Waqf: ವಕ್ಫ್ ವಿಚಾರದಲ್ಲಿ ಸರ್ಕಾರಕ್ಕೆ ದೊಡ್ಡ ಸವಾಲು ಹಾಕಿದ ಆರ್.ಅಶೋಕ್
ವಕ್ಫ್ ಹೆಸರಿನಲ್ಲಿ ಕರ್ನಾಟಕ ಸರ್ಕಾರ ಹಿಂದೂಗಳ ಮೇಲೆ ಮಾಡುತ್ತಿರುವ ದಬ್ಬಾಳಿಕೆ, ಭೂಕಬಳಿಕೆ ವಿಧಾನ ಮಂಡಲ ಅಧಿವೇಶನಲ್ಲಿ ಬಟಾಬಯಲಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ಜನರ ಗಮನ ಬೇರೆಡೆ ಸೆಳೆದು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
2012ರಲ್ಲಿ ಅಂದಿನ ಬಿಜೆಪಿ ಸರ್ಕಾರ ವಕ್ಫ್ ಆಸ್ತಿ ದುರ್ಬಳಕೆ, ದುರುಪಯೋಗ, ಅತಿಕ್ರಮಣದ ಬಗ್ಗೆ ತನಿಖೆ ನಡೆಸಲು ಅಂದಿನ ಉಪಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಆನಂದ್ ಅವರ ನೇತೃತ್ವದ ತನಿಖಾ ತಂಡ ರಚನೆ ಮಾಡಿ ಆದೇಶ ಹೊರಡಿಸಿತ್ತು ಎಂದಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಉಪಲೋಕಾಯುಕ್ತ ಆನಂದ್ ಅವರ ನೇತೃತ್ವದ ತಂಡ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಪ್ರತ್ಯೇಕ ವರದಿ ನೀಡಿ ಪ್ರತಿ ಪ್ರಕರಣದಲ್ಲಿ ವಿವಿಧ ರೀತಿಯ ಕ್ರಮ ಜರುಗಿಸಲು ಶಿಫಾರಸ್ಸು ಮಾಡಿತ್ತು. 10 ಸಂಪುಟಗಳಿಗೂ ಹೆಚ್ಚಿನ ವಿಸ್ತೃತ ವರದಿಯನ್ನ 2016ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿತ್ತು ಎಂದು ವಿವರಿಸಿದ್ದಾರೆ.
ಆದರೆ ಅಂದಿನ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಆ ವರದಿಯ ಅನುಸಾರ ಕ್ರಮ ಕೈಗೊಳ್ಳುವುದಿರಲಿ, 2012ರಲ್ಲಿ ಈ ತನಿಖೆಗೆ ಆದೇಶ ಮಾಡಿದ್ದ ಬಿಜೆಪಿ ಸರ್ಕಾರದ ಆದೇಶವನ್ನೇ ರದ್ದುಗೊಳಿಸಿ, ಆ ವರದಿ ದಾಖಲೆ ಆಗುವುದನ್ನು ತಪ್ಪಿಸಿತ್ತು ಎಂದು ದೂರಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ವಕ್ಫ್ ವಿಚಾರದಲ್ಲಿ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಉಪಲೋಕಾಯುಕ್ತ ಆನಂದ್ ಅವರ ವರದಿ ಬಹಿರಂಗ ಪಡಿಸಿ, ಅವರು ಕ್ರಮ ಜರುಗಿಸಲು ನೀಡಿದ್ದ ಶಿಫಾರಸ್ಸುಗಳನ್ನು ಜಾರಿಗೆ ತರಲಿ ಎಂದು ಆರ್.ಅಶೋಕ್ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಕರ್ನಾಟಕದಲ್ಲಿ ಜಮೀನಿನ ಮಾಲೀಕರು ವಕ್ಫ್ ಬೋರ್ಡ್ನಿಂದ ಎನ್ಒಸಿ ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದಲ್ಲಿ ರೈಲ್ವೆ, ಭಾರತೀಯ ಸೇನೆ ಬಿಟ್ಟರೆ ಮೂರನೇ ಅತಿದೊಡ್ಡ ಆಸ್ತಿ ಹೊಂದಿರುವುದು ವಕ್ಫ್ ಬೋರ್ಡ್ ಮಂಡಳಿ. ಸುಮಾರು 9.4 ಲಕ್ಷ ಎಕರೆ ಪ್ರದೇಶ, 8.7 ಲಕ್ಷ ಆಸ್ತಿಗಳು ವಕ್ಫ್ ಬೋರ್ಡ್ ಹೊಂದಿದೆ ಎಂದು ಆರ್.ಅಶೋಕ್ ಅವರು ಬೆಳಗಾವಿ ಅಧಿವೇಶನದಲ್ಲಿ ವಿವರಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ವಕ್ಫ್ ಮಂಡಳಿಯನ್ನು ವಜಾಗೊಳಿಸಿದ ಅಲ್ಲಿನ ಎನ್ಡಿ ಸರ್ಕಾರದ ದಿಟ್ಟ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಕ್ಫ್ ಮಂಡಳಿಯ ಪರಿಕಲ್ಪನೆಯೇ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಕರ್ನಾಟಕದಲ್ಲೂ ಆಂಧ್ರಪ್ರದೇಶದ ರೀತಿ ವಕ್ಫ್ ಮಂಡಳಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದರು.
ಈ ಮೂಲಕ ರೈತರು, ಮಠ-ಮಂದಿರಗಳು, ಜನಸಾಮಾನ್ಯರು ಹಾಗು ಸರ್ಕಾರಿ ಆಸ್ತಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆಗೆ ಶಾಶ್ವತ ಅಂತ್ಯ ಹಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಶೋಕ್ ಒತ್ತಾಯಿಸಿದ್ದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications