ರಾಘವೇಂದ್ರ ಸ್ವಾಮಿಗಳ 348ನೇ ಆರಾಧನೆ ಮಹೋತ್ಸವ ಆರಂಭ
ರಾಘವೇಂದ್ರ ಸ್ವಾಮಿಗಳ ಮೂರು ದಿನಗಳ ಆರಾಧನೆ (ಆಗಸ್ಟ್ 16, 17, 18) ಶುಕ್ರವಾರದಿಂದ ಆರಂಭವಾಗಿದೆ. ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ಇದ್ದು, ಅಲ್ಲಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದಾರೆ. ಈಗ ನಡೆಯುತ್ತಿರುವುದು ರಾಘವೇಂದ್ರ ಸ್ವಾಮಿಗಳ 348ನೇ ಆರಾಧನೆ ಮಹೋತ್ಸವ ಇದಾಗಿದೆ.
ಈ ಮೂರು ದಿನಗಳ ಕಾಲ ನಡೆಯುವ ಆರಾಧನೆಯನ್ನು ಪೂರ್ವಾರಾಧನೆ, ಮಧ್ಯಾರಾಧನೆ ಹಾಗೂ ಉತ್ತರಾರಾಧನೆ ಎಂದು ಕರೆಯಲಾಗುತ್ತದೆ. ಮಧ್ಯಾರಾಧನೆಯು ಆರಾಧನೆಯ ಮುಖ್ಯವಾದ ದಿವಸ. ಆದ್ದರಿಂದ ಆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ.
ಅಂದಹಾಗೆ, ಮಂತ್ರಾಲಯದಲ್ಲಿ ಮೂಲ ವೃಂದಾವನ ಅಂತ ಇದ್ದರೂ ಕರ್ನಾಟಕ ಸೇರಿದಂತೆ ಭಾರತದ ನಾನಾ ರಾಜ್ಯಗಳಲ್ಲಿ, ಹೊರ ದೇಶಗಳಲ್ಲೂ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ವೃಂದಾವನಗಳು ಇವೆ. ಅಲ್ಲೆಲ್ಲ ಕಡೆಯೂ ಶ್ರದ್ಧೆ- ಭಕ್ತಿಯಿಂದ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡಲಾಗುತ್ತದೆ.

ರಾಘವೇಂದ್ರ ಸ್ವಾಮಿಗಳು ಜೀವಂತವಾಗಿಯೇ ವೃಂದಾವನ ಪ್ರವೇಶ ಮಾಡಿದವರು. ಅವರು ವೃಂದಾವನ ಪ್ರವೇಶ ಮಾಡಿದ ದಿನದ ಸ್ಮರಣಾರ್ಥ ಆರಾಧನಾ ಮಹೋತ್ಸವ ನಡೆಯುತ್ತದೆ. ವೃಂದಾವನ ಪ್ರವೇಶ ಮಾಡಿದ ದಿನ, ಹಿಂದಿನ ದಿನ ಹಾಗೂ ನಂತರದ ದಿನ ಹೀಗೆ ಮೂರು ದಿನಗಳ ಕಾಲ ಕಾರ್ಯಕ್ರಮಗಳು ನಡೆಯುತ್ತವೆ.
ವೃಂದಾವನಕ್ಕೆ ಅಭಿಷೇಕ, ಅಲಂಕಾರ, ಭಜನೆ, ಪ್ರವಚನ, ಅನ್ನ ಸಂತರ್ಪಣೆ ಹೀಗೆ ವಿವಿಧ ಸೇವಾ- ಕೈಂಕರ್ಯಗಳನ್ನು ಮಾಡಲಾಗುತ್ತದೆ. ಹಲವೆಡೆ ಈ ಮೂರೂ ದಿನ ಉಚಿತವಾಗಿ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ಆ ಸಲುವಾಗಿಯೇ ಭಕ್ತರು ದವಸ- ಧಾನ್ಯ, ಹಣದ ನೆರವು ನೀಡುತ್ತಾರೆ. ಜತೆಗೆ ಹಲವರು ಸ್ವಯಂ ಸೇವಕರಾಗಿ ಭಾಗಿಯಾಗಿ, ಸೇವೆ ಸಲ್ಲಿಸುತ್ತಾರೆ.

ಬೆಂಗಳೂರಿನಲ್ಲಿ ಕಿರು ಮಂತ್ರಾಲಯ (ದೊಡ್ಡ ಗಣಪತಿ ದೇವಸ್ಥಾನದ ಎದುರು), ಎನ್. ಆರ್. ಕಾಲೋನಿ, ಶ್ರೀನಗರ, ಎಜಿಎಸ್ ಲೇಔಟ್, ಹೊಸಕೆರೆಹಳ್ಳಿ ಸೇರಿದಂತೆ ನಾನಾ ಕಡೆ ರಾಯರ ಆರಾಧನೆ ಆರಂಭವಾಗಿದೆ. ಇನ್ನು ಮೂಲ ವೃಂದಾವನ ಇರುವ ಮಂತ್ರಾಲಯದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತಾದಿಯಲ್ಲಿ ಭಾಗಿ ಆಗಿದ್ದಾರೆ.

ರಾಘವೇಂದ್ರ ಸ್ವಾಮಿಗಳಿಗೆ ಮುಖ್ಯವಾಗಿ ಬ್ರಾಹ್ಮಣರ ಪೈಕಿ ಮಾಧ್ವ ಸಮುದಾಯದ ಅನುಯಾಯಿಗಳು ಹೆಚ್ಚು. ಆದರೂ ಜಾತಿಗಳನ್ನು ಮೀರಿ ರಾಘವೇಂದ್ರ ಸ್ವಾಮಿಗಳ ಆರಾಧನೆಯಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ. ಆದ್ದರಿಂದ ಉಳಿದ ಯತಿಗಳ ಆರಾಧನೆಗಿಂತ ರಾಘವೇಂದ್ರ ಸ್ವಾಮಿಗಳ ಆರಾಧನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುತ್ತಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications