ಪಕ್ಷಕ್ಕಾಗಿ ತ್ಯಾಗ ಮಾಡುವವರಿಗೆ ಚುನಾವಣಾ ಟಿಕೆಟ್: ರಾಹುಲ್ ಗಾಂಧಿ
ಮಂಗಳೂರು, ಮಾರ್ಚ್ 21: ರಾಜ್ಯ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಇಂದು ಮಂಗಳೂರಿನಲ್ಲಿ ಕರಾವಳಿ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದರು. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ತಂಗಿದ್ದ ರಾಹುಲ್ ಗಾಂಧಿ ಅಲ್ಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಭೆ ನಡೆಸಿ ಮುಂಬರುವ ಚುನಾವಣೆಯ ರಣತಂತ್ರದ ಬಗ್ಗೆ ಚರ್ಚೆ ನಡೆಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಸಭೆಯಲ್ಲಿ ದ.ಕ,ಉಡುಪಿ ಜಿಲ್ಲೆಯ ಒಟ್ಟು 13 ವಿದಾನ ಸಭಾ ಕ್ಷೇತ್ತ್ರದ 26 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು. ಅದಲ್ಲದೇ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಉಪಸ್ತಿತರಿದ್ದರು.
ರಾಹುಲ್ ಗಾಂಧಿ ಅವರೊಂದಿಗೆ ಸಭೆ ಮುಗಿಸಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಸಚಿವ ಪ್ರಮೋದ್ ಮಧ್ವರಾಜ್ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ನಾಯಕರ ಪ್ರತ್ಯೇಕ ಸಭೆ ನಡೆಸಿದ್ದು ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳಿಗೆ ರಾಹುಲ್ ಗಾಂಧಿ ಅಭಯ ನೀಡಿದ್ದಾರೆ ಎಂದು ತಿಳಿಸಿದರು.

ಯಾರು ಪಕ್ಷಕ್ಕಾಗಿ ತ್ಯಾಗ ಮಾಡ್ತಾರೋ ಅವರಿಗೆ ಟಿಕೆಟ್ ನೀಡುವುದಾಗಿ ರಾಹುಲ್ ಸ್ಪಷ್ಟ ಪಡಿಸಿದ್ದು ಟಿಕೆಟ್ ವಂಚಿತರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ಆದರೆ ಈ ಸಭೆಯಲ್ಲಿ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಟಿಕೆಟ್ ತೀರ್ಮಾನ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಆದರೆ ಈ ಮೊದಲು ಸರ್ಕ್ಯೂಟ್ ಹೌಸ್ ನಲ್ಲಿ ಆಯೋಜಿಸಲಾಗಿದ್ದ ರಾಹುಲ್ ಗಾಂಧಿ ಸಭೆಗೆ ತೆರಳಲು ಕಾಂಗ್ರೆಸ್ ಮುಖಂಡರು ಹರಸಾಹಸ ಪಡಬೇಕಾಯಿತು. ಪಾಸ್ ಇಲ್ಲದವರನ್ನು ಒಳಗೆ ಬಿಡದ ಎಸ್.ಪಿ.ಜಿ ಸಿಬ್ಬಂದಿಯವರೊಂದಿಗೆ ಕಾಂಗ್ರೆಸ್ ಮುಖಂಡರು ವಾಗ್ವಾದ ನಡೆಸಿದರು.












Click it and Unblock the Notifications