ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿಂದ ದೆಹಲಿಗೆ ವರ್ಗಾವಣೆಗೊಂಡ ಕಾಂಗ್ರೆಸ್‌ನ ಸಚಿವ ಸ್ಥಾನ ಕಿತ್ತಾಟ

By Manjunatha
|
Google Oneindia Kannada News

ಬೆಂಗಳೂರು, ಜೂನ್ 04: ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಕಿತ್ತಾಟಗಳು ಇಂದು ಅಧಿಕೃತವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದೆ ಬರಲಿವೆ.

ವಿದೇಶದಿಂದ ವಾಪಸ್ಸಾಗಿರುವ ರಾಹುಲ್ ಗಾಂಧಿ ಅವರೊಂದಿಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಗುಲಾಂ ನಬಿ ಆಜಾದ್ ಹಾಗೂ ಇನ್ನಿತರ ನಾಯರುಗಳು ಮಾತುಕತೆ ನಡೆಸಲಿದ್ದು, ಅಂತಿಮ ಪಟ್ಟಿಯು ಇಂದು ಅಥವಾ ನಾಳೆ ಸಿದ್ದಗೊಳ್ಳಲಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ಹೊಸ ಹೆಸರುಗಳು ಸೇರ್ಪಡೆ!ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ಹೊಸ ಹೆಸರುಗಳು ಸೇರ್ಪಡೆ!

ಕಾಂಗ್ರೆಸ್‌ಗೆ 22 ಖಾತೆಗಳು ದೊರೆತಿದ್ದು, ವೇಣುಗೋಪಾಲ್ ಈಗಾಗಲೇ ಮೂರು ಮಾದರಿ ಪಟ್ಟಿಗಳನ್ನು ತಯಾರು ಮಾಡಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿದ ಬಳಿಕ ಪಟ್ಟಿ ಅಂತಿಮಗೊಳ್ಳಲಿದೆ.

Rahul Gandhi today discussing about Karnatakas portfolio distribution

ಪ್ರದೇಶ, ಜಾತಿ, ಸಾಮರ್ಥ್ಯ, ಜನಬಲಗಳನ್ನು ಗಣನೆಗೆ ತೆಗೆದುಕೊಂಡು ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗಿದ್ದು, ಭಾರಿ ಪೈಪೋಟಿ ಇರುವ ಕೆಲವು ಖಾತೆಗಳನ್ನು ಬಾಕಿ ಉಳಿಸಿಕೊಳ್ಳುವ ಸಾಧ್ಯತೆಯೂ ಇದೆ.

ಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯ ಅವರೇ ಸೂಪರ್ ಸಿಎಂಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯ ಅವರೇ ಸೂಪರ್ ಸಿಎಂ

ನವ ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆಗೆ ಚರ್ಚೆ ನಡೆಯಲಿದ್ದು, ಇಂದು ಸಂಜೆ ಅಥವಾ ನಾಳೆ ಪಟ್ಟಿ ಅಂತಿಮಗೊಳ್ಳಲಿದೆ. ಬುಧವಾರ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

English summary
AICC president Rahul Gandhi today discussing about Karnataka current politics and portfolio distribution. There are so many aspirants for minister post. Today or tomorrow final list will be approved.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X