ಸರ್ಕಾರದಿಂದ ಮಾಧ್ಯಮಗಳ ಪರೋಕ್ಷ ನಿಯಂತ್ರಣ ಯತ್ನ: ಆರ್.ಅಶೋಕ
ಬೆಂಗಳೂರು, ಸೆಪ್ಟಂಬರ್ 11: ಕರ್ನಾಟಕ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಮಾಡಿರುವ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಹಿಂದೆ ಮಾಧ್ಯಮಗಳ ನಿಯಂತ್ರಣ ಮಾಡುವ ಉದ್ದೇಶವಿದೆಯೇ ಎಂದು ಅವರು ಆರೋಪ ಮಾಡಿದ್ದಾರೆ.
ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೊಸ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಕುರಿತು ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಆರ್.ಅಶೋಕ ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರವು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಅವರುಗಳನ್ನು ಸಮಿತಿಯಲ್ಲಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಜಾಹೀರಾತುಗಳನ್ನು ಪರಿಶೀಲನೆ ಮಾಡಲು ತಮ್ಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಿ. ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ? ಎಂದು ಅವರು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.
ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನು ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹಿರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು.
ಸರ್ಕಾರದ ನಡೆಯಿಂದ ಹಲವು ಅನುಮಾನ
ಇದೆಲ್ಲ ಬಿಟ್ಟು ಇಲಾಖೆ ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷ ಕಾಂಗ್ರೆಸ್ನ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ?. ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರ್ಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ ಎಂದು ಅವರು ದೂರಿದರು.
ಈ ಅನುಮಾನಗಳ ಪೈಕಿ ಒಂದನ್ನು ವ್ಯಕ್ತಪಡಿಸಿರುವ ಆರ್.ಅಶೋಕ ಅವರು, ಸರ್ಕಾರ ಈ ನಡೆಯ ಹಿಂದೆ ಮಾಧ್ಯಮಗಳನ್ನು ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆಯೇ? ಎಂದು ಶಂಕಿಸಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದ್ದು, ಸರ್ಕಾರ ಏನು ಉತ್ತರ ನೀಡಲಿದೆ ಎಂದು ಕಾದು ನೋಡಬೇಕಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications