ಸಿ.ಎಂ ಸಿದ್ದರಾಮಯ್ಯಗೆ ಮತಿಗೇಡಿಗಳಾದರೂ ಪರವಾಗಿಲ್ಲ, ಲಜ್ಜೆಗೇಡಿಗಳಾಗಬಾರದು ಎಂದ ಆರ್. ಅಶೋಕ್
ರಾಜ್ಯದಲ್ಲಿ ಯಾರ ಅವಧಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಉಪ ಲೋಕಾಯುಕ್ತರು ರಾಜ್ಯದಲ್ಲಿ ಶೇ 63% ಭ್ರಷ್ಟಾಚಾರ ಇದೆ ಎಂದು ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ಆಗಿಲ್ಲ. ಉಪ ಲೋಕಾಯುಕ್ತರು ಹೇಳಿರುವುದು ಬಿಜೆಪಿ ಅವಧಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದು. ಇದೀಗ ಇದಕ್ಕೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರೇ ಮತಿಗೇಡಿಗಳಾದರೂ ಪರವಾಗಿಲ್ಲ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಲಜ್ಜೆಗೇಡಿಗಳಾಗಬಾರದು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬುದನ್ನು ಸ್ವತಃ ಅಂದಿನ ಸಚಿವರೇ ಒಪ್ಪಿಕೊಂಡರೂ, ಭ್ರಷ್ಟಾಚಾರ ನಡೆದಿದೆ ಎನ್ನುವುದನ್ನ ಸದನದಲ್ಲಿ ತಾವೇ ಗಂಟಾಘೋಷವಾಗಿ ಒಪ್ಪಿಕೊಂಡ ಮೇಲೂ ನಿರ್ಲಜ್ಜವಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಸ್ವತಃ ತಮ್ಮ ಆರ್ಥಿಕ ಸಲಹೆಗಾರರು, ಹಿರಿಯ ಕಾಂಗ್ರೆಸ್ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಎಂದು ಸರ್ಟಿಫಿಕೇಟ್ ಕೊಟ್ಟ ಮೇಲೂ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡು ಕೂತುಕೊಳ್ಳುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?
ಅದು ಹೋಗಲಿ ಬಿಡಿ. ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ "ಮನಿ ಫಾರ್ ಮನೆ" ಭ್ರಷ್ಟಾಚಾರವನ್ನು ಬಯಲಿಗೆಳೆದು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಷ್ಟಾದರೂ ಅವರ ಮೇಲೆ ಕ್ರಮ ಕೈಗೊಂಡಿಲ್ಲ. ಸ್ವಪಕ್ಷದ ಹಿರಿಯ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡಿದರೂ, ವಸತಿ ಸಚಿವರ ಮೇಲೆ ಕ್ರಮವೂ ಕೈಗೊಳ್ಳದೆ, ತನಿಖೆಯೂ ನಡೆಸದೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು ಎಂದಿದ್ದಾರೆ.
ತಾವೇ ನೇಮಕ ಮಾಡಿದ್ದ ತನಿಖಾ ಆಯೋಗ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ತಾವು ಮಾಡಿದ್ದ 40% ಕಮಿಷನ್ ಆರೋಪ ಹಸಿ ಸುಳ್ಳು ಎಂದು ವರದಿ ನೀಡಿದ ಮೇಲೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು. 40% ಕಮಿಷನ್ ಎಂದು ಹಸಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿ, ಮತದಾರರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು ಎಂದು ಅವರು ಕೇಳಿದ್ದಾರೆ.
ಗುತ್ತಿಗೆದಾರರ ಸರಣಿ ಆತ್ಮಹತ್ಯೆ
ಕಳೆದ 2.5 ವರ್ಷಗಳಲ್ಲಿ ನಿಮ್ಮ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಕಮಿಷನ್ ದಾಹಕ್ಕೆ ಬಲಿಯಾದ ಅಧಿಕಾರಿಗಳು, ಗುತ್ತಿಗೆದಾರರ ಪ್ರಕರಣಗಳನ್ನು ಪಟ್ಟಿ ಮಾಡುತ್ತಾ ಹೋದರೆ ಜಾಗವೇ ಸಾಕಾಗುವುದಿಲ್ಲ. ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ. ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸಾವು. ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮದ ನಿವಾಸಿ ಸಿವಿಲ್ ಎಂಜಿನಿಯರ್ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ.
ಕಳೆದ 30 ತಿಂಗಳುಗಳಲ್ಲಿ ನಿಮ್ಮ ಸರ್ಕಾರ ಭ್ರಷ್ಟಾಚಾರದ ಎಲ್ಲ ದಾಖಲೆಗಳನ್ನೂ ಮುರಿದಿದೆ. ನಿಮ್ಮ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳುತ್ತಾ ಹೋದರೆ ಅದಕ್ಕೆ ಅಂತ್ಯವೇ ಇಲ್ಲ, ದಿನದ 24 ಗಂಟೆಗಳು ಸಾಕಾಗುವುದಿಲ್ಲ. ಮತಿಗೇಡಿಗಳಾದರೂ ಪರವಾಗಿಲ್ಲ ಸಿದ್ದರಾಮಯ್ಯನವರೇ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು ಎಂದು ಆರ್ ಅಶೋಕ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications