ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಮಾನ ನಿಲ್ದಾಣದಲ್ಲಿ ರಾಹುಲ್, ಸಿದ್ದರಾಮಯ್ಯ ರಹಸ್ಯ ಮಾತುಕತೆ!

|
Google Oneindia Kannada News

Recommended Video

ವಿಮಾನ ನಿಲ್ದಾಣದಲ್ಲಿ ರಾಹುಲ್, ಸಿದ್ದರಾಮಯ್ಯ ರಹಸ್ಯ ಮಾತುಕತೆ! | Oneindia Kannada

ಬೆಂಗಳೂರು, ಮಾರ್ಚ್ 18 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಕರ್ನಾಟಕ ಪ್ರವಾಸ ಕೈಗೊಂಡಿದ್ದರು. ಬೆಂಗಳೂರಿನಿಂದ ದೆಹಲಿಗೆ ವಾಪಸ್ ಅಗುವಾಗ ಸಿದ್ದರಾಮಯ್ಯ ಜೊತೆ ಅವರು ನಡೆಸಿದ ರಹಸ್ಯ ಮಾತುಕತೆ ಕುತೂಹಲಕ್ಕೆ ಕಾರಣವಾಗಿದೆ.

ರಾಹುಲ್ ಗಾಂಧಿ ಅವರು ಸೋಮವಾರ ಕರ್ನಾಟಕದಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಮೊದಲು ಕಲಬುರಗಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಬಳಿಕ ಬೆಂಗಳೂರಿನಲ್ಲಿ ಟೆಕ್ಕಿಗಳ ಜೊತೆ ಸಂವಾದ ನಡೆಸಿದರು.

ಟೈಮ್ಸ್‌ ನೌ ಸಮೀಕ್ಷೆ : ಕರ್ನಾಟಕದಲ್ಲಿ ಜೆಡಿಎಸ್‌ಗೆ 1 ಸ್ಥಾನ!ಟೈಮ್ಸ್‌ ನೌ ಸಮೀಕ್ಷೆ : ಕರ್ನಾಟಕದಲ್ಲಿ ಜೆಡಿಎಸ್‌ಗೆ 1 ಸ್ಥಾನ!

ಬೆಂಗಳೂರಿನಿಂದ ದೆಹಲಿಗೆ ಹೊರಡುವ ಮೊದಲು ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರ ಜೊತೆ ರಹಸ್ಯವಾಗಿ ಮಾತುಕತೆ ನಡೆಸಿದರು. ಸಿದ್ದರಾಮಯ್ಯ ಕೈ ಹಿಡಿದು ಕರೆದುಕೊಂಡು ಹೋದ ಅವರು 15 ನಿಮಿಷಕ್ಕೂ ಅಧಿಕ ಕಾಲ ಮಾತುಕತೆ ನಡೆಸಿದರು.

ಬೆಂಗಳೂರು ಟೆಕಿಗಳ ಜೊತೆ ರಾಹುಲ್ ಗಾಂಧಿ ದೇಶದ ಮಾತುಬೆಂಗಳೂರು ಟೆಕಿಗಳ ಜೊತೆ ರಾಹುಲ್ ಗಾಂಧಿ ದೇಶದ ಮಾತು

ಚುನಾವಣಾ ಸಿದ್ಧತೆ, ಟೆಕ್ಕಿಗಳ ಜೊತೆ ಸಂವಾದ ನಡೆಸುವಾಗ ಆದ ಎಡವಟ್ಟು, ಜೆಡಿಎಸ್‌ ಜೊತೆಗಿನ ಮೈತ್ರಿಯ ಕುರಿತು ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಭಯ ನಾಯಕರ ಮಾತುಕತೆ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.....

ರಾಹುಲ್ ಸಂವಾದ ಕಾರ್ಯಕ್ರಮದ ಹೊರಗೆ ಕೈ-ಬಿಜೆಪಿ ಕಾರ್ಯಕರ್ತರ ಗಲಾಟೆರಾಹುಲ್ ಸಂವಾದ ಕಾರ್ಯಕ್ರಮದ ಹೊರಗೆ ಕೈ-ಬಿಜೆಪಿ ಕಾರ್ಯಕರ್ತರ ಗಲಾಟೆ

ರಾಹುಲ್ ಗಾಂಧಿ, ಸಿದ್ದರಾಮಯ್ಯ

ರಾಹುಲ್ ಗಾಂಧಿ, ಸಿದ್ದರಾಮಯ್ಯ

ಬೆಂಗಳೂರಿನಿಂದ ದೆಹಲಿಗೆ ಹೊರಡುವ ಮೊದಲು ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರ ಜೊತೆ ರಹಸ್ಯವಾಗಿ ರಾಹುಲ್ ಗಾಂಧಿ ಕೆಲವು ಕಾಲ ಮಾತುಕತೆ ನಡೆಸಿದರು. ಉಭಯ ನಾಯಕರ ಮಾತುಕತೆ ಕುತೂಹಲಕ್ಕೆ ಕಾರಣವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಆದರೆ, ಸಿದ್ದರಾಮಯ್ಯ ಬಳಿ ಮಾತ್ರ ಮಾತುಕತೆ ನಡೆಸಿದ್ದಾರೆ.

ರಾಹುಲ್ ಗಾಂಧಿಗೆ ಇರುಸುಮುರುಸು

ರಾಹುಲ್ ಗಾಂಧಿಗೆ ಇರುಸುಮುರುಸು

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಟೆಕ್ಕಿಗಳ ಜೊತೆ ಮಾತುಕತೆ ನಡೆಸುವಾಗ ರಾಹುಲ್ ಗಾಂಧಿ ಅವರಿಗೆ ಇರಸುಮುರುಸು ಉಂಟಾಯಿತು. ಕಾರ್ಯಕ್ರಮಕ್ಕೆ ಅವರು ಬರುವಾಗ ಮೋದಿ ಪರ ಘೋಷಣೆಗಳನ್ನು ಅನೇಕರು ಕೂಗಿದರು. ಈ ವಿಚಾರದ ಬಗ್ಗೆಯೂ ರಾಹುಲ್ ಗಾಂಧಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದಾರೆ.

ಲೋಕಸಭಾ ಚುನಾವಣೆ ಮೈತ್ರಿ ವಿಚಾರ

ಲೋಕಸಭಾ ಚುನಾವಣೆ ಮೈತ್ರಿ ವಿಚಾರ

ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಬಗ್ಗೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 8 ಕ್ಷೇತ್ರದಲ್ಲಿ ಜೆಡಿಎಸ್‌ ಸ್ಪರ್ಧಿಸಲಿವೆ.

ಚುನಾವಣಾ ಸಿದ್ಧತೆ

ಚುನಾವಣಾ ಸಿದ್ಧತೆ

ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ಚುನಾವಣೆ ನಡೆಯಲಿದೆ. ಪ್ರಚಾರ, ಚುನಾವಣಾ ಸಿದ್ಧತೆಗಳ ಕುರಿತು ರಾಹುಲ್ ಗಾಂಧಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

English summary
AICC president secret talk with Former Chief Minister Siddaramaiah in Bengaluru. Rahul Gandhi on March 18 visited Karnataka and he addressed rally in Kalaburagi, met the software engineer's in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X