ಲೋಕಸಭೆನೂ ಗೆಲ್ತಿವಿ ರಾಹುಲ್ ಪ್ರಧಾನಿಯಾಗ್ತಾರೆ: ಭವಿಷ್ಯ ನುಡಿದ ಕಾಂಗ್ರೆಸ್ ನಾಯಕ
ದಾವಣಗೆರೆ, ಡಿಸೆಂಬರ್ 03: ಪಂಚರಾಜ್ಯ ಚುನಾವಣೆ ಸೆಮಿ ಫೈನಲ್. ಇಲ್ಲಿ ಗೆದ್ದು ಲೋಕಸಭೆನೂ ಗೆಲ್ಲುತ್ತೇವೆ, ನಮ್ಮ ರಾಹುಲ್ ಗಾಂಧಿ ಪ್ರಧಾನಿ ಆಗುತ್ತಾರೆ ಎಂದು ದಾವಣಗೆರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ , ಕಾಂಗ್ರೆಸ್ ಪಕ್ಷಕ್ಕೆ ಒಳ್ಳೇಯ ದಿನ. ಐದರಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ಎಲ್ಲಾ ಸಮೀಕ್ಷೆಗಳು ಕೂಡ ನಮ್ಮ ಪರವಾಗಿ ಬಂದಿವೆ. ಪಂಚರಾಜ್ಯ ಚುನಾವಣೆ ಫಲಿತಾಂಶ ಮುಂದಿನ ಲೋಕಸಭೆಗೆ ದಿಕ್ಸೂಚಿ. ಬಿಜೆಪಿ ಅಡಳಿತದಿಂದ ಜನರು ರೋಸಿ ಹೋಗಿದ್ದಾರೆ ಎಂದು ಹೇಳಿದರು.

15 ಲಕ್ಷ ಹಣ ಖಾತೆಗೆ ಬಂದಿಲ್ಲ, ಉದ್ಯೋಗ ಸೃಷ್ಠಿಯಾಗಿಲ್ಲ. ಬರೀ ನಮ್ ಕೀ ಬಾತ್ ಮಾಡಿಕೊಂಡು ಕಾಮ್ ಕೀ ಬಾತ್ ಮರ್ತಿದ್ದಾರೆ, ಈ ಬಾರಿ INDIA ಅಧಿಕಾರಕ್ಕೆ ಬರೋದು ಶತಸಿದ್ದ. ಈ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ, ರಾಜ್ಯದಲ್ಲಿ ಬರ ಇದ್ದರೂ ಕೇಂದ್ರ ದಿಂದ ಮಾತ್ರ ಹಣ ಬಿಡುಗಡೆಯಾಗಿಲ್ಲ. 25 ಜನ ಸಂಸದರು ಐದು ಜನ ಕೇಂದ್ರ ಮಂತ್ರಿಗಳು ಇದ್ದರೂ ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.
ಕೇಂದ್ರ ಸಚಿವೆ ನಿರ್ಮಲ ಸೀತರಾಮನ್ ಕರ್ನಾಟಕದವರೇ ಆಗಿದ್ದಾರೆ. ಅದರೂ ಕೂಡ ಬರ ಪರಿಹಾರ ಬಿಡುಗಡೆ ಮಾಡಿಸಲು ಆಗುತ್ತಿಲ್ಲ, ರಾಜ್ಯ ಸರ್ಕಾರ ಬರ ನಿರ್ವಹಣೆ ಸರಿಯಾಗಿ ಮಾಡುತ್ತಿದೆ.
ವಿಜಯೇಂದ್ರ, ಅಶೋಕ್ ಇಬ್ಬರು ಆಯ್ಕೆಯಾಗಿದ್ದು ಆರು ತಿಂಗಳ ನಂತರ.ಈ ಜೋಡೆತ್ತುಗಳಿಂದ ಕಾಂಗ್ರೆಸ್ ಗೆ ಯಾವುದೇ ತೊಂದರೆ ಇಲ್ಲ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 25 ಕ್ಕೂ ಹೆಚ್ವು ಸ್ಥಾನ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಬಿಜೆಪಿ, ಜೆಡಿಎಸ್ನ ಹಲವು ಮುಖಂಡರು, ಶಾಸಕರು ಮುಂದಾಗಿದ್ದಾರೆ.ಬೆಳಗಾವಿಯ ವಿಧಾನಸಭೆ ಅಧಿವೇಶನದ ಬಳಿಕ ಹಲವರು ಕಾಂಗ್ರೆಸ್ ಸೇರಲಿದ್ದಾರೆ ಈ ಮೂಲಕ ಆಪರೇಷನ್ ಹಸ್ತದ ಕುರಿತು ಸುಳಿವು ನೀಡಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications