ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ಗೆ ಇಂದು ದುಃಖದ ದಿನ ರಾಹುಲ್ ವಿಷಾದ

|
Google Oneindia Kannada News

ನವದೆಹಲಿ, ನವೆಂಬರ್ 25: ದೇಶದ ಇಬ್ಬರು ಪ್ರಮುಖ ನಾಯಕರಾದ ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಕೇಂದ್ರ ಮಾಜಿ ಸಚಿವ ಜಾಫರ್ ನಿಧನದಿಂದ ಕಾಂಗ್ರೆಸ್ ಪಾಲಿಗೆ ಇಂದು ದುಃಖದ ದಿನ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಭಾವನೆ ವ್ಯಕ್ತಪಡಿಸಿರುವ ಅವರು ಕಾಂಗ್ರೆಸ್ ನ ಇಬ್ಬರು ಹಿರಿಯ ನಾಯಕರು ಒಂದೇ ದಿನ ನಿಧನರಾಗಿರುವುದು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಕರ್ನಾಟಕದ ಕಾಂಗ್ರೆಸ್‌ನಲ್ಲಿ ಆಧಾರ ಸ್ತಂಭದಂತಿದ್ದ ಇಬ್ಬರು ನಾಯಕರ ಅಗಲುವಿಕೆಯಿಂದ ಆದ ನೋವನ್ನು ಮರೆಯಲಾಗದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Rahul Gandhi condoles demise of ambareesh and Jaffer Sharief

ಅಂಬರೀಶ್ ಸಾವಿಗೆ ಸಂತಾಪ ಸೂಚಿಸಿದ ರಾಹುಲ್ ಗಾಂಧಿ ಅಂಬರೀಶ್ ಸಾವಿಗೆ ಸಂತಾಪ ಸೂಚಿಸಿದ ರಾಹುಲ್ ಗಾಂಧಿ

'ಅಂಬರೀಶ್ ಅವರು ನಟನೆ ಮತ್ತು ರಾಜಕೀಯ ಕೆಲಸದಿಂದಾಗಿ ಕರ್ನಾಟಕ ಮತ್ತು ಇಡೀ ದೇಶದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಒಬ್ಬ ಕುಟುಂಬ ಸದಸ್ಯನನ್ನು ಕಳೆದುಕೊಂಡಿದೆ. ಅಂಬರೀಶ್ ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿಯನ್ನು ನೀಡಲಿ' ಎಂದು ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

English summary
All India Congress Committee president Rahul Gandhi has been condoled sad demise of senior leader C.K.Jaffer Sharief and Ambaressh he recalled his contribution to the party as well as nation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X