೀವು ಏನು ಮಾಡುತ್ತೀರಿ..? ನೀವು ಅವರನ್ನು ಶಿಕ್ಷಿಸುತ್ತೀರಾ..? ನೀವು ಮತಗಟ್ಟೆಯಲ್ಲಿನ ಮತದಾನ ಮಾಡುವ ಗುಂಡಿಯನ್ನು ಒತ್ತಿದಾಗ 'ಜೈ ಬಜರಂಗ ಬಲಿ' ಎಂದು ಹೇಳುವ ಮೂಲಕ ಅವರನ್ನು ಶಿಕ್ಷಿಸಿ" ಎಂದು ಜನರಿಗೆ ಆಗ್ರಹಿಸಿದ್ದಾರೆ.

ಕರ್ನಾಟಕವನ್ನು ದೇಶದಲ್ಲೇ ನಂಬರ್ ಒನ್ ರಾಜ್ಯವನ್ನಾಗಿ ಮಾಡುವುದೇ ಬಿಜೆಪಿಯ ಏಕೈಕ ಗುರಿಯಾಗಿದ್ದು, ಅದಕ್ಕಾಗಿ ಪಕ್ಷವು ಮಾರ್ಗಸೂಚಿಯನ್ನು ಹೊಂದಿದೆ. ಎಲ್ಲಾ ಪ್ರಯತ್ನಗಳನ್ನು ಮಾಡಲು ಸಿದ್ಧವಾಗಿದೆ ಎಂದು ತಿಳಿಸಿದ ಪ್ರಧಾನಿ, ಕಾಂಗ್ರೆಸ್ ತನ್ನ ದಶಕಗಳ ದುರಾಡಳಿತದಿಂದ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.
'ಸುಳ್ಳು ಆಪಾದನೆ, ಸುಳ್ಳು ಭರವಸೆಗಳೇ ಕಾಂಗ್ರೆಸ್ಗೆ ಬೆಂಬಲ' ಎಂದ ಅವರು, ದಶಕಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ದೇಶ ಬಿಟ್ಟು ತನ್ನ ಅಭಿವೃದ್ಧಿಯತ್ತಲೇ ಗಮನಹರಿಸಿ ನಾಯಕರ ಖಜಾನೆಯನ್ನು ತುಂಬಿಸಿದೆ. ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ ಸರ್ಕಾರಿ ಫಲಾನುಭವಿಗಳ ಪಟ್ಟಿಯಲ್ಲಿ ನಕಲಿ ಹೆಸರುಗಳನ್ನು ಸೇರಿಸಿದೆ ಎಂದು ಆರೋಪಿಸಿದ ಪ್ರಧಾನಿ ಮೋದಿ, "ಕರ್ನಾಟಕದ ಜನಸಂಖ್ಯೆಗಿಂತ ನಕಲಿ ಹೆಸರುಗಳು ಹೆಚ್ಚಿವೆ. ಅವರ ಹೆಸರಿನಲ್ಲಿ ಹಣವನ್ನು ಖರ್ಚು ಮಾಡಲಾಗಿದೆ. ಅದೆಲ್ಲಾ, ಕಾಂಗ್ರೆಸ್ನ ಭ್ರಷ್ಟ ಜನರ ಖಾತೆಗೆ ಹೋಗುತ್ತಿತ್ತು' ಎಂದಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications