ಏನು ಓದ್ಕೋಬೇಡಿ, ಪಾಸಾಗ್ತೀರಾ ಹೋಗಿ ಎಂದಿದ್ದ ಕಾಲೇಜು!
ಬೆಂಗಳೂರು, ಏಪ್ರಿಲ್ 18 : ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆತಂಕಕಾರಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಮಾರ್ಚ್ 21 ಮತ್ತು 31ರಂದು ಎರಡು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು.
ಹಗರಣ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಹಗರಣದ ಪ್ರಮುಖ ಆರೋಪಿ ಶಿವಕುಮಾರ್ 20 ಲಕ್ಷ ರೂ.ಗಳಿಗೆ 20 ಖಾಸಗಿ ಕಾಲೇಜುಗಳಿಗೆ ಪತ್ರಿಕೆಯನ್ನು ಮಾರಾಟ ಮಾಡಿದ್ದ ಎಂದು ಮಾಹಿತಿ ಸಂಗ್ರಹಿಸಿದ್ದಾರೆ. ಇನ್ನೂ ಹಲವು ಕಾಲೇಜುಗಳ ಜೊತೆ ಪತ್ರಿಕೆ ಮಾರಾಟದ ಕುರಿತು ಮಾತುಕತೆ ನಡೆಸಿದ್ದ. [ಪತ್ರಿಕೆ ಸೋರಿಕೆ, ಆರೋಪಿಗಳು ಏ.13ರ ತನಕ ಸಿಐಡಿ ವಶಕ್ಕೆ]

ಪೋಷಕರಿಂದ ಪತ್ರಿಕೆ ನೀಡಲು 5 ರಿಂದ 15 ಲಕ್ಷ ವಸೂಲಿ ಮಾಡಿದ್ದ ಕೆಲವು ಖಾಸಗಿ ಕಾಲೇಜುಗಳು, ಪಿಯುಸಿ ಪರೀಕ್ಷೆ ಚಿಂತೆ ಬಿಟ್ಟು ಸಿಇಟಿ ಕಡೆ ಗಮನ ಕೊಡಿ, ಒಂದು ದಿನ ಮುಂಚಿತವಾಗಿ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ನಿಮ್ಮ ಕೈ ಸೇರುತ್ತದೆ ಎಂದು ಭರವಸೆ ಕೊಟ್ಟಿದ್ದವು. [ಲೀಕಾಗಿದ್ದ ಕೆಮಿಸ್ಟ್ರಿ ಪಿಯು ಪ್ರಶ್ನೆ ಪತ್ರಿಕೆ ಬೆಲೆ 10 ಲಕ್ಷ ರು!]
ಪರೀಕ್ಷೆಯ ಮುನ್ನಾದಿನ ಸುಮಾರು 300 ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ನೀಡಿದ್ದ ಕಾಲೇಜುಗಳು, ಉತ್ತರವನ್ನು ಬಾಯಿಪಾಠ ಮಾಡಲು ಸೂಚನೆ ಕೊಟ್ಟಿದ್ದವು. ಕಾಲೇಜಿಗೆ ಶೇ 100ರಷ್ಟು ಫಲಿತಾಂಶ ಬರಲಿದೆ ಎಂದು ಪೋಷಕರಿಗೆ ತಿಳಿಸಿದ್ದವು. [ಪಿಯುಸಿ ಫಲಿತಾಂಶದಲ್ಲಿ ವಿಳಂಬ]
ಒಂದು ಕಾಲೇಜಿಗೆ 100ರಷ್ಟು ಫಲಿತಾಂಶ ಬಂದರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಸಂಖ್ಯೆ ಹೆಚ್ಚಾಗುತ್ತದೆ. ಇದರಿಂದಾಗಿ ಹೆಚ್ಚಿನ ಡೋನೇಷನ್ ವಸೂಲಿ ಮಾಡಬಹುದು ಎಂಬುದು ಕಾಲೇಜುಗಳ ತಂತ್ರವಾಗಿತ್ತು. ಸಿಐಡಿ ಅಧಿಕಾರಿಗಳು ಸುಮಾರು 300 ವಿದ್ಯಾರ್ಥಿಗಳ ಹೇಳಿಕೆಯನ್ನು ಪಡೆದಿದ್ದು, ಎಲ್ಲಾ ಕಾಲೇಜುಗಳು ಒಂದೇ ರೀತಿ ಹೇಳಿರುವುದು ತನಿಖೆಯಿಂದ ಬಹಿರಂಗವಾಗಿದೆ. [ಪಿಯುಸಿ ಪತ್ರಿಕೆ ಉತ್ತರ ಬರೆದು ಮಾರುತ್ತಿದ್ದ ಇಬ್ಬರ ಬಂಧನ]
ಶಿವಕುಮಾರ್ ಕಿಂಗ್ ಪಿನ್ : ಎಲ್ಲಾ ಕಾಲೇಜುಗಳು ಸೋರಿಕೆ ಹಗರಣದ ಪ್ರಮುಖ ಆರೋಪಿ ಶಿವಕುಮಾರ್ ನತ್ತ ಕೈ ತೋರಿಸುತ್ತಿವೆ. ಈಗ ಹಗರಣದ ಕಿಂಗ್ ಪಿನ್ ಆಗಿದ್ದು, ನಾಪತ್ತೆಯಾಗಿದ್ದಾನೆ. ಕೊನೆಯ ಬಾರಿ ಈತ ಕೇರಳದಲ್ಲಿ ಪತ್ತೆಯಾಗಿದ್ದು, ಬಳಿಕ ಆತ ಮೊಬೈಲ್ ಸಹ ಸಂಪರ್ಕಕ್ಕೆ ಸಿಗುತ್ತಿಲ್ಲ.
ಪೊಲೀಸರು ಹೇಳುವ ಪ್ರಕಾರ ಶಿವಕುಮಾರ್ 2008ರಿಂದ ಪ್ರಶ್ನೆ ಪತ್ರಿಕೆ ಬಹಿರಂಗ ಮಾಡುವ ದಂಧೆಯಲ್ಲಿದ್ದಾನೆ. ಎಂಬಿಬಿಎಸ್, ಇಂಜಿನಿಯರಿಂಗ್, ಕೆಪಿಎಸ್ಸಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಶಿವಕುಮಾರ್ ಸೋರಿಕೆ ಮಾಡುತ್ತಿದ್ದ.
ಕಾಲೇಜಿನಲ್ಲಿ ಶಿಕ್ಷಕನಾಗಿದ್ದ ಶಿವಕುಮಾರ್ ಸ್ವಯಂ ನಿವೃತ್ತಿ ಪಡೆದು ಪ್ರಶ್ನೆ ಪತ್ರಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದ. ಪತ್ರಿಕೆ ಸೋರಿಕೆ ಹಗರಣದಲ್ಲಿ ಶಿವಕುಮಾರ್ ಬಂಧನ ಬಹಳ ಪ್ರಮುಖವಾಗಿದ್ದು ಎಂದು ಪೊಲೀಸರು ಹೇಳಿದ್ದು, ಆತ ಯಾರಿಂದ ಪತ್ರಿಕೆ ಖರೀದಿ ಮಾಡಿದ್ದ? ಎಂಬುದು ಬಂಧನದ ಬಳಿಕ ತಿಳಿಯಲಿದೆ ಎಂದು ಹೇಳಿದ್ದಾರೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications