ಬೆಂಗಳೂರಿನ 1 ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ: ರಾಹುಲ್ ಗಾಂಧಿ ಬಳಿ ಇದೆ ಸಾಕ್ಷಿ: ಸ್ಪೋಟಕ ಮಾಹಿತಿ ಬಹಿರಂಗ
ಬೆಂಗಳೂರು : ಜುಲೈ 31: 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗವಾಗಿ ಹೇಳಿದ್ದಾರೆ.
ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮತಗಳ್ಳತದ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, ನಮ್ಮ ಪಕ್ಷದ ಸಂಶೋಧನಾ ವಿಭಾಗವು ಲೋಕಸಭೆಯಲ್ಲಿ ಆಗಿರುವ ಅಕ್ರಮಗಳ ಬಗ್ಗೆ ನಮ್ಮ ನಾಯಕ ರಾಹುಲ್ ಗಾಂಧಿ ಅವರ ಗಮನಕ್ಕೆ ತಂದಿದೆ. ಈ ವಿಚಾರವಾಗಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಚಿವರು, ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, 5ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ತಿಳಿಸಿದರು.
ಬಿಜೆಪಿ ಕೂಡ ಹೋರಾಟ ಮಾಡುವುದಾಗಿ ತಿಳಿಸಿರುವ ಬಗ್ಗೆ ಕೇಳಿದಾಗ, "ಅವರು ಹೋರಾಟ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರಿಗೆ ಹೋರಾಟ ಮಾಡಬೇಡ ಎಂದು ಹೇಳಲು ಸಾಧ್ಯವೇ? ಅವರ ಹೋರಾಟವನ್ನು ನಾನೇಕೆ ಟೀಕೆ ಮಾಡಲಿ? ಅವರ ವಿಚಾರ ಅವರು ಹೇಳಲಿ, ನಮ್ಮ ವಿಚಾರ ನಾವು ಹೇಳುತ್ತೇವೆ. ಮಾಧ್ಯಮಗಳಿರುವುದು ಎಲ್ಲರ ವಿಚಾರಗಳನ್ನು ಪ್ರಚಾರ ಮಾಡುವುದಕ್ಕೆ. ಆ ಕೆಲಸ ನೀವು ಮಾಡಿ" ಎಂದರು.
ಚುನಾವಣೆ ನಡೆಯುತ್ತಿರುವುದು ಬಿಹಾರದಲ್ಲಿ, ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿರುವುದೇಕೆ ಎಂಬ ಬಿಜೆಪಿ ಪ್ರಶ್ನೆ ಬಗ್ಗೆ ಕೇಳಿದಾಗ, "ಇದು ಬಿಹಾರ ಅಥವಾ ಕರ್ನಾಟಕದ ಪ್ರಶ್ನೆಯಲ್ಲ. ಮತಗಳ ದುರ್ಬಳಕೆ, ಅಕ್ರಮದ ವಿಚಾರ. ವಿಧಾನಸಭೆ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿ ನಾಗೇಶ್ ಅವರು ಅಕ್ರಮದ ಬಗ್ಗೆ ಧ್ವನಿ ಎತ್ತಿದ್ದರು. ಆದರೂ ನಾವು ಬಹುಮತ ಪಡೆದೆವು. ಲೋಕಸಭೆಯಲ್ಲಿ ಅಕ್ರಮ ನಡೆದಿದ್ದು ಕೆಲವು ಕ್ಷೇತ್ರಗಳಲ್ಲಿ ನಾವು ಪರಿಶೀಲನೆ ಮಾಡಿದ್ದೇವೆ. ಅವರು ಏನಾದರೂ ಟೀಕೆ ಮಾಡಿ ನಮ್ಮನ್ನು ನೆನೆಸಿಕೊಳ್ಳಲಿ" ಎಂದು ತಿಳಿಸಿದರು.
ರ್ಯಾಲಿ ಮಾಡುತ್ತೀರೋ, ಸಮಾವೇಶ ಮಾಡುತ್ತೀರೋ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ನಿನ್ನೆ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದು, ಇಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನ್ಯಾಯಾಲಯದ ಕೆಲವು ಷರತ್ತುಗಳಿವೆ. ಅವುಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ಹೀಗಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಈ ವಿಚಾರವಾಗಿ ಈಗಲೇ ಹೆಚ್ಚಿನ ಮಾಹಿತಿ ನೀಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಹೇಗೆ ಅಕ್ರಮ ನಡೆಸಲಾಗಿದೆ ಎಂಬ ಬಗ್ಗೆ ನಮ್ಮ ನಾಯಕರೇ ನಿಮಗೆ ಮಾಹಿತಿ ನೀಡಲಿದ್ದಾರೆ ಎಂದರು.
ಆಗಸ್ಟ್ 5ರಂದು ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷದ ಮುಖಂಡರ ಸಭೆ ಮಾಡಲಿದ್ದು, ಸಭೆ ಬಳಿಕ ಕಾರ್ಯಕ್ರಮದ ಸ್ವರೂಪ ಹಾಗೂ ಸ್ಥಳದ ಬಗ್ಗೆ ತೀರ್ಮಾನ ಮಾಡಲಾಗುವುದು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಗುರುವಾರ ಶಾಸಕರು, ಎಂಎಲ್ ಸಿಗಳು, ಪರಾಜಿತ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರ ಜೊತೆ ಸಭೆ ಮಾಡಲಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಈ ಸಭೆ ಬಳಿಕ ಸ್ಥಳ ತೀರ್ಮಾನಿಸಲಾಗುವುದು. ನಾವು ಕೆಲವು ಸ್ಥಳಗಳ ಸಲಹೆ ನೀಡಿದ್ದು, ಪ್ರಧಾನ ಕಾರ್ಯದರ್ಶಿಗಳು ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಕ್ಷೇತ್ರದಿಂದ ಜನ ಬರಬೇಕು. ರಾಜ್ಯದ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪರಾಜಿತ ಅಭ್ಯರ್ಥಿಗಳು ಹಾಗೂ ನಾಯಕರು ಕಡ್ಡಾಯವಾಗಿ 5ರಂದು ಆಗಮಿಸಬೇಕು. ಈ ಸಂಬಂಧ ಆಗಸ್ಟ್ 3ರ ಒಳಗಾಗಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ಮಾಡಬೇಕು. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಸಭೆ ಮಾಡಬೇಕು ಎಂದು ತಿಳಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications