ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೀದರ್‌ನಿಂದ ರಾಹುಲ್ ಗಾಂಧಿ ಸ್ಪರ್ಧೆ : ಪರಮೇಶ್ವರ ಹೇಳಿದ್ದೇನು?

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 14 : 'ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಬೀದರ್ ಕ್ಷೇತ್ರದಿಂದ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ' ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಪರಮೇಶ್ವರ ಅವರು, 'ರಾಹುಲ್ ಗಾಂಧಿ ಅವರು ಬೀದರ್‌ನಿಂದ ಸ್ಪರ್ಧೆ ಮಾಡುವುದಿಲ್ಲ. ಅಂತಹ ಯಾವುದೇ ಚರ್ಚೆ ಪಕ್ಷದ ಮಟ್ಟದಲ್ಲಿಯೂ ನಡೆದಿಲ್ಲ' ಎಂದು ಹೇಳಿದರು.

ಬೀದರ್‌ನಿಂದ ಲೋಕಸಭೆಗೆ ರಾಹುಲ್ ಗಾಂಧಿ ಸ್ಪರ್ಧೆ?ಬೀದರ್‌ನಿಂದ ಲೋಕಸಭೆಗೆ ರಾಹುಲ್ ಗಾಂಧಿ ಸ್ಪರ್ಧೆ?

'ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು, ಬೀದರ್‌ನಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದರೆ ಗೆಲ್ಲಿಸುತ್ತೇವೆ ಎಂದು ಹೇಳಿದ್ದರು. ಆದರೆ, ಅದು ಅವರ ವಯಕ್ತಿಕ ಅಭಿಪ್ರಾಯವಾಗಿದೆ. ಸ್ಪರ್ಧೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ' ಎಂದರು.

Rahul Gandhi will not contest from Bidar says Parameshwara

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬೀದರ್‌ನಲ್ಲಿ ಸೋಮವಾರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿ ಜೊತೆಗೆ ಬೀದರ್‌ನಿಂದಲೂ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

ಲೋಕಸಭಾ ಚುನಾವಣೆ: ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿಗಳುಲೋಕಸಭಾ ಚುನಾವಣೆ: ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿಗಳು

ಬಿಜೆಪಿಯ ಭಗವಂತ ಖೂಬಾ ಬೀದರ್ ಕ್ಷೇತ್ರದ ಹಾಲಿ ಸಂಸದರು. 2014ರ ಚುನಾವಣೆಯಲ್ಲಿ 459290 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಸ್ಪರ್ಧೆ ಮಾಡಿದ್ದರು.

English summary
Karnataka Deputy Chief Minister Dr.G.Parameshwara said that, AICC president Rahul Gandhi will not contest for Lok Sabha Elections 2019 from Bidar constituency, Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X