ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ : ಕಾರಣವೇನು?
ಬೆಂಗಳೂರು, ಏಪ್ರಿಲ್ 21: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧಿಸಿದಂತೆ ಪೊಲೀಸರು ಆರೋಪಿ ಫಯಾಜ್ನನ್ನು ಬಂಧಿಸಿದ್ದಾರೆ. ಆರೋಪಿ ಫಯಾಜ್ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಆರ್ ಅಶೋಕ್ , ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಕೊಲೆ ಪ್ರಕರಣದ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಒತ್ತಾಯ ಮಾಡಿದ್ದಾರೆ. ರಾಜ್ಯದಲ್ಲಿ ಎರಡು ಮೂರು ತಿಂಗಳಿಂದ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮತಾಂಧರಿಗೆ ನೆರವು ನೀಡಲು ಕಾಂಗ್ರೆಸ್ ಸಿದ್ಧವಾಗಿದೆ. ರಾಜ್ಯದಲ್ಲಿ ತಾಲಿಬಾನ್ ಆಡಳಿತ ಇದೆ. ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದ್ದಂತಿದೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಹಿಂದೂಗಳ ಜೀವಕ್ಕೆ ಬೆಲೆ ಇಲ್ಲವಾಗಿದೆ. ಮತಾಂಧರಿಗೆ ಕುಮ್ಮಕ್ಕು ಸಿಗುತ್ತಿದೆ. ಇವರು ಏನೇ ಮಾಡಿದರೂ ನೆರವು ನೀಡಲು ಕಾಂಗ್ರೆಸ್ ಸಿದ್ಧ ಇದೆ. ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಜೈ ಶ್ರೀರಾಮ್ ಎಂದರೆ ಬಡಿದು ಹಾಕ್ತಾರೆ. ಹನುಮಾನ್ ಚಾಲೀಸ ಹಾಕಿದರೆ ಹಲ್ಲೆ ಮಾಡುತ್ತಾರೆ. ಆದರೆ, ಪಾಕಿಸ್ತಾನ್ ಜಿಂದಾಬಾದ್ ಅಂದ್ರೆ ಬಿರಿಯಾನಿ ಕೊಡ್ತಾರೆ. ಜೊತೆಗೆ ವಿಧಾನಸೌಧಕ್ಕೂ ಪಾಸ್ ಕೊಡ್ತಾರೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯ ನೇಹಾ ಕೊಲೆ ಘಟನೆಗಳನ್ನೆಲ್ಲಾ ನೋಡಿದರೆ ಕಾನೂನು ಸುವ್ಯವಸ್ಥೆಯೇ ಈ ರಾಜ್ಯದಲ್ಲಿ ಇಲ್ಲ ಅನಿಸುತ್ತದೆ ಎಂದಿದ್ದಾರೆ. ನೇಹಾ ಕೊಲೆ ಘೋರ ದುರಂತವಾಗಿದೆ. ಲವ್ ಜಿಹಾದ್ ಎಂದು ನಾವು ಹೇಳಿದರೆ ನಿಮ್ಮ ಹೊಟ್ಟೆಗೆ ಬೆಂಕಿ ಬಿದ್ದಂತಾಗುತ್ತದೆ. ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಅವರೆಯೇ ಲವ್ ಜಿಹಾದ್ ಎನ್ನುತ್ತಿದ್ದಾರೆ. ನಿಮ್ಮ ಪಕ್ಷದ ಕಾರ್ಯಕರ್ತರನ ರಕ್ಷಣೆ ಮಾಡುವ ಯೋಗ್ಯತೆಯೂ ನಿಮಗೆ ಇಲ್ಲವಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನೇಹಾ ಕೊಲೆ ಲವ್ ವಿಚಾರಕ್ಕೆ ಆಗಿದ್ದು ಎಂದು ಪ್ರಕರಣ ಮುಚ್ಚಿಹಾಕಲು ಹೊರಟಿದ್ದಾರೆ ಎಂದು ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೇಹಾ ಕೊಲೆ ಪ್ರಕರಣವನ್ನು ಸಿದ್ದರಾಮಯ್ಯ ಪ್ರೇಮಿಗಳ ಕಲಹ ಎನ್ನುತ್ತಾರೆ. ಜಿ ಪರಮೇಶ್ವರ್ ಒಂದು ಹೆಜ್ಜೆ ಮುಂದೆ ಹೋಗಿ ದಾಖಲೆ ಬಿಡುಗಡೆ ಮಾಡುತ್ತಾರೆ. ಮಾರನೆ ದಿನ ತಮ್ಮ ಹೇಳಿಕೆಯಿಂದ ಬೇಸರ ಆಗಿದ್ದರೆ ಕ್ಷಮಿಸಿ ಅನ್ನುತ್ತಾರೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಇನ್ನೂ ಡಿಕೆ ಸುರೇಶ್ ಈ ದೇಶ ಇಬ್ಭಾಗ ಮಾಡಬೇಕು ಅಂತಿದಾರೆ ಬಿಡಿ. ದೇಶ ವಿಭಜನೆ ಮಾಡಿದ ಗ್ಯಾಂಗ್ ಇವರದ್ದು, ಎಂದು ಆರ್ ಅಶೋಕ್ ಲೇವಡಿ ಮಾಡಿದ್ದಾರೆ.
-
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್











Click it and Unblock the Notifications