Rahul Gandhi: ಬಸವ ಜಯಂತಿಯಂದು ಲಿಂಗಾಯತ ಮಠಕ್ಕೆ ರಾಹುಲ್ ಗಾಂಧಿ ಭೇಟಿ- ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು, ಏಪ್ರಿಲ್ 22: ಪಕ್ಷದ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಎರಡು ದಿನಗಳ ಭೇಟಿಗಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 23 ರಂದು ಕರ್ನಾಟಕಕ್ಕೆ ಬರಲಿದ್ದಾರೆ. ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅವರು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರಚಾರ ಮಾಡುವ ನಿರೀಕ್ಷೆಯಿದೆ.
ಏಪ್ರಿಲ್ 16 ಮತ್ತು 17 ರಂದು ಕೋಲಾರ ಮತ್ತು ಬೀದರ್ನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಎರಡು ಜಿಲ್ಲೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಿದರು.

ಕಾಂಗ್ರೆಸ್ ಪಕ್ಷದ ಪ್ರಕಾರ, ರಾಹುಲ್ ಗಾಂಧಿ ಭಾನುವಾರ ಬೆಳಿಗ್ಗೆ 10:30 ರ ಸುಮಾರಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ.
ಕೂಡಲಸಂಗಮವು ಲಿಂಗಾಯತ ಸಮುದಾಯಕ್ಕೆ ಸೇರಿದ ಯಾತ್ರಾರ್ಥಿಗಳಿಗೆ ಪ್ರಮುಖ ಕೇಂದ್ರವಾಗಿದೆ. ಏಪ್ರಿಲ್ 23 ರಂದು ನಡೆಯಲಿರುವ ಬಸವ ಜಯಂತಿ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಲಿಂಗಾಯತ ಮಠಕ್ಕೆ ಭೇಟಿ ನೀಡಲಿದ್ದಾರೆ.
ಬಿಜೆಪಿ ಲಿಂಗಾಯತ ನಾಯಕರನ್ನು ಬದಿಗೊತ್ತುತ್ತಿದೆ ಎಂಬ ನಿರೂಪಣೆಯನ್ನು ಕಟ್ಟಿಕೊಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಕೂಡಲಸಂಗಮಕ್ಕೆ ರಾಹುಲ್ ಭೇಟಿಯ ಮೂಲಕ ಸಮುದಾಯವನ್ನು ಓಲೈಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ.
ಕೂಡಲಸಂಗಮ ಮಠದಲ್ಲಿ ಬಸವ ಜಯಂತಿ ಆಚರಣೆಯ ಅಂಗವಾಗಿ ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳಲ್ಲಿ ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಸಂಜೆ 4.35ಕ್ಕೆ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಪ್ರಯಾಣ ಬೆಳೆಸಿ ವಿಜಯಪುರ ತಲುಪಿ ರೋಡ್ ಶೋ ನಡೆಸಲಿದ್ದಾರೆ. ಭಾನುವಾರ ವಿಜಯಪುರದ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಕಾಂಗ್ರೆಸ್ ಇತ್ತೀಚೆಗೆ ಇಬ್ಬರು ಬಿಜೆಪಿ ಲಿಂಗಾಯತ ನಾಯಕರನ್ನು ಸೆಳೆಯುವಲ್ಲಿ ಯಶಸ್ವಿ ಆಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದ ಬಳಿಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿತ್ತು. ಅವರು ಶನಿವಾರ ದೆಹಲಿಯ ತುಘಲಕ್ ಲೇನ್ನಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ಸಹ ಖಾಲಿ ಮಾಡಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications