ಕರ್ನಾಟಕದ ಎಟಿಎಂ ಆರಂಭ; ಕರ್ನಾಟಕ ಇನ್ಮೇಲೆ ದಿವಾಳಿ ಆಗಲಿದೆ: ಆರ್.ಅಶೋಕ್
ಬೆಂಗಳೂರು, ಜೂನ್14: ಕರ್ನಾಟಕದ ಎಟಿಎಂ ಆರಂಭವಾಗಿದೆ. ಕರ್ನಾಟಕ ಇನ್ಮೇಲೆ ದಿವಾಳಿ ಆಗಲಿದೆ. ಬಿಬಿಎಂಪಿಯನ್ನು ಎಟಿಎಂ ಮಾಡಲು ಕಾಂಗ್ರೆಸ್ ಸರಕಾರ ಯತ್ನಿಸುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಿಬಿಎಂಪಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದನ್ನು ಆಕ್ಷೇಪಿಸಿ ಗೌರವಾನ್ವಿತ ರಾಜ್ಯಪಾಲರಿಗೆ ಬುಧವಾರ ದೂರು ನೀಡಿದ ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು, ಮಹಾನಗರಪಾಲಿಕೆಯನ್ನು ಕಾಂಗ್ರೆಸ್ ಕಚೇರಿ ಮಾಡಲು ಕಾಂಗ್ರೆಸ್ ಪಕ್ಷದವರು, ಸಚಿವರಾದ ಡಿ.ಕೆ.ಶಿವಕುಮಾರ್, ಜಾರ್ಜ್, ಜಮೀರ್ ಮತ್ತಿತರರು ಹೊರಟಿದ್ದಾರೆ.

ನಮ್ಮ ಸಂಸದರಾದ ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ತೇಜಸ್ವಿ ಸೂರ್ಯ ಅವರನ್ನು ಕರೆಯದೆ ಯಾವುದೋ ರಾಜ್ಯದಿಂದ ಚುನಾಯಿತರಾದ ಸುರ್ಜೇವಾಲರನ್ನು ಕರೆದು ಸಭೆ ನಡೆಸಿದ್ದಾರೆ. ವಾರ್ಡ್ ವಿಂಗಡಣೆ, ಅಭಿವೃದ್ಧಿ, ಚುನಾವಣೆ, ಮೀಸಲಾತಿ, ವಾರ್ಡ್ಗಳಿಗೆ ಅನುದಾನ ಮತ್ತಿತರ ವಿಚಾರಗಳ ಕುರಿತು ಅವರು ಚರ್ಚಿಸುವುದಾದರೆ ಯಾಕೆ ಮತದಾನ ಬೇಕು? ಯಾಕೆ ಚುನಾಯಿತ ಪ್ರತಿನಿಧಿಗಳು ಬೇಕು? ಎಂದು ಪ್ರಶ್ನಿಸಿದರು.
ಯಾರು ಸಭೆ ಮಾಡಬೇಕೆಂದು ಸರಕಾರದ ಮಾರ್ಗದರ್ಶಿ ಸೂತ್ರಗಳಿವೆ. ಅದು ಕನ್ನಡದಲ್ಲೇ ಇದೆ ಎಂದ ಅವರು, 'ಆಯಾ ಸಮಿತಿಯ ಕಾರ್ಯವ್ಯಾಪ್ತಿಗೆ ಒಳಪಟ್ಟು ಸಮೀಕ್ಷಣಾ ಸಭೆಗಳನ್ನು ನಡೆಸಬಹುದು. ಇದನ್ನು ಹೊರತುಪಡಿಸಿ ಶಾಸಕರೇ ಆಗಲಿ; ಇತರ ಖಾಸಗಿ ಪ್ರಮುಖರೇ ಆಗಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮೀಕ್ಷಾ ಸಭೆಗಳನ್ನು ನಡೆಸುವಂತಿಲ್ಲ. ವಿರೋಧ ಪಕ್ಷದ ನಾಯಕರಿಗೂ ಸಹ ಅಧಿಕಾರಿಗಳ ಸಭೆ ನಡೆಸುವ ಅವಕಾಶ ಇಲ್ಲ ಎಂದು ಆದೇಶದ ವಿವರ ನೀಡಿದರು.

ಅಂಥ ಸಭೆಗಳನ್ನು ನಡೆಸಲು ಸಚಿವರಿಗೆ, ಅಧಿಕಾರಿಗಳಿಗೆ ಅವಕಾಶ ಇದೆ. ಇವರು ಯಾವ ಸಚಿವರು? ಕೆಡಿಪಿ ಸಭೆ ನಡೆಸುವ ಉಸ್ತುವಾರಿಯನ್ನೂ ಇವರಿಗೆ ಕೊಟ್ಟಿಲ್ಲ. ಇವರಿಗೆ ಇಲ್ಲಿನ ಕಾಂಗ್ರೆಸ್ ನಾಯಕರ ಮೇಲೆ ವಿಶ್ವಾಸ ಇಲ್ಲದಂತಿದೆ. ಬೆಂಗಳೂರನ್ನು ಎಟಿಎಂ ಮಾಡಿಕೊಳ್ಳಲು ನೇರವಾಗಿ ಇವರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಟೀಕಿಸಿದರು.
ನರೇಂದ್ರ ಮೋದಿಜಿ, ಅಮಿತ್ ಶಾ ಅವರು ಹೇಳಿದಂತೆ '10, ಜನಪಥವು ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಹೊರಟಿದೆ' ಎಂದು ಆರೋಪಿಸಿದರು. ಮುಖ್ಯ ಕುರ್ಚಿಯಲ್ಲಿ ಕುಳಿತು ಅಧಿಕಾರಿಗಳಿಗೆ ಸುರ್ಜೇವಾಲಾ ಸೂಚನೆ ಕೊಟ್ಟಿದ್ದಾರೆ. 28 ಶಾಸಕರು, 4 ಸಂಸದರಿಗೆ ಬೆಲೆ ಇಲ್ಲವೇ? ಎಂದು ಕೇಳಿದರು. ಇದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು. ಈ ಬಗ್ಗೆ ತನಿಖೆ ಮಾಡಿ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ ಎಂದು ವಿವರ ನೀಡಿದರು.
ಮಾಜಿ ಸಚಿವ ಸುರೇಶ್ಕುಮಾರ್, ಸಂಸದ ಪಿ.ಸಿ.ಮೋಹನ್, ಶಾಸಕರಾದ ಕೆ.ಸಿ.ರಾಮಮೂರ್ತಿ, ಎಂ.ಕೃಷ್ಣಪ್ಪ, ರಘು, ರವಿಸುಬ್ರಹ್ಮಣ್ಯ ಮತ್ತಿತರರು ಇದ್ದರು ಎಂದು ತಿಳಿಸಿದರು. ಸಭೆಗೆ ತೆರಳಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.
ಕಾಂಗ್ರೆಸ್ಗೆ ಪಕ್ಷಕ್ಕೆ ಅಧಿಕಾರದ ಮದ, ಪಿತ್ಥ ತಲೆಗೇರಿದೆ. ಇರೋದು ನಾಲ್ಕೇ ದಿನ. ಯಾರೂ ಪರ್ಮನೆಂಟಲ್ಲ. ಕಾಂಗ್ರೆಸ್ ಪಕ್ಷ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಆರ್.ಅಶೋಕ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಸಭೆ ನಡೆಸಿದ್ದಕ್ಕೆ ದಾಖಲೆಗಳಿವೆ. ಸುಮ್ಮನೆ ಬಂದು ಹೋದರು ಎನ್ನಲು ಇದೇನು ನಾಟಕದ ಕಂಪೆನಿಯೇ ಎಂದು ಕಿಡಿಕಾರಿದರು.
-
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್












Click it and Unblock the Notifications