Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಂತಿದೆ: ಆರ್.ಅಶೋಕ್ ಆರೋಪ

ಬೆಂಗಳೂರು, ಜೂನ್‌ 16: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್‌ ವಿರುದ್ದ ಆರೋಪಗಳು ಹೆಚ್ಚಾಗಿದ್ದು, ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಂತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ.

ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಟಿಪ್ಪುವಿನ ಮತಾಂತರದ ಸಿದ್ಧಾಂತಕ್ಕೆ ಪೂರಕವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರ ಹೊರಟಿದೆ. ಕಾಂಗ್ರೆಸ್ ಪಕ್ಷವು ಪಿಎಫ್‍ಐ, ಕೆಎಫ್‍ಡಿ ಪರವಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

 Former Minister R Ashok

ರಾಜ್ಯದಲ್ಲಿ ನೀವು ಯಾರ ಪರ ಇದ್ದೀರಿ? ಎಂದು ಪ್ರಶ್ನಿಸಿದ ಅವರು, 30ರಿಂದ 40 ಲಕ್ಷಕ್ಕೂ ಹಿಂದೂಗಳು ದುಡ್ಡಿನ ಆಮಿಷ, ಲವ್ ಜಿಹಾದ್, ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ಆಗದೆ ಮತಾಂತರ ಆದ ಮಾಹಿತಿ ಇದೆ. ಕಾಂಗ್ರೆಸ್ ಯಾರಿಗಾಗಿ ಈ ಕಾಯ್ದೆ ತರುತ್ತಿದೆ? ಎಂದ ಅವರು, ಬಲವಂತದ ಮತಾಂತರ ಸಲ್ಲದು ಎಂಬ ಭಾವನೆ ಹಾಗೂ ನಿಲುವನ್ನು ಮಹಾತ್ಮ ಗಾಂಧೀಜಿ ಮತ್ತು ಡಾ. ಅಂಬೇಡ್ಕರ್ ಅವರು ಹೊಂದಿದ್ದರು . ಮತಾಂತರ ಆಗುವುದಾದರೆ ಕಾನೂನು ಪ್ರಕಾರ ಆಗಬೇಕೆಂಬ ನಮ್ಮ ಕಾಯ್ದೆಯಲ್ಲಿ ತಪ್ಪೇನಿದೆ? ಎಂದು ಕೇಳಿದರು.

ಟಿಪ್ಪು ಕೊಡಗಿನಲ್ಲಿ 50ರಿಂದ 60 ಸಾವಿರ ಜನರನ್ನು ಮತಾಂತರ ಮಾಡಿದ್ದ. ಆತನನ್ನು ವೈಭವೀಕರಿಸಿ ಅವನ ಜಯಂತಿ ಮಾಡಿದರು. ಗಲಭೆಗೆ ಕಾರಣರಾದರು ಎಂದು ಟೀಕಿಸಿದ ಅವರು, ಈ ಕಾಯ್ದೆ ವಾಪಸ್ ಪಡೆಯಬಾರದು ಎಂದು ಬಿಜೆಪಿ ಆಗ್ರಹಿಸುತ್ತದೆ ಎಂದರು. ಮತಬ್ಯಾಂಕಿಗಾಗಿ, ಒಂದು ಸಮುದಾಯದವರನ್ನು ಓಲೈಸಲು ಈ ಕಾಯ್ದೆ ಹಿಂದಕ್ಕೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಓಟಿಗೋಸ್ಕರ ಯಾವ ಹಂತಕ್ಕಾದರೂ ಹೋಗುತ್ತದೆ ಎಂದು ವ್ಯಂಗ್ಯವಾಡಿದರು.

