ಪೇಜಾವರ ಶ್ರೀಗಳಿಗೆ ಒಂದು ವಾರದ ಮುನ್ನವೇ ಸಾವಿನ ಮುನ್ಸೂಚನೆಯಿತ್ತೇ?
Recommended Video
ಬೆಂಗಳೂರು, ಡಿ 29: ಯತಿಕುಲ ಚಕ್ರವರ್ತಿ, ಮಾಧ್ವಪೀಠದ ಹಿರಿಯ ಯತಿ, ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀವಿಶ್ವೇಶ್ವತೀರ್ಥ ಸ್ವಾಮೀಜಿಗಳು ಹರಿಪಾದವನ್ನು ಸೇರಿದ್ದಾರೆ.
ಅವರೇ ಬಯಸಿದಂತೆ, ಅವರ ಅಂತಿಮ ವಿಧಿವಿಧಾನ, ಬೆಂಗಳೂರಿನ ಪೇಜಾವರ ಮಠದ ಒಡೆತನದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ, ಸಕಲ ಸರಕಾರೀ ಮರ್ಯಾದೆಯೊಂದಿಗೆ ನಡೆಯುತ್ತಿದೆ.
ಡಿಸೆಂಬರ್ ಹತ್ತೊಂಬತ್ತರಂದು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳನ್ನು, ಉಡುಪಿ ಅಷ್ಠಮಠಗಳಲ್ಲೊಂದಾದ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಭೇಟಿಯಾಗಿದ್ದರು. ಆ ವೇಳೆ, ಪೇಜಾವರ ಶ್ರೀಗಳು, ಪುತ್ತಿಗೆ ಶ್ರೀಗಳ ಕಿವಿಯಲ್ಲಿ ಕೇಳಿದ ಪ್ರಶ್ನೆ, ಅವರಿಗೆ ಸಾವಿನ ಮುನ್ಸೂಚನೆಯಿತ್ತೇ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ.

ಶ್ರೀಗಳಿಗೆ ಸಂತಾಪ ಸಲ್ಲಿಸುತ್ತಾ ಪುತ್ತಿಗೆ ಶ್ರೀಗಳು ಹೇಳಿದ್ದು ಹೀಗೆ, " ಶ್ರೀಗಳನ್ನು ಭೇಟಿಯಾದಾಗ ನನ್ನಲ್ಲಿ ಒಂದು ಪ್ರಶ್ನೆಯನ್ನು ಅವರು ಕೇಳಿದರು. ಡಿಸೆಂಬರ್ 23ರ ನಂತರ ಉಡುಪಿ, ಬೆಂಗಳೂರು ಬಿಟ್ಟು ಅಥವಾ ವಿದೇಶಕ್ಕೆ ಹೋಗುತ್ತಿಲ್ಲವಲ್ಲವೇ, ಎನ್ನುವ ಪ್ರಶ್ನೆಯನ್ನು ಕೇಳಿದರು.
"ನಾನು ಇಲ್ಲ, ಎಲ್ಲಿಗೂ ಹೋಗುವ ಕಾರ್ಯಕ್ರಮ ನಿಗದಿಯಾಗಿಲ್ಲ ಎಂದೆ. ಶ್ರೀಗಳು ಯಾವ ಕಾರಣಕ್ಕಾಗಿ ನನಗೆ ಈ ಪ್ರಶ್ನೆಯನ್ನು ಕೇಳಿದರು ಎನ್ನುವುದು ಈಗ ನನಗೆ ಅರ್ಥವಾಗುತ್ತಿದೆ" ಎಂದು ಪುತ್ತಿಗೆ ಶ್ರೀಗಳು ಹೇಳಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ದಾಖಲಾಗಿದ್ದ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನಲೆಯಲ್ಲಿ ಇಂದು (ಡಿ 29) ಬೆಳಗ್ಗೆ, ರಥಬೀದಿಯಲ್ಲಿರುವ ಪೇಜಾವರ ಮಠಕ್ಕೆ ವಿಶೇಷ ಅಂಬುಲೆನ್ಸ್ ಮೂಲಕ ಸ್ಥಳಾಂತರಿಸಲಾಗಿತ್ತು. ಅದಾದ ಸ್ವಲ್ಪಹೊತ್ತಿನಲ್ಲೇ, ಶ್ರೀಗಳು ಹರಿಪಾದ ಸೇರಿದರು ಎನ್ನುವ ಪ್ರಕಟಣೆ ಹೊರಬಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications