ಬೆಂಗಳೂರಿನಲ್ಲಿ ಹವ್ಯಕರ ಗುರುಗಳಿಂದ ಆಶೀರ್ವಚನ
ಬೆಂಗಳೂರು, ನ 28: ತಾಯಿ ಮಗುವಿನ ಮಧ್ಯೆ ಬದ್ಧತೆಯಿರುತ್ತದೆ. ತಾಯಿಕರುಳು ಆ ಸಂಬಂಧವನ್ನು ಬೆಸೆಯುತ್ತದೆ. ಅದು ಜೀವರಸ ಹರಿಯುವ ಸಂಬಂಧ. ತಾಯಿ ಉಂಡರೆ, ಉಸಿರಾಡಿದರೆ ಅದು ಮಗುವಿಗೂ ಸಲ್ಲುತ್ತದೆ ಎಂದು ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದ್ದಾರೆ.
ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಶನಿವಾರ (ನ 28) ಹವ್ಯಕ ಸಮಾಜದಿಂದ ಸಂಘಟಿಸಿಸಲಾಗಿದ್ದ 'ಬದ್ಧತಾ ಸಮಾವೇಶ'ದ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದ ಶ್ರೀಗಳು, ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ನಿಮಗೂ ಹೃದಯ-ಆತ್ಮದ ಸಂಬಂಧವಿದೆ. (ಶ್ರೀಗಳ ವಿರುದ್ದ ಪ್ರಕರಣದ ಹಿಂದಿನ ಸಂಚು)
ಈ ಬಂಧ ಒಂದು ಗಂಟಿದ್ದಂತೆ. ಈ ಬಂಧವನ್ನು ದುರ್ಭಲಗೊಳಿಸಲು ಗಂಟನ್ನು ಎಳೆಯುತ್ತಾ ಹೋದರೆ ಅದು ಮತ್ತಷ್ಟು ಗಟ್ಟಿಯಾಗುತ್ತದೆ. ಎಳೆಯುವವರಿಗೆ ಅದು ಅರಿವಿಗೆ ಬರುತ್ತಿಲ್ಲ ಎಂದು ಪರೋಕ್ಷವಾಗಿ ತಮ್ಮನ್ನು ವಿರೋಧಿಸುವವರನ್ನು ಉದ್ದೇಶಿಸಿ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ.

ಗುರುಪೀಠದ ಸಲುವಾಗಿ ಆಸ್ತಿ, ಪ್ರಾಣ ನೀಡಲು ಅಷ್ಟೇಕೆ ಜೈಲಿಗೆ ಹೋಗಲೂ ಹಿಂಜರಿಯುವುದಿಲ್ಲವೆಂದು ಅನೇಕರು ಹೇಳಿಕೊಳ್ಳುತ್ತಿದ್ದಾರೆ. ಅದು ನಿಮ್ಮ ಶಕ್ತಿಯ ಸಂಕೇತವಾಗಿದೆ.
ಇದೇ ನಮ್ಮ ದೊಡ್ಡ ನಿಧಿ. ನಮ್ಮ ಬದುಕಿನ ಸಂಪಾದನೆ. ನಾವು ಮುತ್ತು-ರತ್ನ- ಚಿನ್ನ ಸಂಪಾದಿಸಿಲ್ಲ. ತಾನಾಗೇ ಬಂದರೂ ಅದನ್ನು ಸದ್ವಿನಿಯೋಗ ಮಾಡಿದ್ದೇವೆ ಎಂದು ಸಮಾವೇಶದಲ್ಲಿ ಶ್ರೀಗಳು ಹೇಳಿದ್ದಾರೆ.
ನಾವು ಸಾವಿರಾರು ಕೋಟಿ ರೂಪಾಯಿ ಬಯಸಲಿಲ್ಲ. ಸಮಾಜವೆಂಬ ನಿಧಿ ಗಳಿಸಿದ್ದೇವೆ. ಮಠದಲ್ಲಿ ಹುಡುಕಿದರೆ ನಿಧಿಯ ಬದಲು ಜನರೇ ಸಿಗುತ್ತಾರೆ. ಇಂತಹ ಗುರುಗಳು ನಿಮಗೆ ಮುಂದೆಯೂ ಸಿಗಬಹುದು. ಆದರೆ ಇಂತಹ ಶಿಷ್ಯರು ಯಾವ ಗುರುವಿಗೂ ಸಿಗಲು ಸಾಧ್ಯವಿಲ್ಲ ಎಂದು ಶ್ರೀಗಳು ಮಾರ್ಮಿಕವಾಗಿ ನುಡಿದಿದ್ದಾರೆ.
