ಸಿಐಡಿ ಪೊಲೀಸರಿಗೆ ಹೊಸ ಕಥೆ ಹೇಳಿದ ಗುರೂಜಿ!
ಬೆಂಗಳೂರು, ಮೇ 05 : ಸಿಐಡಿ ಪೊಲೀಸರ ವಶದಲ್ಲಿರುವ ಶಿವಕುಮಾರ ಸ್ವಾಮಿ ಅಲಿಯಾಸ್ ಗುರೂಜಿ ಹೊಸ ಕಥೆ ಹೇಳುತ್ತಿದ್ದಾನೆ. ಹಿಂದೆ ಬಂಧನವಾದ ಬಳಿಕ ತಾನು ಪತ್ರಿಕೆ ಮಾರಾಟ ಮಾಡುವುದನ್ನು ಬಿಟ್ಟದ್ದೇನೆ. ಪತ್ರಿಕೆ ಸೋರಿಕೆಗೂ ನನಗೂ ಸಂಬಂಧವಿಲ್ಲ ಎಂದು ತನಿಖೆಯ ದಾರಿ ತಪ್ಪಿಸುತ್ತಿದ್ದಾನೆ.
ಹೊಸೂರು ರಸ್ತೆಯ ಗಾರ್ವೆಪಾಳ್ಯದ ನಿರ್ಮಾಣ ಹಂತದ ಕಟ್ಟಡದಲ್ಲಿ ಅಡಗಿ ಕುಳಿತಿದ್ದ ಟೊಮೆಟೊ ಅಲಿಯಾಸ್ ಶಿವಕುಮಾರ ಸ್ವಾಮಿ ಅಲಿಯಾಸ್ ಗುರೂಜಿಯನ್ನು ಸಿಐಡಿ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದರು. ಸದ್ಯ, ಸಿಐಡಿ ವಶದಲ್ಲಿರುವ ಆತನ ವಿಚಾರಣೆ ನಡೆಸಲಾಗುತ್ತಿದೆ. [ಶಿವಕುಮಾರ ಸ್ವಾಮಿ ಕುರಿತ ಕುತೂಹಲಕಾರಿ ಕಥೆ!]

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಶಿವಕುಮಾರ ಸ್ವಾಮಿಯೇ ಕಿಂಗ್ಪಿನ್ ಎಂದು ಆತನ ವಿಚಾರಣೆ ನಡೆಸಲಾಗುತ್ತಿದೆ. ಆದರೆ, ಆತ ಪತ್ರಿಕೆ ಸೋರಿಕೆಗೂ ನನಗೂ ಸಂಬಂಧವಿಲ್ಲ. ಈ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾನೆ. [20 ಕಾಲೇಜುಗಳಿಗೆ ಪತ್ರಿಕೆ ಮಾರಿದ್ದ ಶಿವಕುಮಾರ ಸ್ವಾಮಿ]
ಕಿಂಗ್ಪಿನ್ ಕಿರಣ್ : ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕಿಂಗ್ಪಿನ್ ಕಿರಣ್ ಎಂಬುವವನು. ನಾನು 2008ರಲ್ಲಿ ಸಿಕ್ಕಿಬಿದ್ದ ಬಳಿಕ ಆ ವ್ಯಾಪಾರನ್ನು ಬಿಟ್ಟಿದ್ದೇನೆ ಎಂದು ಗುರೂಜಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಈಗ ಕಿರಣ್ ಈ ವ್ಯಾಪಾರ ನೋಡಿಕೊಳ್ಳುತ್ತಿದ್ದಾನೆ. ನನಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾನೆ. [10 ದಿನಗಳ ಕಾಲ ಟೊಮೆಟೊ ಸಿಐಡಿ ವಶಕ್ಕೆ]
ತೀವ್ರ ವಿಚಾರಣೆ : ಸಿಐಡಿ ಅಧಿಕಾರಿಗಳು ಗುರೂಜಿಯ ತೀವ್ರ ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ. ಆತನ ಕೈಗೆ ಪಿಯು ಮಂಡಳಿಯಿಂದ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಅನುಮಾನವಿದೆ. ಆದ್ದರಿಂದ ಪಿಯು ಮಂಡಳಿಯ ಕೆಲವು ಅಧಿಕಾರಿಗಳನ್ನು ವಿಚಾರಣೆ ನಡೆಸಲು ಪೊಲೀಸರು ಪಟ್ಟಿ ಸಿದ್ಧಪಡಿಸುತ್ತಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಶಿವಕುಮಾರ ಸ್ವಾಮಿ ಭಾಗಿಯಾಗಿಲ್ಲದಿದ್ದರೆ ಇಷ್ಟು ದಿನ ಅಡಗಿ ಕುಳಿತಿದ್ದು ಏಕೆ? ಎಂಬುದಕ್ಕೆ ಆತ ಉತ್ತರ ಕೊಟ್ಟಿಲ್ಲ. ಬೇರೆ-ಬೇರೆ ರೀತಿಯ ಹೇಳಿಕೆ ನೀಡುವ ಮೂಲಕ ಆತ ತನಿಖೆಯ ದಾರಿ ತಪ್ಪಿಸಲು ಪ್ರಯತ್ನ ನಡೆಸುತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications