ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ನೆಲಮಂಗಲದಲ್ಲಿ PWD ಇಲಾಖೆ ಅಧಿಕಾರಿ ಆತ್ಮಹತ್ಯೆ

ಲೋಕೋಪಯೋಗಿ ಇಲಾಖೆಯ ಅಧಿಕಾರಿಯೊಬ್ಬರು ನೆಲಮಂಗಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

|
Google Oneindia Kannada News

ಬೆಂಗಳೂರು, ಜನವರಿ 27; ತುಮಕೂರು ಜಿಲ್ಲೆಯ ಮಧುಗಿರಿಯ ನಿವಾಸಿಯಾದ ಲೋಕೋಪಯೋಗಿ ಇಲಾಖೆ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

54 ವರ್ಷದ ಲಕ್ಷ್ಮೀ ನರಸಿಂಹಯ್ಯ ಮೃತಪಟ್ಟವರು. ಶುಕ್ರವಾರ ನೆಲಮಂಗಲದಲ್ಲಿರುವ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸ್ಯಾಂಟ್ರೊ ರವಿಯದ್ದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ? ಸ್ಯಾಂಟ್ರೊ ರವಿಯದ್ದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ?

ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಲಕ್ಷ್ಮೀ ನರಸಿಂಹಯ್ಯ ಪ್ರಮುಖವಾದ ಕಡತವೊಂದು ನಾಪತ್ತೆಯಾದ ಬಳಿಕ ಒತ್ತಡಕ್ಕೆ ಒಳಗಾಗಿದ್ದರು ಎಂಬ ಮಾಹಿತಿ ಇದೆ.

 ಕೊಪ್ಪ: ಅಡಿಕೆಗೆ ಎಲೆಚುಕ್ಕಿ ರೋಗ; ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ ಕೊಪ್ಪ: ಅಡಿಕೆಗೆ ಎಲೆಚುಕ್ಕಿ ರೋಗ; ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ

PWD Department Officer Commits Suicide At Nelamangala

ಕಚೇರಿಗೆ ಸಂಬಂಧಪಟ್ಟ ಕಡತ ನಾಪತ್ತೆಯಾದ ಹಿನ್ನಲೆ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಶವವನ್ನು ನೋಡಿದ ಬಳಿಕ ಕುಟುಂಬದವರಿಗೆ ಘಟನೆ ಕುರಿತು ಮಾಹಿತಿ ನೀಡಲಾಗಿದೆ.

ನನ್ನ ಆತ್ಮ ಕಳ್ಳ ಎಂದರೇ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಆರಗ ಜ್ಞಾನೇಂದ್ರನನ್ನ ಆತ್ಮ ಕಳ್ಳ ಎಂದರೇ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಆರಗ ಜ್ಞಾನೇಂದ್ರ

ಘಟನೆ ಬಗ್ಗೆ ಮಾಹಿತಿ ಪಡೆದ ಬಳಿಕ ದಾಬಾಸ್‌ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರೀಶಿಲನೆ ಕೈಗೊಂಡರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಗುರುವಾರ ಆಗಮಿಸಿದ್ದರು; ಮೃತಪಟ್ಟಿರುವ ಲಕ್ಷ್ಮೀ ನರಸಿಂಹಯ್ಯ ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಇಲಾಖೆಯಲ್ಲಿನ ಇಬ್ಬರು ಅಧಿಕಾರಿಗಳ ಸೇವಾ ದಾಖಲಾತಿ ಪುಸ್ತಕಗಳು ಕಳೆದು ಹೋಗಿದ್ದು, ನಾಲ್ಕು ದಿನಗಳಿಂದ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಇದರಿಂದಾಗಿ ಲಕ್ಷ್ಮೀ ನರಸಿಂಹಯ್ಯ ಮನನೊಂದು ಒತ್ತಡಕ್ಕೆ ಒಳಗಾಗಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಎಂದು ತನಿಖೆ ನಡೆಸಲಾಗುತ್ತಿದೆ.

ಗುರುವಾರ ರಾತ್ರಿ ಲಕ್ಷ್ಮೀ ನರಸಿಂಹಯ್ಯ ಶಿವಗಂಗೆ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು. ಶುಕ್ರವಾರ ಮುಂಜಾನೆ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ; ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ತೆರೆಯಲಾಗಿದೆ. ದೂರವಾಣಿ ಸಂಖ್ಯೆ 080 - 25497777.

English summary
Public Works Department (PWD) officer Lakshmi Narasimhayya (54) committed suicide at Shivagange guest house, Nelamangala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X