ನಮಗೆ ಪೀಠಕ್ಕೆ ಬರುವಾಗಲೇ ಪರೀಕ್ಷೆ ಎದುರಾಗಿದೆ. ಸಮುದ್ರ ನದಿಯನ್ನು ಪರಿಶುದ್ಧವಾಗಿದ್ದಲ್ಲಿ ಮಾತ್ರ ಸೇರಿಸಿಕೊಳ್ಳುವಂತೆ ಸಾಕಷ್ಟು ಪರೀಕ್ಷೆ ಎದುರಿಸಿ ಪೀಠಕ್ಕೆ ಬಂದಿದ್ದೇವೆ. ಈ ದಾರಿ ಕೆಂಡದ ದಾರಿ, ಮುಳ್ಳಿನ ದಾರಿ, ಕೆಂಡದಲ್ಲಿ ಮಲಗಿ, ಕೆಂಡವನ್ನು ಹೊದ್ದು, ಕೆಂಡವನ್ನೇ ತಿಂದು ಬದುಕಬೇಕು ಎಂದು ಶ್ರೀಗಳು ಹೇಳಿದ್ದಾರೆ.
ಈಗ ನಡೆಯುತ್ತಿರುವ ಬೆಳವಣಿಗೆಯಿಂದ ನಮಗೆ ಖಂಡಿತವಾಗಿಯೂ ಬೇಸರವಿಲ್ಲ. ಒಬ್ಬ ವ್ಯಕ್ತಿ ಪರೀಕ್ಷೆಯಿಲ್ಲದೇ ಮಹಾತ್ಮನಾಗಲು ಸಾಧ್ಯವಿಲ್ಲ. ಸಾವಿರಾರು ಜನರಿಗೆ ಸುಖ-ಶಾಂತಿ ನೀಡುವ ಯೋಗ್ಯತೆ ಯಾರಿಗಿದೆಯೋ ಅವರು ವಿಷಕಂಠನಾಗಿ ದು:ಖವನ್ನು ಅನುಭವಿಸಲೇ ಬೇಕು ಎಂದು ರಾಘವೇಶ್ವರ ಶ್ರೀಗಳು ಹೇಳಿದ್ದಾರೆ. (ರಾಘವೇಶ್ವರ ಭಾರತಿಗಳು ದೇಹ ತ್ಯಾಗಕ್ಕೂ ಸಿದ್ಧ)
ಇನ್ನೊಬ್ಬ ನಿರಪರಾಧಿಗೆ ಹೀಗಾಗಬಾರದೆಂದು ನಮಗೇ ಆ ಸನ್ನಿವೇಶ ಎದುರಾಗಿದ್ದಾಗಿ ನಾವು ಭಾವಿಸುತ್ತೇವೆ. ಮಠದಲ್ಲಿ ಅಮಂಗಳವಾದ ಕಾರ್ಯಗಳು ನಡೆಯಲು ಸಾಧ್ಯವೇ ಇಲ್ಲ. ಇಂತಹ ಆಪಾದನೆ ಎದುರಾದಾಗಲೂ ಮಠ ಸುರಕ್ಷಿತವಾಗಿದೆ.

ನಮ್ಮ ಬದ್ಧತೆಯನ್ನು ನಾಶಮಾಡಲು, ನಂಬಿಕೆ ಒಡೆಯಲು ಹುನ್ನಾರ ನಡೆಸಲಾಗಿದೆ. ಹಾಲು ಮನಸ್ಸನ್ನು ಹಾಳು ಮಾಡಲು ಬಿಡಬಾರದು. ಸತ್ಯಕ್ಕೆ ಖಂಡಿತ ಜಯವಿದೆ, ಸತ್ಯ ನಮ್ಮ ಜೊತೆಗಿದೆ ಎಂದು ಶ್ರೀಗಳು ಸಮಾವೇಶದಲ್ಲಿ ಹೇಳಿದ್ದಾರೆ.
ಯಾವುದಕ್ಕೂ ಕುಗ್ಗದೇ ಬಗ್ಗದೇ ದಾಷ್ಟ್ಯವನ್ನು ಮೆರೆಯೋಣ. ಒಳ್ಳೆದಿನವನ್ನು ಎದುರು ನೋಡೋಣ. ಸಕಲರಿಗೂ ಒಳಿತಾಗಲಿ ಎಂದು ರಾಘವೇಶ್ವರ ಶ್ರೀಗಳು ಸಮಾವೇಶದಲ್ಲಿ ಭಕ್ತ ಸಮುದಾಯಕ್ಕೆ ಹಾರೈಸಿದ್ದಾರೆ.
ಶಂಖನಾದದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮೋಹನ ಹೆಗಡೆ ಪ್ರಾಸ್ತಾವಿಕ ಭಾಷಣ ಮಾಡಿದರು. ಬದ್ಧತಾ ಸಂದೇಶವನ್ನು ಯಲ್ಲಾಪುರ ಸಂಕಲ್ಪದ ಪ್ರಮೋದ ಹೆಗಡೆ ನೀಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications