ಆರ್.ಆರ್.ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಆರ್.ಅಶೋಕ?
Recommended Video

ಬೆಂಗಳೂರು, ಜನವರಿ 30 : ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ?. ಇಂತಹ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಕೆಲವು ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ.
ಹೌದು, ಬೆಂಗಳೂರು ನಗರದ ಪ್ರಭಾವಿ ಬಿಜೆಪಿ ನಾಯಕ, ಒಕ್ಕಲಿಗ ಸಮುದಾಯದ ಮುಖಂಡ ಆರ್.ಅಶೋಕ ಅವರು ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ. ಬಿಜೆಪಿ ಹೈಕಮಾಂಡ್ ಕ್ಷೇತ್ರ ಬದಲಾವಣೆ ಮಾಡುವ ಬಗ್ಗೆ ಅಶೋಕ ಅವರಿಗೆ ಸೂಚನೆ ನೀಡಿದೆ ಎಂಬುದು ಹರಿದಾಡುತ್ತಿರುವ ಸುದ್ದಿ.
ಆರ್.ಅಶೋಕ ಅವರು ಹಾಲಿ ಪದ್ಮನಾಭನಗರ ಕ್ಷೇತ್ರದ ಶಾಸಕರು. ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕರು ಕಾಂಗ್ರೆಸ್ ನಾಯಕ, ಸಿನಿಮಾ ನಿರ್ಮಾಪಕ ಮುನಿರತ್ನ. ಮುನಿರತ್ನರನ್ನು ಸೋಲಿಸಲು ಆರ್.ಅಶೋಕ ಅವರ ಕ್ಷೇತ್ರ ಬದಲಾವಣೆಗೆ ಬಿಜೆಪಿ ತಂತ್ರ ರೂಪಿಸಿದೆ.
ಆರ್.ಅಶೋಕ ಅವರು ಕ್ಷೇತ್ರ ಬದಲಾವಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜರಾಜೇಶ್ವರಿ ನಗರದಲ್ಲಿ ಪಕ್ಷ ಆಯೋಜಿಸಿದ್ದ ಪ್ರಚಾರ ಸಭೆಯಿಂದಲೂ ಅವರು ದೂರವುಳಿದಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಮೊದಲು ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿತ್ತು. ಆರ್.ಅಶೋಕ ಅವರೇ ಶಾಸಕರಾಗಿದ್ದರು. ಕ್ಷೇತ್ರ ಪುನರ್ ವಿಂಗಡನೆ ಬಳಿಕ ಉತ್ತರಹಳ್ಳಿ ಕ್ಷೇತ್ರ ಪದ್ಮನಾಭನಗರ, ಯಶವಂತಪುರ, ರಾಜರಾಜೇಶ್ವರಿ ನಗರ ಕ್ಷೇತ್ರವಾಯಿತು.

ಪದ್ಮನಾಭನಗರಕ್ಕೆ ಬಂದರು
ಉತ್ತರಹಳ್ಳಿ ಕ್ಷೇತ್ರ ವಿಭಜನೆಯಾದ ಬಳಿಕ ಆರ್.ಅಶೋಕ ಅವರು ಪದ್ಮನಾಭನಗರವನ್ನು ಆಯ್ಕೆ ಮಾಡಿಕೊಂಡರು. ಆ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ, ಈ ಬಾರಿ ಕ್ಷೇತ್ರ ಬದಲಾವಣೆ ಮಾಡುವ ಸುದ್ದಿ ಹಬ್ಬಿದೆ.

ಮುನಿರತ್ನ ಸೋಲಿಸಲು ತಂತ್ರ
ಬೆಂಗಳೂರು ನಗರದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ತಂತ್ರ ರೂಪಿಸಿದೆ. ಆದ್ದರಿಂದ, ಆರ್.ಅಶೋಕ ಅವರಿಗೆ ಕ್ಷೇತ್ರ ಬದಲಾವಣೆ ಮಾಡಿ ರಾಜರಾಜೇಶ್ವರಿ ನಗರದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದೆ. ಈ ಮೂಲಕ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಸೋಲಿಸಲು ಯೋಜನೆ ಸಿದ್ಧವಾಗಿದೆ.

ಅಶೋಕ ಅಸಮಾಧಾನ
ಆರ್.ಅಶೋಕ ಅವರು ಕ್ಷೇತ್ರ ಬದಲಾವಣೆಗೆ ಒಪ್ಪಿಗೆ ನೀಡಿಲ್ಲ. ಪಕ್ಷದ ನಾಯಕರ ವಿರುದ್ಧ ಅವರು ಅಸಮಾಧಾನಗೊಂಡಿದ್ದಾರೆ. ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾಯಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಪ್ರಭಾವಿ ನಾಯಕ ಆರ್.ಅಶೋಕ
ಆರ್.ಅಶೋಕ ಅವರು ಬೆಂಗಳೂರಿನ ಪ್ರಭಾವಿ ನಾಯಕರು. ನಿಷ್ಠಾವಂತ ಕಾರ್ಯಕರ್ತರ ಪಡೆಯನ್ನು ಅವರು ಹೊಂದಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿಯಾಗಿದ್ದ ಅಶೋಕ ಅವರು ಬೆಂಗಳೂರಿನ ರಾಜಕಾರಣದ ಮೇಲೆ ಭಾರೀ ಹಿಡಿತ ಹೊಂದಿದ್ದಾರೆ. ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಅವರನ್ನು ಸೋಲಿಸುವುದು ಅಷ್ಟು ಸುಲಭದ ಮಾತಲ್ಲ.

2013ರ ಚುನಾವಣೆ ಫಲಿತಾಂಶ
ಕಳೆದ ಚುನಾವಣೆಯಲ್ಲಿ ಮುನಿರತ್ನ 71,064 ಮತಗಳು, ಜೆಡಿಎಸ್ನ ಕೆ.ಎಲ್.ಆರ್.ತಿಮ್ಮಯ್ಯ 52,251 ಮತ, ಬಿಜೆಪಿಯ ಎಂ.ಶ್ರೀನಿವಾಸ್ 50,726 ಮತಗಳನ್ನು ಪಡೆದಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications