ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೊರೊನಾ 2ನೇ ಅಲೆ ಭೀತಿ: ಯುಗಾದಿ ಸೇರಿದಂತೆ ಎಲ್ಲ ಹಬ್ಬಗಳ ಅದ್ದೂರಿ ಆಚರಣೆಗೆ ಸರ್ಕಾರ ಬ್ರೇಕ್
ಬೆಂಗಳೂರು, ಮಾರ್ಚ್ 25: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಕೊರೊನಾ ಎರಡನೇ ಅಲೆ ಸ್ಫೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿ ಹಬ್ಬ ಆಚರಣೆಗೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದೆ.
ಮುಂಬರುವ ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಸೇರಿದಂತೆ ಮುಂತಾದ ಎಲ್ಲಾ ಹಬ್ಬಗಳನ್ನು ಸಾರ್ವಜನಿಕ ಸ್ಥಳ, ಮೈದಾನ, ಸಾರ್ವಜನಿಕ ಪಾರ್ಕ್, ಮಾರುಕಟ್ಟೆ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ.
ಹಬ್ಬ ಆಚರಣೆ ಸಲುವಾಗಿ ಗುಂಪು ಸೇರುವಿಕೆಗೆ ನಿಷೇಧ ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೆ ರಾಜ್ಯ ವಿಪತ್ತು ನಿರ್ವಹಣಾ ಕಾಯ್ದೆ(ಎಸ್ಡಿಎಂಎ) ಅಡಿ ಪ್ರಕರಣ ದಾಖಲಾಗಿಸಲಾಗುವುದಾಗಿ ಎಚ್ಚರಿಕೆ ನೀಡಲಾಗಿದೆ.
ಬಿಬಿಎಂಪಿ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಅವರು ಆದೇಶ ಹೊರಡಿಸಿ, ಪರಿಸ್ಥಿತಿ ನಿಭಾಯಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
Recommended Video
ದೂರು
ನೀಡಲಿ
ನಾನು
ಫೇಸ್
ಮಾಡೋಕೆ
ರೆಡಿ
ಇದ್ದೇನೆ
|
Oneindia
Kannada
Comments
English summary
The Karnataka government has canceled grand celebrating the festivals in the rising of Coronavirus 2nd wave in the state.
Story first published: Thursday, March 25, 2021, 21:43 [IST]