ಹಿಂದೆ ರೈತರು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಎಪಿಎಂಸಿ ಆರಂಭವಾಗಿತ್ತು. ಅದೊಂದು ರೀತಿಯ ಗುತ್ತಿಗೆ ಕೊಡುವ ಪ್ರಯತ್ನ. ದಲ್ಲಾಳಿಗಳು ಗೇಟಿನಲ್ಲೇ ನಿಂತು ಖರೀದಿಸಿ ಲಾಭ ಮಾಡುವ ವ್ಯವಸ್ಥೆ ಅದು. ನಾವು ಮಾಡಿದ ತಿದ್ದುಪಡಿಯಡಿ ದೇಶದ ಎಲ್ಲಿ ಬೇಕಾದರೂ ಮಾರಾಟ ಮಾಡುವ ಅವಕಾಶ ಇದೆ. ರೈತರಿಗೆ ಸಾವಿರಾರು ಕೋಟಿ ಆದಾಯ ಸಿಗಬೇಕೇ? ಅಥವಾ ಎಪಿಎಂಸಿಗೆ ಲಾಭ ಆಗಬೇಕೇ? ದಲ್ಲಾಳಿಗಳ ಲಾಭ ಹೆಚ್ಚಬೇಕೇ? ಎಂದು ಕೇಳಿದರು.

 Former Minister R Ashok

ದಲ್ಲಾಳಿಗಳಿಗೆ ಉಪಯೋಗ ಮಾಡುವ ಹುನ್ನಾರ ಇದರಡಿ ಇದೆ. ತೂಕದಲ್ಲೇ ವ್ಯತ್ಯಾಸ ಮಾಡುತ್ತಿದ್ದರು. ಆದರೆ, ನಾವು ತಕ್ಕಡಿಯನ್ನು ರೈತರ ಕೈಗೆ ಕೊಟ್ಟಿದ್ದೆವು. ಕಾಂಗ್ರೆಸ್, ದಲ್ಲಾಳಿಗಳ ರಾಜ್ಯ ಮಾಡಲು ಹೊರಟಿದೆ. ಪಠ್ಯಪುಸ್ತಕ ಬದಲಾವಣೆ ಬಗ್ಗೆ ತರಾತುರಿ ಸಲ್ಲದು. ಏಕಾಏಕಿ ಮಕ್ಕಳಿಗೆ ತೊಂದರೆ ಕೊಡುವ ಉದ್ದೇಶ ಹೊಂದಿ ನಿಮ್ಮ ಸಿದ್ಧಾಂತ ಹೇರುವ ಪ್ರಯತ್ನ ಮಾಡಿದ್ದೀರಿ. ಇದರಿಂದ ಕೆಟ್ಟ ಸಂದೇಶ ಕೊಟ್ಟಿದ್ದೀರಿ ಎಂದು ತಿಳಿಸಿದರು.

ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳು ಬೇರೆ ರಾಜ್ಯಕ್ಕೆ ಹೋಗುವ ಮಾತು ಕೇಳುತ್ತಿದೆ. 10 ರೂ. ಕೊಟ್ಟು 20 ರೂ. ಕಿತ್ತುಕೊಳ್ಳುವ ಗ್ಯಾರಂಟಿ ವ್ಯವಸ್ಥೆಯನ್ನು ಕಾಂಗ್ರೆಸ್ ಸರಕಾರ ಜಾರಿ ಮಾಡುತ್ತಿದೆ ಎಂದ ಅವರು, "ಏಯ್ ಮಹದೇವಪ್ಪ ನಿನಗೂ ಫ್ರೀ, ನನಗೂ ಫ್ರೀ; ಕಾಕಾ ಪಾಟೀಲ್ ನಿನಗೂ ಫ್ರೀ" ಎಂದಿದ್ದರು. ಕಂಡಿಷನ್ ಅಪ್ಲೈ ಎಂದಿದ್ದೀರಾ? ಈಗ ಹೊಸ ಮನೆಗೆ ಒಂದು, ಸರಾಸರಿ ಎಂಬ ಕಂಡಿಷನ್ ಹಾಕುತ್ತೀರಿ. ಠೇವಣಿ ಶೇ 65ರಷ್ಟು ಹೆಚ್ಚಳ ಮಾಡಿದ್ದಾರೆ. ತಾತ್ಕಾಲಿಕ ಸಂಪರ್ಕಕ್ಕೆ ಶೇ 70ರಷ್ಟು ಠೇವಣಿ ಸಂಗ್ರಹ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ವಿದ್ಯುತ್ ದರ ಹೆಚ್ಚಳ ಒಂದು ಕಳ್ಳಾಟ. 70 ಪೈಸೆ ಹೆಚ್ಚಿಸಿದ್ದಾರೆ. ಬೇಕಾದುದೆಲ್ಲ ಕಾಂಗ್ರೆಸ್ ಪಕ್ಷದ್ದು. ಬೇಡದ್ದೆಲ್ಲವೂ ಬಿಜೆಪಿಯದು ಎಂದು ತಿಳಿಸಿದರು. ಕೇಂದ್ರವು ಅಕ್ಕಿ ವಿಚಾರದಲ್ಲಿ ಸಮಸ್ಯೆ ತಂದೊಡ್ಡಿದೆ ಎಂದರೆ, ಕೇಳಿದೊಡನೆ ಕೊಡಲು ಕೇಂದ್ರ ಎಂದರೆ ಅತ್ತೆ ಮನೆಯೇ? ಘೋಷಿಸುವ ಮೊದಲೇ ನಿಮಗೆ ಜ್ಞಾನ, ಪ್ರಜ್ಞೆ ಇರಲಿಲ್ಲವೇ? ನಾಳೆ ಕರ್ನಾಟಕವನ್ನು ಮಾರಾಟ ಮಾಡುತ್ತೇವೆ ಎಂದರೆ ಕೇಂದ್ರ ಎಸ್ ಎನ್ನಬೇಕೇ? ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

'ಊಟಕ್ಕೆ ಕೂತರೆ ನಂದೂ ನಂದೇ; ನಿನ್ನದೂ ನಂದೇ' ಎಂಬಂತಾಗಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ 1 ಲಕ್ಷದ 10 ಸಾವಿರ ಕೋಟಿ ಹಣ ಬೇಕು. ರಾಜ್ಯ ಇನ್ನೊಂದು ವರ್ಷದಲ್ಲಿ ದಿವಾಳಿ ಆಗಲಿದೆ. ಕಾನೂನನ್ನು ಎಲ್ಲರೂ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ಅಂಗನವಾಡಿ, ಸಣ್ಣ ಕೈಗಾರಿಕೆ, ಸ್ತ್ರೀಶಕ್ತಿ ಸಂಘಗಳ ಗಲಾಟೆ ಮುಂದುವರೆಯುವಂತಾಗಿದೆ. ಇದು ಕಾಂಗ್ರೆಸ್ ಪಕ್ಷದ ಅಜಾಗರೂಕತೆಯ ಸೃಷ್ಟಿ ಎಂದು ಟೀಕಿಸಿದರು.

ಕಾಂಗ್ರೆಸ್, ಟಿಪ್ಪು ಆಡಳಿತವನ್ನು ಜಾರಿಗೊಳಿಸಲು ಹೊರಟಿದೆ. ಕಾಂಗ್ರೆಸ್ ದುರಾಡಳಿತ, ಅರಾಜಕತೆ, ಗ್ಯಾರಂಟಿ ವಿಚಾರದಲ್ಲಿ ಕಂಡಿಷನ್, ವಿವಿಧ ಕಾಯ್ದೆಗಳ ಹಿಂತೆಗೆತದ ನಿರ್ಧಾರವನ್ನು ಖಂಡಿಸಿ ಜಿಲ್ಲೆ, ತಾಲ್ಲೂಕು ಕೇಂದ್ರಗಳಲ್ಲಿ 19ರಂದು ಆಂದೋಲನದ ಕುರಿತು ಸಭೆ ನಡೆಸಲಿದೆ.

ವಿದ್ಯುತ್ ದರದ ವಿಚಾರದಲ್ಲಿ ಮೋಸಗಾರರು ಯಾರು? ಎಂದು ಕೇಳಿದ ಅವರು, ಕಳೆದ ಬಾರಿ ಮತ್ತು ಈ ಬಾರಿಯ ಬಿಲ್ಲನ್ನು ಸೋಷಿಯಲ್ ಮೀಡಿಯಕ್ಕೆ ಹಾಕಿ ಎಂದು ಮನವಿ ಮಾಡಿದರು. ಕೊಟ್ಟಂಗೆ ತೋರಿಸಿ ಎಲ್ಲ ಕಿತ್ಕೊಳೋದು ಎಂಬ ದುಸ್ಥಿತಿ ಕಾಂಗ್ರೆಸ್‍ನವರದು ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+