ಮಂಡಳಿ ಮತ್ತು ನಿಗಮಗಳ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ: ಆರ್.ರಘು

ಬೆಂಗಳೂರು, ಜೂನ್‌ 02: ರಾಜ್ಯದಲ್ಲಿ ಒಂದು ವರ್ಷದಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಮತಬ್ಯಾಂಕ್ ಆಧಾರಿತ ಯೋಜನೆಗಳನ್ನು ಜಾರಿಗೊಳಿಸಲು ತನ್ನ ಬೊಕ್ಕಸ ಬರಿದು ಮಾಡಿಕೊಂಡಿದ್ದು ಅಭಿವೃದ್ಧಿಕಾರ್ಯಗಳನ್ನು ಮೂಲೆಗೆ ಸರಿಸಿದೆ ,ಜತೆಗೇ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣೆ ಎದರಿಸಲು ಅಕ್ರಮ ಮಾರ್ಗದಲ್ಲಿ ಸರ್ಕಾರಿ ನಿಗಮಗಳ ಹಣ ದುರುಪಯೋಗ ಪಡಿಸಿಕೊಂಡಿರುವ ಪ್ರಕರಣವೂ ವಾಲ್ಮೀಕಿ ನಿಗಮದ ಮೂಲಕ ಬೆಳಕಿಗೆ ಬಂದಿದೆ ಎಂದು ಬಿಜೆಪಿ ಮುಖಂಡ ಆರ್‌ ರಘು ಹೇಳಿದ್ದಾರೆ.

ಸದ್ಯ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹೆಸರಿನಲ್ಲಿದ್ದ ಖಾತೆಯಿಂದ 187 ಕೋಟಿ ಹಣ ದುರುಪಯೋಗವಾಗಿರುವ ಬಹುದೊಡ್ಡ ಹಗರಣದ ಹಿನ್ನೆಲೆಯಲ್ಲಿ ಸರ್ಕಾರದ ಇತರ ಅಭಿವೃದ್ಧಿ ನಿಗಮಗಳು ಹಾಗೂ ಮಂಡಳಿಗಳ ಆರ್ಥಿಕ ಸ್ಥಿತಿಗತಿಯ ಬಗ್ಗೆ ಹಾಗೂ ನಿಗಮ ಮಂಡಳಿಗಳು ಹೊಂದಿರುವ ಖಾತೆಗಳು ಹಾಗೂ ಅವುಗಳ ವಿವರವನ್ನು ಸಾರ್ವಜನಿಕರು ಪಾರದರ್ಶಕವಾಗಿ ತಿಳಿಯುವಂತಾಗಲು ಈ ಕೂಡಲೇ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸುವೆ.

R Raghu Demands White Paper On Financial Status Of Boards And Corporations

ಡಾ| ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಸೇರಿದಂತೆ ಇತರ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳು ಹಾಗೂ ಸರ್ಕಾರದ ಅನುದಾನ ಪಡೆಯುವ ಇತರ ಮಂಡಳಿಗಳು ಹಾಗೂ ಪ್ರಾಧಿಕಾರಗಳ ಖಾತೆಗಳಲ್ಲಿ ಇರುವ ಹಣದ ವಿವರ ಬಯಲಾಗಬೇಕಿದೆ. ಸದ್ಯ ವಾಲ್ಮೀಕಿ ನಿಗಮದ ಹಗರಣವೊಂದು ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಬೆಳಕಿಗೆ ಬಂದಿದೆ.

ಇದೇ ರೀತಿಯ ಹಣ ದುರುಪಯೋಗದ ಪ್ರಕರಣಗಳು ಹಾಗೂ ಅಕ್ರಮ ಹಣ ವರ್ಗಾವಣೆಗಳು ಇತರ ನಿಗಮಗಳಲ್ಲೂ ನಡೆದಿರುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಈ ನಿಟ್ಟಿನಲ್ಲಿ ಆರ್ಥಿಕ ಇಲಾಖೆ ಈ ಕೂಡಲೇ ಎಲ್ಲಾ ನಿಗಮಗಳ ಹಾಗೂ ಅನುದಾನ ಪಡೆಯುವ ಮಂಡಳಿಗಳ ಅರ್ಥಿಕ ವಿವರಗಳ ಸ್ಥಿತಿ ಗತಿಗಳ ಬಗ್ಗೆ ಶ್ವೇತಪತ್ರ ಹೊರಡಿಸುವ ಮೂಲಕ ರಾಜ್ಯದ ಆರ್ಥಿಕ ಸ್ಥಿತಿಯ ನಿರ್ವಹಣೆಯ ಶಿಸ್ತಿನ ಕುರಿತು ಪಾರದರ್ಶಕ ಮಾಹಿತಿ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ.

ನಾನು ಈ ಹಿಂದೆ ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ನನಗೆ ತಿಳಿದಂತೆ ಸರ್ಕಾರದ ಅನುದಾನ ನಿಗಮಗಳಿಗೆ ಬಿಡುಗಡೆಯಾದ ನಂತರ ಅನುದಾನವು ಸಂಪೂರ್ಣವಾಗಿ ಬಳಕೆಯಾಗದೇ ಉಳಿಯುವ ಹಣ ಹಾಗೂ ನಿಗಮದಿಂದ ಸಾಲದ ನೆರವು ಪಡೆದ ಫಲಾನುಭವಿಗಳಿಂದ ಮರುಪಾವತಿಯಾಗುವ ಹಣವನ್ನು ನಿಗಮದ ಖಾತೆಗಳಲ್ಲಿ ಠೇವಣಿ ಇರಿಸಲಾಗುತ್ತಿತ್ತು.

ನನಗೆ ಅರಿವಿರುವಂತೆ ಸಾವಿರಾರು ಕೋಟಿ ರುಪಾಯಿಗಳ ಠೇವಣಿ ಅನೇಕ ನಿಗಮಗಳ ಖಾತೆಗಳಲ್ಲಿದೆ, ಈ ಠೇವಣಿಗಳ ಕುರಿತ ಮಾಹಿತಿಗಳು ಹಾಗೂ ಇವುಗಳ ಮೇಲೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆ ಜಾಣಕುರುಡು ಪ್ರದರ್ಶಿಸುತ್ತಿದ್ದುದು ನಾನು ಗಮನಿಸಿದ್ದೇನೆ. ಈ ಹಿನ್ನೆಲೆಯಲ್ಲಿಯೇ ಆರ್ಥಿಕ ಇಲಾಖೆಯ ಕಣ್ಣು ತಪ್ಪಿಸಿ, ವಾಲ್ಮೀಕಿ ನಿಗಮದ ಹಣ ದುರುಪಯೋಗವಾಗಲು ಕಾರಣವಾಗಿದೆ. ಈ ನಿಟ್ಟಿನಲ್ಲಿ ಅತೀ ತುರ್ತಾಗಿ ಸರ್ಕಾರ ನಿಗಮ ಮಂಡಳಿಗಳ ಬ್ಯಾಂಕ್‌ ಖಾತೆಗಳ ವಿವರ ಪ್ರಕಟಿಸಿದರೆ, ವಾಲ್ಮೀಕಿ ನಿಗಮದ ಹಗರಣದಂತೆ ಇನ್ನಷ್ಟು ಹಗರಣಗಳು ಹೊರಬರುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+