ಅರೆ ಇಸ್ಕಿ, ಖಮರುಲ್ ಇಸ್ಲಾಂ ಯೂ ಟೂರ್ನ್ ತಗೊಂಡ್ಬಿಟ್ರು!
ಕಲಬುರಗಿ, ಜುಲೈ 01: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡಾಯ ಬಾವುಟ ಹಾರಿಸಿದ್ದವರ ಪೈಕಿ ಮಾಜಿ ಸಚಿವ ಖಮರುಲ್ ಇಸ್ಲಾಂ ಅವರು ಈಗ ಯೂ ಟರ್ನ್ ಹೊಡೆದಿದ್ದಾರೆ. ಸಿದ್ದರಾಮಯ್ಯ ಅವರು ನಮ್ಮ ನಾಯಕರು, ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಕಾಂಗ್ರೆಸ್ ಪಕ್ಷ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದೆ ಎಂದು ಖಮರುಲ್ ಅವರು ಶುಕ್ರವಾರ ಹೇಳಿದ್ದಾರೆ.
ಸಿದ್ದರಾಮಯ್ಯ ಹಾಗೂ ಎಐಸಿಸಿ ಕಾರ್ಯದರ್ಶಿ ಎ.ಚಲ್ಲಕುಮಾರ್ ಭೇಟಿ ಬಳಿಕ ಖಮರುಲ್ ಇಸ್ಲಾಂ ಅವರು ತಮ್ಮ ವರಸೆ ಬದಲಾಯಿಸಿದ್ದಾರೆ. ಈ ಮೂಲಕ ಈಗ ಭಿನ್ನಮತೀಯರ ಪೈಕಿ ಅಂಬರೀಶ್ ಸೈಲಂಟ್ ಆಗಿದ್ದರೆ, ಶ್ರೀನಿವಾಸ್ ಪ್ರಸಾದ್ ಮಾತ್ರ ಗರಂ ಆಗಿದ್ದಾರೆ, ಇಸ್ಲಾಂ ಈಗ ಸಿದ್ದು ಜಪ ಮಾಡುತ್ತಿದ್ದಾರೆ.[ಭಿನ್ನಮತೀಯರ 'ರಾಜಕೀಯ'ದಲ್ಲಿ ಏಕಾಂಗಿಯಾದ ಶ್ರೀನಿವಾಸ ಪ್ರಸಾದ್]

'ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಶ್ರೀನಿವಾಸಪ್ರಸಾದ್ ಜತೆಗಿಲ್ಲ' ಎಂದು ಗುರುವಾರ ಹೇಳಿದ್ದ ಇಸ್ಲಾಂ ಅವರು, ನಾವು ನಾಯಕತ್ವ ಬದಲಾವಣೆ ಬಯಸಿರಲಿಲ್ಲ, ಹೈದರಾಬಾದ್ ಕರ್ನಾಟಕ ಭಾಗಕ್ಕೆ ಅನ್ಯಾಯವಾಗುವುದನ್ನು ತಪ್ಪಿಸಲು ಹೋರಾಟಕ್ಕೆ ಇಳಿದಿದ್ದು ನಿಜ. ಸಂಪುಟ ಪುನಾರಚನೆ ವೇಳೆಯಲ್ಲಿ ಈ ಭಾಗಕ್ಕೆ ನ್ಯಾಯ ಸಂದಾಯವಾಗಿಲ್ಲ ಎಂದು ಅಸಮಾಧಾನಗೊಂಡಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂಬ ವಿಷಯ ಈಗ ಹೈಕಮಾಂಡ್ ತಲುಪಿದೆ. ಶೇ 8೦ಕ್ಕೂ ಅಧಿಕ ಅಲ್ಪಸಂಖ್ಯಾತರನ್ನು ಹೊಂದಿರುವ ಈ ಭಾಗಕ್ಕೆ ಸೂಕ್ತ ಮನ್ನಣೆ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಈ ನಡುವೆ ನಿಗಮ-ಮಂಡಳಿ ರಚನೆಯಲ್ಲಿ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವ ಭರವಸೆಯು ಸಿಕ್ಕಿದೆ. ಎಐಸಿಸಿ ಕಾರ್ಯದರ್ಶಿ ಚೆಲ್ಲಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕೂಡಾ ಖಮರುಲ್ ಅವರಿಗೆ ಭರವಸೆ ನೀಡಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications