ಕರ್ನಾಟಕದ ಎಟಿಎಂ ಆರಂಭ; ಕರ್ನಾಟಕ ಇನ್ಮೇಲೆ ದಿವಾಳಿ ಆಗಲಿದೆ: ಆರ್.ಅಶೋಕ್
ಬೆಂಗಳೂರು, ಜೂನ್14: ಕರ್ನಾಟಕದ ಎಟಿಎಂ ಆರಂಭವಾಗಿದೆ. ಕರ್ನಾಟಕ ಇನ್ಮೇಲೆ ದಿವಾಳಿ ಆಗಲಿದೆ. ಬಿಬಿಎಂಪಿಯನ್ನು ಎಟಿಎಂ ಮಾಡಲು ಕಾಂಗ್ರೆಸ್ ಸರಕಾರ ಯತ್ನಿಸುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಿಬಿಎಂಪಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದನ್ನು ಆಕ್ಷೇಪಿಸಿ ಗೌರವಾನ್ವಿತ ರಾಜ್ಯಪಾಲರಿಗೆ ಬುಧವಾರ ದೂರು ನೀಡಿದ ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು, ಮಹಾನಗರಪಾಲಿಕೆಯನ್ನು ಕಾಂಗ್ರೆಸ್ ಕಚೇರಿ ಮಾಡಲು ಕಾಂಗ್ರೆಸ್ ಪಕ್ಷದವರು, ಸಚಿವರಾದ ಡಿ.ಕೆ.ಶಿವಕುಮಾರ್, ಜಾರ್ಜ್, ಜಮೀರ್ ಮತ್ತಿತರರು ಹೊರಟಿದ್ದಾರೆ.

ನಮ್ಮ ಸಂಸದರಾದ ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ತೇಜಸ್ವಿ ಸೂರ್ಯ ಅವರನ್ನು ಕರೆಯದೆ ಯಾವುದೋ ರಾಜ್ಯದಿಂದ ಚುನಾಯಿತರಾದ ಸುರ್ಜೇವಾಲರನ್ನು ಕರೆದು ಸಭೆ ನಡೆಸಿದ್ದಾರೆ. ವಾರ್ಡ್ ವಿಂಗಡಣೆ, ಅಭಿವೃದ್ಧಿ, ಚುನಾವಣೆ, ಮೀಸಲಾತಿ, ವಾರ್ಡ್ಗಳಿಗೆ ಅನುದಾನ ಮತ್ತಿತರ ವಿಚಾರಗಳ ಕುರಿತು ಅವರು ಚರ್ಚಿಸುವುದಾದರೆ ಯಾಕೆ ಮತದಾನ ಬೇಕು? ಯಾಕೆ ಚುನಾಯಿತ ಪ್ರತಿನಿಧಿಗಳು ಬೇಕು? ಎಂದು ಪ್ರಶ್ನಿಸಿದರು.
ಯಾರು ಸಭೆ ಮಾಡಬೇಕೆಂದು ಸರಕಾರದ ಮಾರ್ಗದರ್ಶಿ ಸೂತ್ರಗಳಿವೆ. ಅದು ಕನ್ನಡದಲ್ಲೇ ಇದೆ ಎಂದ ಅವರು, 'ಆಯಾ ಸಮಿತಿಯ ಕಾರ್ಯವ್ಯಾಪ್ತಿಗೆ ಒಳಪಟ್ಟು ಸಮೀಕ್ಷಣಾ ಸಭೆಗಳನ್ನು ನಡೆಸಬಹುದು. ಇದನ್ನು ಹೊರತುಪಡಿಸಿ ಶಾಸಕರೇ ಆಗಲಿ; ಇತರ ಖಾಸಗಿ ಪ್ರಮುಖರೇ ಆಗಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮೀಕ್ಷಾ ಸಭೆಗಳನ್ನು ನಡೆಸುವಂತಿಲ್ಲ. ವಿರೋಧ ಪಕ್ಷದ ನಾಯಕರಿಗೂ ಸಹ ಅಧಿಕಾರಿಗಳ ಸಭೆ ನಡೆಸುವ ಅವಕಾಶ ಇಲ್ಲ ಎಂದು ಆದೇಶದ ವಿವರ ನೀಡಿದರು.

ಅಂಥ ಸಭೆಗಳನ್ನು ನಡೆಸಲು ಸಚಿವರಿಗೆ, ಅಧಿಕಾರಿಗಳಿಗೆ ಅವಕಾಶ ಇದೆ. ಇವರು ಯಾವ ಸಚಿವರು? ಕೆಡಿಪಿ ಸಭೆ ನಡೆಸುವ ಉಸ್ತುವಾರಿಯನ್ನೂ ಇವರಿಗೆ ಕೊಟ್ಟಿಲ್ಲ. ಇವರಿಗೆ ಇಲ್ಲಿನ ಕಾಂಗ್ರೆಸ್ ನಾಯಕರ ಮೇಲೆ ವಿಶ್ವಾಸ ಇಲ್ಲದಂತಿದೆ. ಬೆಂಗಳೂರನ್ನು ಎಟಿಎಂ ಮಾಡಿಕೊಳ್ಳಲು ನೇರವಾಗಿ ಇವರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಟೀಕಿಸಿದರು.
ನರೇಂದ್ರ ಮೋದಿಜಿ, ಅಮಿತ್ ಶಾ ಅವರು ಹೇಳಿದಂತೆ '10, ಜನಪಥವು ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಹೊರಟಿದೆ' ಎಂದು ಆರೋಪಿಸಿದರು. ಮುಖ್ಯ ಕುರ್ಚಿಯಲ್ಲಿ ಕುಳಿತು ಅಧಿಕಾರಿಗಳಿಗೆ ಸುರ್ಜೇವಾಲಾ ಸೂಚನೆ ಕೊಟ್ಟಿದ್ದಾರೆ. 28 ಶಾಸಕರು, 4 ಸಂಸದರಿಗೆ ಬೆಲೆ ಇಲ್ಲವೇ? ಎಂದು ಕೇಳಿದರು. ಇದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು. ಈ ಬಗ್ಗೆ ತನಿಖೆ ಮಾಡಿ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ ಎಂದು ವಿವರ ನೀಡಿದರು.
ಮಾಜಿ ಸಚಿವ ಸುರೇಶ್ಕುಮಾರ್, ಸಂಸದ ಪಿ.ಸಿ.ಮೋಹನ್, ಶಾಸಕರಾದ ಕೆ.ಸಿ.ರಾಮಮೂರ್ತಿ, ಎಂ.ಕೃಷ್ಣಪ್ಪ, ರಘು, ರವಿಸುಬ್ರಹ್ಮಣ್ಯ ಮತ್ತಿತರರು ಇದ್ದರು ಎಂದು ತಿಳಿಸಿದರು. ಸಭೆಗೆ ತೆರಳಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.
ಕಾಂಗ್ರೆಸ್ಗೆ ಪಕ್ಷಕ್ಕೆ ಅಧಿಕಾರದ ಮದ, ಪಿತ್ಥ ತಲೆಗೇರಿದೆ. ಇರೋದು ನಾಲ್ಕೇ ದಿನ. ಯಾರೂ ಪರ್ಮನೆಂಟಲ್ಲ. ಕಾಂಗ್ರೆಸ್ ಪಕ್ಷ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಆರ್.ಅಶೋಕ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಸಭೆ ನಡೆಸಿದ್ದಕ್ಕೆ ದಾಖಲೆಗಳಿವೆ. ಸುಮ್ಮನೆ ಬಂದು ಹೋದರು ಎನ್ನಲು ಇದೇನು ನಾಟಕದ ಕಂಪೆನಿಯೇ ಎಂದು ಕಿಡಿಕಾರಿದರು.
-
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು?












Click it and Unblock the Notifications