ನರೇಂದ್ರ ಮೋದಿ ಅವರೇ ನುಡಿದಂತೆ ನಡೆಯಿರಿ : ರಾಹುಲ್ ವ್ಯಂಗ್ಯ
ಬಾಗಲಕೋಟೆ, ಫೆಬ್ರವರಿ 25 : ಕರ್ನಾಟಕ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಿಕ್ಕಪಡಸಲಗಿ ಬ್ಯಾರೇಜ್ಗೆ ಬಾಗಿನ ಅರ್ಪಿಸಿದರು. ಬಳಿಕ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು.
ಚಿತ್ರಗಳು : ವಿಜಯಪುರದಲ್ಲಿ ರಾಹುಲ್ ಪ್ರವಾಸ
ಬಾಗಲಕೋಟೆ ಜಿಲ್ಲೆಯ ಚಿಕ್ಕಪಡಸಲಗಿಯಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಬಸವಣ್ಣನವರ ವಚನ ಹೇಳುವ ಮೂಲಕ ರಾಹುಲ್ ಗಾಂಧಿ ಭಾಷಣ ಆರಂಭಿಸಿದರು. 'ದೇಶದ ಮೊದಲ ಸಂಸತ್ತು ಅನುಭವ ಮಂಟಪ, ಕಳೆದ ಬಾರಿ ರಾಜ್ಯಕ್ಕೆ ಆಗಮಿಸಿದಾಗ ಅಲ್ಲಿಗೆ ಭೇಟಿ ನೀಡಿದ್ದೆ' ಎಂದು ಹೇಳಿದರು.
ರಾಹುಲ್ ಗಾಂಧಿ ಭಾಷಣದ ಮುಖ್ಯಾಂಶಗಳು ಇಲ್ಲಿವೆ..
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ಕೇಳಲು ಆಗಮಿಸಿದ್ದಾರೆ. ಒಂದು ಹಂತದ ರಾಜ್ಯ ಪ್ರವಾಸ ಮುಗಿಸಿದ್ದಾರೆ.
ಕರ್ನಾಟಕಕ್ಕೆ ನರೇಂದ್ರ ಮೋದಿ ಅವರು ಬಂದಾಗ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಆದರೆ, ಅಕ್ಕಪಕ್ಕದಲ್ಲಿ ಯಾರು ಕುಳಿತಿದ್ದಾರೆ ಎಂಬುದನ್ನು ನೋಡುವುದಿಲ್ಲ.
ಆದರೆ, ನರೇಂದ್ರ ಮೋದಿ ಅವರು ಜನರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಯಾರ ಖಾತೆಗೂ ಇನ್ನೂ ಹಣ ಬಂದಿದಲ್ಲ.
ದೇಶದ 2 ಲಕ್ಷ ಯುವ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದರು. ಆದರೆ, ಸಂಸತ್ನಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿದೆವು. ಮೋದೀಜಿ ನುಡಿದಂತೆ ನಡೆಯಿರಿ ಎಂದು ರಾಹುಲ್ ವ್ಯಂಗ್ಯವಾಡಿದರು.
ಬ್ಯಾರೇಜ್ ಗೆ ಬಾಗಿನ ಅರ್ಪಣೆ
Congress President Rahul Gandhi makes a ceremonial offering at the Chikkapadasalagi Barrage. #JanaAashirwadaYatre #NavaKarnatakaNirmana pic.twitter.com/qDuqM6UFlv
— Congress (@INCIndia) February 25, 2018
ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿ ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ.
ಬಸವಣ್ಣ ಹೇಳಿದ್ದರು ನುಡಿದಂತೆ ನಡೆ ಎಂದು ಹೇಳಿದ್ದರು.












Click it and Unblock the Notifications