Yash: "ನೀವ್ಯಾಕೆ ಪ್ರತಿಯೊಂದಕ್ಕೂ ಗಂಡನನ್ನು ಕರೀತೀರಿ".. ರಾಧಿಕಾ ಪಂಡಿತ್ ಇನ್ಸ್ಟಾಗ್ರಾಮ್ ಪೋಸ್ಟ್ ವೈರಲ್!
ಸ್ಯಾಂಡಲ್ವುಡ್ನ ಟಾಪ್ ಬೆಸ್ಟ್ ಜೋಡಿಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿ ಸಹ ಒಂದು. ತೆರೆಯ ಮೇಲೆ ಒಂದಾಗಿ ಕಾಣಿಸಿಕೊಂಡು ಸಿನಿ ಪ್ರಿಯರನ್ನು ರಂಜಿಸಿದ್ದ ಜೋಡಿ ಇದೀಗ ದಾಂಪತ್ಯ ಜೀವನಕ್ಕೆ ಕಾಲಿರಿಸಿ 8 ವರ್ಷಗಳು ಪೂರ್ಣಗೊಂಡಿವೆ. ನಟ ಯಶ್ ಅವರು ಭಾರತೀಯ ಸಿನಿಮಾರಂಗದಲ್ಲಿ ಹೊಸ ಅಲೆ ಸೃಷ್ಟಿ ಮಾಡಿದ್ದಾರೆ. ಕೆಜಿಎಫ್ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದು, ಹಲವು ದಾಖಲೆಗಳನ್ನು ಮುರಿದಿದೆ. ಈ ಸಂಭ್ರಮಚಾರಣೆಯ ಸಂದರ್ಭದಲ್ಲಿ ನಟಿ ರಾಧಿಕಾ ಪಂಡಿತ್ ಅವರು Instagramನಲ್ಲಿ ಮಾಡಿರುವ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.
ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಿ 8 ವರ್ಷಗಳು ಕಳೆದಿವೆ. 9ನೇ ವರ್ಷದ ಮದುವೆ ವಾರ್ಷಿಕೋತ್ಸವಕ್ಕೆ ನಟಿ ರಾಧಿಕಾ ಪಂಡಿತ್ ಅವರು ಸೋಷಿಯಲ್ ಮೀಡಿಯಾದಲ್ಲಿ ಪತಿ ಮತ್ತು ನಟ ರಾಕಿಂಗ್ ಸ್ಟಾರ್ ಯಶ್ ಅವರ 10 ಗುಣಗಳ ಬಗ್ಗೆ ಎಐ ರಚಿತ ಫೋಟೋವನ್ನು ಹಂಚಿಕೊಂಡಿದ್ದಾರೆ.

ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೊ ಹಂಚಿಕೊಂಡ ರಾಧಿಕಾ ಪಂಡಿತ್ ಅವರು, ನೀವ್ಯಾಕೆ ಪ್ರತಿಯೊಂದಕ್ಕೂ ಗಂಡನನ್ನು ಕರೀತೀರಿ ಎನ್ನುವ ಪ್ರಶ್ನೆಯೊಂದನ್ನು ಕೇಳಿದ್ದು.. ಅದಕ್ಕೆ ಅವರೇ ಉತ್ತರ ರೂಪದಲ್ಲಿ ಯಶ್ ಅವರ ವಿವಿಧ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನನ್ನ ಚಾಟ್ ಜಿಪಿಟಿ, ಅಡುಗೆ ಮಾಡುವವರು , ನನ್ನ ಗುರು, ಕ್ಯಾಲಿಕ್ಯುಲೇಟರ್, ಡಿಜೆ, ಸ್ಟ್ರೆಸ್ಬಸ್ಟರ್, ಪರ್ಸನಲ್ ಡಾಕ್ಟರ್, ಫೋಟೋಗ್ರಾಫರ್ ಹಾಗೂ ನನ್ನ ಶಾಂತಿ ಎಂದು ಒಂದೊಂದು ಫೋಟೋಗಳಿಗೂ ಒಂದೊಂದು ಟ್ಯಾಗ್ಲೈನ್ ಕೊಟ್ಟಿದ್ದಾರೆ.
ಯಶ್ ಮತ್ತು ರಾಧಿಕಾ ಪಂಡಿತ್ 2016 ಡಿಸೆಂಬರ್ 9ರಂದು ಬೆಂಗಳೂರಿನ ತಾಜ್ ವೆಸ್ಟ್ ಎಂಡ್ನಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಯಶ್ ಮತ್ತು ರಾಧಿಕಾ ಪಂಡಿತ್ ಅವರಿಗೆ ಐರಾ ಮತ್ತು ಯಥರ್ವ್ ಎನ್ನುವ ಇಬ್ಬರು ಮಕ್ಕಳಿದ್ದಾರೆ.
ಮಸ್ತ್ ರಿಪ್ಲೈ ಕೊಟ್ಟ ಅಭಿಮಾನಿಗಳು: ರಾಧಿಕಾ ಅವರ ಈ ಪೋಸ್ಟ್ಗೆ ಅಭಿಮಾನಿಗಳಿಂದ ಶುಭಾಶಯದ ಸುರಿಮಳೆ ವ್ಯಕ್ತವಾಗಿದೆ. Perfect package of Family man ❤️ ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.
-
Political Trends: ನಿಂದಾ ರಾಜಕೀಯದ ದಾರಿ ತಪ್ಪಿದ ಪ್ರಜಾತಂತ್ರ: ಯಾವ ಮನೆಯ ಸಾಸಿವೆ ತರ ಹೊರಟಿದ್ದೀರಿ: ರಾಜಾರಾಂ ತಲ್ಲೂರು ಬರಹ -
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು?












Click it and Unblock the Notifications