'ನಂದಿನಿ ಹಾಲಿನ ದರ ಹೆಚ್ಚಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ'
ಬೆಂಗಳೂರು, ಸೆಪ್ಟೆಂಬರ್ 14 ರಾಜ್ಯ ಸರ್ಕಾರವು ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವುದು ಸರಿಯಲ್ಲ; ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ರಾಜ್ಯ ಬಿಜೆಪಿಯ ಹಾಲು ಪ್ರಕೋಷ್ಟದ ವತಿಯಿಂದ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಹಾಲು ಪ್ರಕೋಷ್ಟದ ರಾಜ್ಯ ಸಂಚಾಲಕ ರಾಘವೆಂದ್ರ ಶೆಟ್ಟಿ ಅವರು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಿನ್ನೆ ಮಾಗಡಿಯಲ್ಲಿ ಸಹಕಾರ ಸಚಿವರಿಗೆ ಹಾಲಿನ ದರ ಏರಿಕೆ ಮಾಡುವಂತೆ ಸೂಚಿಸಿರುವುದು ಖಂಡನೀಯ. ಈಗಾಗಲೇ ರಾಜ್ಯದ ಜನತೆ ನೀರು, ವಿದ್ಯುತ್, ಮನೆ ಬಾಡಿಗೆ ಸೇರಿದಂತೆ ಅನೇಕ ದರ ಏರಿಕೆಯ ಆಘಾತದೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಸರ್ಕಾರ ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವುದು ಸರಿಯಲ್ಲ ಎಂದಿರುವ ಅವರು, ರಾಜ್ಯ ಸರ್ಕಾರವು ಮೊದಲು ರೈತರ ಹಾಲಿನ ಸಬ್ಸಿಡಿ ಹಣ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ನಂದಿನಿಯ ಎಲ್ಲ ಮಾದರಿಯ ಹಾಲಿನ ದರ ಕಳೆದ ಜೂನ್ನಲ್ಲೇ ಪ್ರತಿ ಲೀಟರ್ಗೆ 2 ರೂ 10 ಪೈಸೆಗೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಪ್ರತಿ ಲೀಟರ್ ಟೋನ್ಡ್ ಹಾಲು 42 ರಿಂದ 44 ಕ್ಕೆ, ಸಮೃದ್ಧಿ ಹಾಲು 51 ರಿಂದ 53, ಶುಭಂ ಹಾಲು 48 ರಿಂದ 50 ಹೀಗೆ ಎಲ್ಲ ಮಾದರಿಯ ಹಾಲಿನ ದರ ಏರಿಕೆ ಮಾಡಿದ್ದಾರೆ. ರಾಜ್ಯದ ಜನತೆ ನಮಗೆ 50 ಎಂ.ಎಲ್ ಹೆಚ್ಚಿಗೆ ಬೇಕೆಂದು ಯಾರು ಕೇಳಿರಲಿಲ್ಲ, ಆದರೂ ರಾಜ್ಯ ಸರ್ಕಾರ ಮೊಂಡುತನದಿಂದ, ಭಂಡತನದಿಂದ ನಾವು ನಂದಿನಿ ಹಾಲಿನ ದರ ಏರಿಕೆ ಮಾಡಿಲ್ಲ, 50 ಎಂ.ಎಲ್ ಹೆಚ್ಚಳ ನೀಡಿದ್ದೇವೆಂದು ರಾಜ್ಯದ ಹಾಗೂ ಬೆಂಗಳೂರು ನಗರದ ಜನತೆಗೆ ಮಕ್ಮಲ್ ಟೋಪಿ ಹಾಕಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.
ರಾಜ್ಯದ ರೈತರ ಹೆಸರಿನಲ್ಲಿ, ರಾಜ್ಯದ ಜನತೆಯ ಮರ್ಜಿ ಕಾಯದೇ ಈಗ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡಲು ಸೂಚಿಸಿರುವುದು ಸರಿಯಲ್ಲ. ಈಗಾಗಲೇ ರಾಜ್ಯ ಸರ್ಕಾರ ಮತ್ತು ಕೆ.ಎಂ.ಎಫ್ ಹಾಲು ಉತ್ಪಾದಕರಿಗೆ ಸಬ್ಸಿಡಿಯ ಅಂದಾಜು 865 ಕೋಟಿ ರೂ. ಬಾಕಿ ಉಳಿಸಿಕೊಂಡಿರುವ ಮಾಹಿತಿಯಿದೆ. ಮೊದಲು ತಾವು ರೈತರಿಗೆ ನೀಡಬೇಕಾದ ಹಾಲಿನ ಸಬ್ಸಿಡಿ ಪೆÇ್ರೀತ್ಸಾಹಧನ ಬಿಡುಗಡೆಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ರಾಜ್ಯ ಸರ್ಕಾರ ಹೇಗೆ ರೈತರಿಗೆ ಪಂಗನಾಮ ಹಾಕುತ್ತದೆಯೆಂದರೆ 100 ಲೀಟರ್ ಹಾಲನ್ನು ಹಾಲಿನ ಕೇಂದ್ರಗಳಿಗೆ ರೈತರು ನೀಡಿದರೆ ಅದರಲ್ಲಿ ಕೇವಲ 40 ಲೀಟರ್ಗೆ ಮಾತ್ರ ಪ್ರೋತ್ಸಾಹದ ಸಬ್ಸಿಡಿ ಹಣ ನೀಡುತ್ತದೆ. ಇದರಲ್ಲಿ ಗುಡ್ ಮಿಲ್ಕ್, ಫ್ಯಾಟ್ ಮಿಲ್ಕ್ ಎಂದು ಹೇಳಿ ಇದರಲ್ಲಿ ಹಾಲಿನ ಗುಣಮಟ್ಟ ಕಡಿಮೆಯಿದೆ ಎಂದು ಹೇಳಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ, ನಾವು ಅಧಿಕಾರಕ್ಕೆ ಬಂದರೆ ಒಂದು ಲೀಟರ್ ಹಾಲಿನ ಸಬ್ಸಿಡಿ ಹಣವನ್ನು 7 ರೂಪಾಯಿಗೆ ಹೆಚ್ಚಿಸುತ್ತೇವೆಂದು ಹೇಳಿದ್ದರು. ಈಗ ಅಧಿಕಾರಕ್ಕೆ ಬಂದು 1 ವರ್ಷವಾದರೂ ಈ ಬಗ್ಗೆ ಗಮನ ಹರಿಸಿಲ್ಲ, ಸಂಪೂರ್ಣವಾಗಿ ಮರೆತು ಹೋಗಿದ್ದಾರೆ. ಮೊದಲು ಇದನ್ನು ನೆನಪು ಮಾಡಿಕೊಂಡು ಜಾರಿಗೊಳಿಸಲು ಮುಂದಾಗಬೇಕು. ಗೋವಿನ ಆಹಾರವಾದ ಹಿಂಡಿ, ಬೂಸಾಗಳ ಬೆಲೆ ಗಗನಕ್ಕೇರಿದೆ. ಮೇವೂ ಸಹ ಸಿಗುತ್ತಿಲ್ಲ. ಈಗಾಗಲೇ ರಾಜ್ಯದಲ್ಲಿ ಹೈನುಗಾರಿಕೆ ನಷ್ಟದಲ್ಲಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications