ಹಿಂದೂ ಸಮಾಜಕ್ಕೆ ರಾಘವೇಶ್ವರರು ಕಳಂಕ: ಹೆಗಡೆ
ಹುಬ್ಬಳ್ಳಿ, ಜು. 30: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಸನ್ಯಾಸಿಯೇ ಅಲ್ಲ, ಅವರು ತಕ್ಷಣ ಪೀಠದಿಂದ ಕೆಳಗೆ ಇಳಿಯಬೇಕು ಎಂದು ಸಮಾನ ಮನಸ್ಕ ಹವ್ಯಕ ವೇದಿಕೆ ಅಧ್ಯಕ್ಷ ಸಚ್ಚಿದಾನಂದ ಹೆಗಡೆ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ರಾಘವೇಶ್ವರರು ಕಳಂಕ. ಪೀಠಾಧೀಶರಾದ ಮೇಲೆಯೂ ಸಹ ತಮ್ಮ ಪೂರ್ವಾಶ್ರಮದ ಹೆಸರನ್ನು ಹಾಗೇ ಇಟ್ಟುಕೊಂಡಿದ್ದಾರೆ. ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅಲಿಯಾಸ್ ಹರೀಶ ಶರ್ಮ, ಹರೀಶ ಭಟ್ಟ, ಹರೀಶ ಎಂದು ಮುಂತಾಗಿ ಬರೆಸಿರುವ ಬಗ್ಗೆ ದಾಖಲೆಯಿದೆ ಎಂದು ಹೇಳಿದರು.[ರಾಘವೇಶ್ವರ ಶ್ರೀಗಳಿಗೆ ನಿಷ್ಠ : ಹವ್ಯಕ ಮಹಾಮಂಡಲ]

ಸನ್ಯಾಸಿಯಾದವನಿಗೆ ಜೀವ ವಿಮೆ ಅಗತ್ಯವೇ? ತಮ್ಮ ಹೆಸರಿನಲ್ಲಿ ಆಸ್ತಿ ಬೇಕೆ? ಸಂಬಂಧಿಗಳನ್ನು ಪ್ರಮುಖ ಹುದ್ದೆಗೆ ನೇಮಕ ಮಾಡಿಕೊಳ್ಳುವುದು ಏತಕ್ಕೆ? ಎಂಬುದಾಗಿ ಸಚ್ಚಿದಾನಂದ ಹೆಗಡೆ ಪ್ರಶ್ನೆ ಮಾಡಿದ್ದಾರೆ.[ರಾಘವೇಶ್ವರ ಶ್ರೀ ಡಿಎನ್ಎ ವರದಿ ಪಾಸಿಟಿವ್ : ಎಜಿ]
ಸಮಾನ ಮನಸ್ಕ ಹವ್ಯಕ ವೇದಿಕೆ ಸಂಚಾಲಕ ಸಿಬಿಎಲ್ ಹೆಗಡೆ ಮಾತನಾಡಿ, ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕುವ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ. ಸಿಐಡಿ ಅಧಿಕಾರಿಗಳು ಇಲ್ಲಿಯವರೆಗೆ ಸ್ವಾಮೀಜಿಯನ್ನು ಸ್ಥಳಕ್ಕೆ ಕರೆದುಕೊಂಡು ಹೋದ ದಾಖಲೆಯಿಲ್ಲ ಎಂದು ಹೇಳಿದರು. ಸ್ವಾಮೀಜಿಗೆ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಶ್ರೇಷ್ಠತೆ ಉಳಿದುಕೊಂಡಿಲ್ಲ ಎಂದು ಹೇಳಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications